AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puducherry: ಪುದುಚೇರಿಯ ಪ್ರಸಿದ್ಧ ಮನಕುಲ ವಿನಾಯಕ ದೇವಾಲಯದ ಲಕ್ಷ್ಮೀ ಆನೆ ಹೃದಯಾಘಾತದಿಂದ ಸಾವು

ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆಯೊಂದು ವಿಹರಿಸುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಬುಧವಾರ ಮೃತಪಟ್ಟಿದೆ. ಲಕ್ಷ್ಮಿ ಎಂಬ ಹೆಸರಿನ ಆನೆಯನ್ನು ಕೈಗಾರಿಕೋದ್ಯಮಿಯೊಬ್ಬರು 1995ರಲ್ಲಿ ದೇವಸ್ಥಾನಕ್ಕೆ ದಾನ ಮಾಡಿದರು ಮತ್ತು ಈ ಆನೆಯ ಆಶೀರ್ವಾದವನ್ನು ಪಡೆಯಲು ವಿದೇಶಿ ಭಕ್ತರು ಕೂಡ ಬರುತ್ತಿದ್ದರು.

Puducherry: ಪುದುಚೇರಿಯ ಪ್ರಸಿದ್ಧ ಮನಕುಲ ವಿನಾಯಕ ದೇವಾಲಯದ ಲಕ್ಷ್ಮೀ ಆನೆ ಹೃದಯಾಘಾತದಿಂದ ಸಾವು
Puducherry Lakshmi elephant
TV9 Web
| Edited By: |

Updated on: Nov 30, 2022 | 12:19 PM

Share

ಪುದುಚೇರಿ; ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕ ದೇಗುಲಕ್ಕೆ ಸೇರಿದ್ದ ಆನೆಯೊಂದು ವಿಹರಿಸುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಬುಧವಾರ ಮೃತಪಟ್ಟಿದೆ. ಲಕ್ಷ್ಮಿ ಎಂಬ ಹೆಸರಿನ ಆನೆಯನ್ನು ಕೈಗಾರಿಕೋದ್ಯಮಿಯೊಬ್ಬರು 1995ರಲ್ಲಿ ದೇವಸ್ಥಾನಕ್ಕೆ ದಾನ ಮಾಡಿದರು ಮತ್ತು ಈ ಆನೆಯ ಆಶೀರ್ವಾದವನ್ನು ಪಡೆಯಲು ವಿದೇಶಿ ಭಕ್ತರು ಕೂಡ ಬರುತ್ತಿದ್ದರು.

ಆನೆಯನ್ನು ನೋಡಿಕೊಳ್ಳುತ್ತಿದ್ದ ಸರ್ಕಾರದ ಪಶುವೈದ್ಯರು ಸ್ಥಳದಲ್ಲಿ ಹಾಜರಿದ್ದು, ಆನೆ ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ಹೇಳಿದೆ. ಆನೆಯ ಆರೋಗ್ಯ ಉತ್ತಮವಾಗಿತ್ತು, ಯಾವುದೇ ತೊಂದರೆ ಇರಲಿಲ್ಲ ಎಂದು ಅವರು ಪಿಟಿಐಗೆ ತಿಳಿಸಿದರು. ಸರ್ಕಾರಿ ಕಾಲೇಜೊಂದರ ಸಮೀಪದ ರಸ್ತೆಯಲ್ಲಿ ಆನೆ ಕುಸಿದು ಮೃತಪಟ್ಟಿದ್ದಾರೆ.

ಇದನ್ನು ಓದಿ: Silent Heart Attack: ಸೈಲೆಂಟ್ ಹಾರ್ಟ್​​ ಅಟ್ಯಾಕ್​ ಎಂದರೇನು? ಅದರ ಸಾಮಾನ್ಯ ಲಕ್ಷಣಗಳೇನು?

ಬಳಿಕ ಮುತ್ಯಾಲಪೇಟೆಯಲ್ಲಿರುವ ದೇವಸ್ಥಾನಕ್ಕೆ ಸೇರಿದ ವಿಸ್ತಾರವಾದ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರನ್ ತಿಳಿಸಿದ್ದಾರೆ. ಆನೆಯ ಸಾವಿನ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅನೇಕ ಕಡೆಗಳಿಂದ ಜನರು ಆನೆ ಕೊನೆಯ ದರ್ಶನ ಪಡೆಯಲು ಆಗಮಿಸಿದ್ದಾರೆ.

ಕ್ರೇನ್ ಸಹಾಯದಿಂದ ಆನೆಯನ್ನು ಟ್ರಕ್‌ ಮೂಲಕ ಅಂತಿಮ ಯಾತ್ರೆಯಲ್ಲಿ ಸಾಗಿಸಲು ಮುಂದಾಗಿದ್ದಾರೆ. ಇದರ ಜೊತೆಗೆ ಲಕ್ಷ್ಮೀ ಆನೆಯ ದರ್ಶನ ಪಡೆಯಲು ಬಂದ ಜನರನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಯಿತು. ಮನಕುಲ ವಿನಾಯಕ ದೇವಸ್ಥಾನವು ಪುದುಚೇರಿಯಲ್ಲಿ ಆನೆಯನ್ನು ಹೊಂದಿರುವ ಏಕೈಕ ದೇವಾಲಯವಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ