AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ.

ಪುದುಚೇರಿ ರಾಜಕಾರಣ: ಸೋಮವಾರ ಬಹುಮತ ಸಾಬೀತು ಮಾಡುವಂತೆ ಕಾಂಗ್ರೆಸ್​ಗೆ ಸೂಚಿಸಿದ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
ಪುದುಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ನೂತನ ಲೆಫ್ಟಿನೆಂಟ್​ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್
Lakshmi Hegde
|

Updated on:Feb 18, 2021 | 7:08 PM

Share

ಪುದುಚೇರಿ: ಸದಸ್ಯ ಬಲ 14ಕ್ಕೆ ಕುಸಿದು, ಬಹುಮತ ಕಳೆದುಕೊಂಡಿರುವ ಆಡಳಿತರೂಢ ಕಾಂಗ್ರೆಸ್​ ಸರ್ಕಾರಕ್ಕೆ ತನ್ನ ಸದಸ್ಯ ಬಲ ಸಾಬೀತು ಪಡಿಸಲು ಸೋಮವಾರದವರೆಗೆ ಅವಕಾಶ ನೀಡಲಾಗಿದೆ. ಸೋಮವಾರ (ಫೆ.22) ಕಾಂಗ್ರೆಸ್​ ಸರ್ಕಾರ ಬಹುಮತ ಸಾಬೀತುಪಡಿಸಬೇಕು ಎಂದು ಈಗಿನ ಲೆಫ್ಟಿನೆಂಟ್ ಗವರ್ನರ್​ ತಮಿಳಿಸೈ ಸೌಂದರ್ಯರಾಜನ್ ತಿಳಿಸಿದ್ದಾರೆ.

ಕಿರಣ್​ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಪದಚ್ಯುತಿಗೊಳಿಸಿದ ಬಳಿಕ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ಯರಾಜನ್ ಅವರನ್ನೇ ಪ್ರಭಾರ ಲೆಫ್ಟಿನೆಂಟ್​ ಗವರ್ನರ್​ರನ್ನಾಗಿ ಇಲ್ಲಿಗೆ ನೇಮಕ ಮಾಡಲಾಗಿದೆ. ಈ ಮಧ್ಯೆ ಆಡಳಿತ ರೂಢ ಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 14ಕ್ಕೆ ಕುಸಿದಿದೆ. ಪುದುಚೇರಿ ವಿಧಾನಸಭೆ 30 ಸದಸ್ಯ ಬಲ ಹೊಂದಿದ್ದು, ಅಧಿಕಾರ ಹಿಡಿಯಲು ಯಾವುದೇ ಪಕ್ಷಕ್ಕೆ 16 ಸದಸ್ಯರ ಬಲ ಇರಬೇಕು. ಕಾಂಗ್ರೆಸ್​ 18 ಶಾಸಕರ ಬಲದೊಂದಿಗೆ ಪುದುಚೇರಿ ಆಡಳಿತ ಹಿಡಿದಿತ್ತು. ಆದರೆ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್​ ಆಗಿದ್ದ ಕಿರಣ್​ ಬೇಡಿಯವರ ನಡುವಿನ ವಿವಾದದಿಂದ ಈಗ ಅಲ್ಲಿನ ರಾಜಕೀಯದಲ್ಲಿ ಏಕಾಏಕಿ ಬೆಳವಣಿಗೆಗಳು ನಡೆದಿವೆ. ನಾಲ್ವರು ರಾಜೀನಾಮೆ ನೀಡಿದ್ದರೂ, ನಮಗೆ ಸಂಖ್ಯಾಬಲ ಇದೆ ಎಂದು ಮುಖ್ಯಮಂತ್ರಿ ನಾರಾಯಣಸ್ವಾಮಿ ವಾದಿಸುತ್ತಿದ್ದಾರೆ.

ಆದರೆ ನೂತನ ಲೆಫ್ಟಿನೆಂಟ್ ಗವರ್ನರ್​, ಕಾಂಗ್ರೆಸ್​ ಸರ್ಕಾರ ಮುಂದುವರಿಯಬೇಕು ಎಂದರೆ ಅದಕ್ಕೆ ಸಾಕಷ್ಟು ಸದಸ್ಯರ ಬಲ ಇದೆ ಎಂಬುದು ಸಾಬೀತಾಗಾಬೇಕು. ಸೋಮವಾರ ಫ್ಲೋರ್​ ಟೆಸ್ಟ್ ನಡೆಯಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: Puducherry Politics | ಪುದುಚೇರಿಯ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿಂದಿದೆ ಬಿಜೆಪಿ ಮಹತ್ವಾಕಾಂಕ್ಷೆ

Published On - 6:59 pm, Thu, 18 February 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ