Sign In

By signing in or creating an account, you agree with Associated Broadcasting Company's Terms & Conditions and Privacy Policy.

Puducherry Politics | ಪುದುಚೇರಿಯ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿಂದಿದೆ ಬಿಜೆಪಿ ಮಹತ್ವಾಕಾಂಕ್ಷೆ

ರಾಜ್ಯಪಾಲರಾಗಿದ್ದ ಕಿರಣ್ ಬೇಡಿ ಅಧಿಕಾರದಿಂದ ಕೆಳಗಿಳಿಯುವ ಮುಂಚೆ, ‘ಜನರು ಒಳ್ಳೆಯ ಸರಕಾರವನ್ನು ಆಯ್ಕೆ ಮಾಡಬೇಕು’ ಎಂಬ ಪ್ರಕಟಣೆ ನೀಡಿರುವುದನ್ನೂ ಈ ಹಿನ್ನೆಲೆಯಲ್ಲಿಯೇ ವ್ಯಾಖ್ಯಾನಿಸಲಾಗುತ್ತಿದೆ.

Puducherry Politics | ಪುದುಚೇರಿಯ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿಂದಿದೆ ಬಿಜೆಪಿ ಮಹತ್ವಾಕಾಂಕ್ಷೆ
ಕಿರಣ್ ಬೇಡಿ ಮತ್ತು ನಾರಾಯಣಸ್ವಾಮಿ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 18, 2021 | 6:37 PM

ಕಳೆದ ಕೆಲ ವರ್ಷಗಳಿಂದ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಮತ್ತು ರಾಜ್ಯಪಾಲರಾದ ಕಿರಣ್ ಬೇಡಿ ಮಧ್ಯ ನಡೆಯುತ್ತಿದ್ದ ಶೀತಲಸಮರ, ಭಿನ್ನಾಭಿಪ್ರಾಯ ತಾರಕ್ಕೇರಿದೆ. ಒಂದೆಡೆ ರಾಜ್ಯಪಾಲೆಯಾಗಿದ್ದ ಕಿರಣ್ ಬೇಡಿ ಅವರನ್ನು ರಾಜ್ಯಪಾಲರ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ. ಇನ್ನೊಂದೆಡೆ, ಮುಖ್ಯಮಂತ್ರಿ ನಾರಾಯಣ ಸ್ವಾಮಿ ಎದುರು ರಾಜಕೀಯ ಸವಾಲುಗಳು ಕಾಣಿಸಿಕೊಂಡಿವೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಇನ್ನು ಎರಡು ತಿಂಗಳಲ್ಲಿ ಚುನಾವಣೆ ಎದುರಿಸಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ.

ಕೇಂದ್ರಾಡಳಿತ ಪ್ರದೇಶ ಪಾಂಡಿಚೆರಿ ರಾಜ್ಯಪಾಲೆ ಕಿರಣ್ ಬೇಡಿ ಜೊತೆ ಆರಂಭದಿಂದಲೂ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರ ಆಡಳಿತಾತ್ಮಕ ಸಂಬಂಧ ಸರಿಯಿರಲಿಲ್ಲ. ಇದೀಗ ಕಿರಣ್​ಬೇಡಿಯನ್ನು ರಾಜಪಾಲರ ಸ್ಥಾನದಿಂದ ಪದಚ್ಯುತಿಗೊಳಿಸಿರುವ ರಾಷ್ಟ್ರಪತಿಗಳು ತೆಲಂಗಾಣ ರಾಜ್ಯಪಾಲರಿಗೆ ಪುದುಚೇರಿಯ ಹೆಚ್ಚುವರಿ ಹೊಣೆಗಾರಿಕೆ ನೀಡಿದ್ದಾರೆ. ಇಬ್ಬರು ಕಾಂಗ್ರೆಸ್ ಶಾಸಕರು ಮತ್ತು ಇಬ್ಬರು ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದರಿಂದ 30 ಸದಸ್ಯ ಬಲದ ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 14ಕ್ಕೆ ಕುಸಿದಿದೆ. ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್​ ಕಸರತ್ತು ಆರಂಭಿಸಿದೆ. ಸ್ವತಃ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ನಿನ್ನೆ (ಫೆ.17) ಪುದುಚೇರಿಗೆ ದೌಡಾಯಿಸಿದ್ದರು.

30 ಸದಸ್ಯ ಬಲದ ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್ 18 ಸದಸ್ಯ ಬಲದೊಂದಿಗೆ ಅಧಿಕಾರ ಹಿಡಿದಿತ್ತು. ನಾಲ್ವರು ರಾಜೀನಾಮೆ ನೀಡಿರುವುದರಿಂದ ಸದಸ್ಯ ಬಲ 14ಕ್ಕೆ ಕುಸಿದಿದೆ. ಅಧಿಕಾರದಲ್ಲಿ ಉಳಿಯಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ವಿಧಾನಸಭೆಯ ಅಧಿಕಾರ ಅವಧಿ ಕೇವಲ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ ನಡೆದಿರುವ ಈ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ ಹವಣಿಸುತ್ತಿದೆ. ಅವಧಿಪೂರ್ವ ಚುನಾವಣೆ ನಡೆಸಿ ಪುದುಚೇರಿಯಲ್ಲಿಯೂ ಅಧಿಕಾರಕ್ಕೆ ಬರುವುದು ಬಿಜೆಪಿಯ ಉದ್ದೇಶ.

ರಾಜ್ಯಪಾಲರಾಗಿದ್ದ ಕಿರಣ್ ಬೇಡಿ ಅಧಿಕಾರದಿಂದ ಕೆಳಗಿಳಿಯುವ ಮುಂಚೆ, ‘ಜನರು ಒಳ್ಳೆಯ ತೀರ್ಮಾನ ತೆಗೆದುಕೊಳ್ಳಬೇಕು, ಒಳ್ಳೆಯ ಸರಕಾರವನ್ನು ಆಯ್ಕೆ ಮಾಡಬೇಕು’ ಎಂಬ ಪ್ರಕಟಣೆ ನೀಡಿರುವುದನ್ನೂ ಈ ಹಿನ್ನೆಲೆಯಲ್ಲಿಯೇ ವ್ಯಾಖ್ಯಾನಿಸಲಾಗುತ್ತಿದೆ. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರ್ಯರಾಜನ್ ಅವರಿಗೆ ಇದೀಗ ಪುದುಚೇರಿ ರಾಜ್ಯಪಾಲರ ಪ್ರಭಾರ ವಹಿಸಲಾಗಿದೆ. ಸದ್ಯದ ಪರಿಸ್ಥಿತಿ ನಿಭಾಯಿಸುವ ಹಾಗೂ ಚುನಾವಣೆ ನಡೆಸುವ ಜವಾಬ್ದಾರಿ ತೆಲಂಗಾಣ ರಾಜ್ಯಪಾಲರ ಹೆಗಲೇರಿದೆ.

ಇದನ್ನೂ ಓದಿ: ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್​ ಬೇಡಿ ಪದಚ್ಯುತಿ

Published On - 6:27 pm, Thu, 18 February 21

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?