AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
ಪುದುಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ನೂತನ ಲೆಫ್ಟಿನೆಂಟ್​ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
Lakshmi Hegde
|

Updated on:Feb 18, 2021 | 7:08 PM

Share

ಪುದುಚೇರಿ: ಸದಸ್ಯ ಬಲ 14ಕ್ಕೆ ಕುಸಿದು, ಬಹುಮತ ಕಳೆದುಕೊಂಡಿರುವ ಆಡಳಿತರೂಢ ಕಾಂಗ್ರೆಸ್​ ಸರ್ಕಾರಕ್ಕೆ ತನ್ನ ಸದಸ್ಯ ಬಲ ಸಾಬೀತು ಪಡಿಸಲು ಸೋಮವಾರದವರೆಗೆ ಅವಕಾಶ ನೀಡಲಾಗಿದೆ. ಸೋಮವಾರ (ಫೆ.22) ಕಾಂಗ್ರೆಸ್​ ಸರ್ಕಾರ ಬಹುಮತ ಸಾಬೀತುಪಡಿಸಬೇಕು ಎಂದು ಈಗಿನ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್ ತಿಳಿಸಿದ್ದಾರೆ.

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ. ಈ ಮಧ್ಯೆ ಆಡಳಿತ ರೂಢ ಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 14ಕ್ಕೆ ಕುಸಿದಿದೆ. ಪುದುಚೇರಿ ವಿಧಾನಸಭೆ 30 ಸದಸ್ಯ ಬಲ ಹೊಂದಿದ್ದು, ಅಧಿಕಾರ ಹಿಡಿಯಲು ಯಾವುದೇ ಪಕ್ಷಕ್ಕೆ 16 ಸದಸ್ಯರ ಬಲ ಇರಬೇಕು. ಕಾಂಗ್ರೆಸ್​ 18 ಶಾಸಕರ ಬಲದೊಂದಿಗೆ ಪುದುಚೇರಿ ಆಡಳಿತ ಹಿಡಿದಿತ್ತು. ಆದರೆ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್​ ಆಗಿದ್ದ ಕಿರಣ್​ ಬೇಡಿಯವರ ನಡುವಿನ ವಿವಾದದಿಂದ ಈಗ ಅಲ್ಲಿನ ರಾಜಕೀಯದಲ್ಲಿ ಏಕಾಏಕಿ ಬೆಳವಣಿಗೆಗಳು ನಡೆದಿವೆ. ನಾಲ್ವರು ರಾಜೀನಾಮೆ ನೀಡಿದ್ದರೂ, ನಮಗೆ ಸಂಖ್ಯಾಬಲ ಇದೆ ಎಂದು ಮುಖ್ಯಮಂತ್ರಿ ನಾರಾಯಣಸ್ವಾಮಿ ವಾದಿಸುತ್ತಿದ್ದಾರೆ.

ಆದರೆ ನೂತನ ಲೆಫ್ಟಿನೆಂಟ್ ಗವರ್ನರ್​, ಕಾಂಗ್ರೆಸ್​ ಸರ್ಕಾರ ಮುಂದುವರಿಯಬೇಕು ಎಂದರೆ ಅದಕ್ಕೆ ಸಾಕಷ್ಟು ಸದಸ್ಯರ ಬಲ ಇದೆ ಎಂಬುದು ಸಾಬೀತಾಗಾಬೇಕು. ಸೋಮವಾರ ಫ್ಲೋರ್​ ಟೆಸ್ಟ್ ನಡೆಯಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: Puducherry Politics | ಪುದುಚೇರಿಯ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿಂದಿದೆ ಬಿಜೆಪಿ ಮಹತ್ವಾಕಾಂಕ್ಷೆ

Published On - 6:59 pm, Thu, 18 February 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ