AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puducherry Rain: ಪುದುಚೆರಿಯಲ್ಲಿ ಭಾರೀ ಮಳೆ; ಇನ್ನೆರಡು ದಿನ ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆಯಿಂದಾಗಿ ಇಂದು ಪುದುಚೇರಿ ಮತ್ತು ಕಾರೈಕಲ್​ನಲ್ಲಿ ರಜೆ ಘೋಷಿಸಲಾಗಿದೆ. ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Puducherry Rain: ಪುದುಚೆರಿಯಲ್ಲಿ ಭಾರೀ ಮಳೆ; ಇನ್ನೆರಡು ದಿನ ಶಾಲೆಗಳಿಗೆ ರಜೆ ಘೋಷಣೆ
ಮಳೆ
TV9 Web
| Edited By: |

Updated on: Nov 04, 2022 | 8:13 AM

Share

ಪುದುಚೆರಿ: ತಮಿಳುನಾಡಿನಲ್ಲಿ (Tamil Nadu Rains) ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಅದರ ಪರಿಣಾಮ ಬೆಂಗಳೂರಿನ ಮೇಲೂ ಉಂಟಾಗಿದೆ. ಪುದುಚೆರಿಯಲ್ಲಿ (Puducherry) ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಮತ್ತು ಬಹುತೇಕ ಎಲ್ಲಾ ರಸ್ತೆಗಳು ಜಲಾವೃತವಾಗಿದ್ದು, ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಶಾಲಾ ಶಿಕ್ಷಣ ನಿರ್ದೇಶನಾಲಯವು ಪುದುಚೆರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿಯಾಗಿ ನಿರ್ವಹಿಸಲ್ಪಡುವ ಶಾಲೆಗಳಿಗೆ ಇಂದು (ಶುಕ್ರವಾರ) ರಜೆ ಘೋಷಿಸಿದೆ.

ಭಾರೀ ಮಳೆಯಿಂದಾಗಿ ಇಂದು ಪುದುಚೇರಿ ಮತ್ತು ಕಾರೈಕಲ್​ನಲ್ಲಿ ರಜೆ ಘೋಷಿಸಲಾಗಿದೆ. ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿಕ್ಷಣ ಸಚಿವ ಎ ನಮಸ್ಶಿವಾಯಂ ಅವರ ನಿರ್ದೇಶನದಂತೆ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.

ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಗುರುವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಹಲವಾರು ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು. ಭಾರೀ ಮಳೆಯಿಂದಾಗಿ ಇಂದು ಕೂಡ ಕಡಲೂರು, ಮೈಲಾಡುತುರೈ ಮತ್ತು ವಿಲ್ಲುಪುರಂ ಸೇರಿದಂತೆ ತಮಿಳುನಾಡಿನ 3 ಜಿಲ್ಲೆಗಳಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನವೆಂಬರ್ 6ರವರೆಗೆ ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rain: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ 3 ದಿನ ಗುಡುಗು ಸಹಿತ ಮಳೆ; ಬೆಂಗಳೂರಿನ ಹವಾಮಾನ ಹೀಗಿದೆ

ತಮಿಳುನಾಡಿನ ಕಡಲೂರು, ಅರಿಯಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನೀಲಗಿರಿ ಮತ್ತು ಕರೂರ್ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚೆನ್ನೈ ಹಾಗೂ ಅದರ ನೆರೆಯ ಜಿಲ್ಲೆಗಳು ಮತ್ತು ತಮಿಳುನಾಡಿನ ಇತರ ಪ್ರದೇಶಗಳಲ್ಲಿ ರಾತ್ರಿಯ ವೇಳೆ ಭಾರೀ ಮಳೆ ಸುರಿದಿದೆ. ಮಳೆಯಿಂದಾಗಿ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪೇಟ್, ನಾಗಪಟ್ಟಣಂ, ತಂಜಾವೂರು ಮತ್ತು ತಿರುವರೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.

ಇಂದು ನೀಲಗಿರಿ, ಕೊಯಮತ್ತೂರು, ತಿರುಪ್ಪೂರ್, ದಿಂಡಿಗಲ್ ಮತ್ತು ಥೇಣಿಯಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಚೆನ್ನೈನ ತೊಂಡಿಯಾರ್‌ಪೇಟ್, ವೆಲಚೇರಿ, ವಂದಲ್ಲೂರ್, ವಾಲಾಜಾಬಾದ್, ನೆಮಿಲಿ ಮತ್ತು ಅರಕ್ಕೋಣಂ ಪ್ರದೇಶಗಳಿಗೂ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ