AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
ಪುದುಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ನೂತನ ಲೆಫ್ಟಿನೆಂಟ್​ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
Lakshmi Hegde
|

Updated on:Feb 18, 2021 | 7:08 PM

Share

ಪುದುಚೇರಿ: ಸದಸ್ಯ ಬಲ 14ಕ್ಕೆ ಕುಸಿದು, ಬಹುಮತ ಕಳೆದುಕೊಂಡಿರುವ ಆಡಳಿತರೂಢ ಕಾಂಗ್ರೆಸ್​ ಸರ್ಕಾರಕ್ಕೆ ತನ್ನ ಸದಸ್ಯ ಬಲ ಸಾಬೀತು ಪಡಿಸಲು ಸೋಮವಾರದವರೆಗೆ ಅವಕಾಶ ನೀಡಲಾಗಿದೆ. ಸೋಮವಾರ (ಫೆ.22) ಕಾಂಗ್ರೆಸ್​ ಸರ್ಕಾರ ಬಹುಮತ ಸಾಬೀತುಪಡಿಸಬೇಕು ಎಂದು ಈಗಿನ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್ ತಿಳಿಸಿದ್ದಾರೆ.

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ. ಈ ಮಧ್ಯೆ ಆಡಳಿತ ರೂಢ ಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 14ಕ್ಕೆ ಕುಸಿದಿದೆ. ಪುದುಚೇರಿ ವಿಧಾನಸಭೆ 30 ಸದಸ್ಯ ಬಲ ಹೊಂದಿದ್ದು, ಅಧಿಕಾರ ಹಿಡಿಯಲು ಯಾವುದೇ ಪಕ್ಷಕ್ಕೆ 16 ಸದಸ್ಯರ ಬಲ ಇರಬೇಕು. ಕಾಂಗ್ರೆಸ್​ 18 ಶಾಸಕರ ಬಲದೊಂದಿಗೆ ಪುದುಚೇರಿ ಆಡಳಿತ ಹಿಡಿದಿತ್ತು. ಆದರೆ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್​ ಆಗಿದ್ದ ಕಿರಣ್​ ಬೇಡಿಯವರ ನಡುವಿನ ವಿವಾದದಿಂದ ಈಗ ಅಲ್ಲಿನ ರಾಜಕೀಯದಲ್ಲಿ ಏಕಾಏಕಿ ಬೆಳವಣಿಗೆಗಳು ನಡೆದಿವೆ. ನಾಲ್ವರು ರಾಜೀನಾಮೆ ನೀಡಿದ್ದರೂ, ನಮಗೆ ಸಂಖ್ಯಾಬಲ ಇದೆ ಎಂದು ಮುಖ್ಯಮಂತ್ರಿ ನಾರಾಯಣಸ್ವಾಮಿ ವಾದಿಸುತ್ತಿದ್ದಾರೆ.

ಆದರೆ ನೂತನ ಲೆಫ್ಟಿನೆಂಟ್ ಗವರ್ನರ್​, ಕಾಂಗ್ರೆಸ್​ ಸರ್ಕಾರ ಮುಂದುವರಿಯಬೇಕು ಎಂದರೆ ಅದಕ್ಕೆ ಸಾಕಷ್ಟು ಸದಸ್ಯರ ಬಲ ಇದೆ ಎಂಬುದು ಸಾಬೀತಾಗಾಬೇಕು. ಸೋಮವಾರ ಫ್ಲೋರ್​ ಟೆಸ್ಟ್ ನಡೆಯಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: Puducherry Politics | ಪುದುಚೇರಿಯ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿಂದಿದೆ ಬಿಜೆಪಿ ಮಹತ್ವಾಕಾಂಕ್ಷೆ

Published On - 6:59 pm, Thu, 18 February 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ