AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾ ದಾಳಿಯ ಹುತಾತ್ಮ ಸೈನಿಕ ಧೌಂಡಿಯಾಲ್ ಪತ್ನಿ ನಿತಿಕಾ ಕೌಲ್ ಭಾರತೀಯ ಸೇನೆಗೆ ಸೇರ್ಪಡೆ

ಮೇಜರ್ ಧೌಂಡಿಯಾಲ್ ಅವರ ನಿಧನಕ್ಕೆ ಕೇವಲ 9 ತಿಂಗಳ ಮೊದಲು ನಿತಿಕಾ ಕೌಲ್​ರನ್ನು ವಿವಾಹವಾಗಿದ್ದರು. ಇದೀಗ ಅವರ ಪತ್ನಿ ಭಾರತೀಯ ಸೇನೆಗೆ ಸೇರುವಂಥ ಮತ್ತು ತನ್ನ ಪತಿಯ ಕರ್ತವ್ಯಕ್ಕೆ ಹೆಮ್ಮೆ ಪಡುವಂಥ ಸ್ಪೂರ್ತಿದಾಯಕ ನಿರ್ಧಾರವನ್ನು ಕೈಗೊಂಡಿದ್ದಾರೆ.

ಪುಲ್ವಾಮಾ ದಾಳಿಯ ಹುತಾತ್ಮ ಸೈನಿಕ ಧೌಂಡಿಯಾಲ್ ಪತ್ನಿ ನಿತಿಕಾ ಕೌಲ್ ಭಾರತೀಯ ಸೇನೆಗೆ ಸೇರ್ಪಡೆ
ನಿತಿಕಾ ಕೌಲ್
TV9 Web
| Edited By: |

Updated on:Aug 14, 2021 | 1:11 PM

Share

ದೆಹಲಿ: ಪುಲ್ವಾಮಾ ಹುತಾತ್ಮ ಸೈನಿಕನ ಪತ್ನಿ ದೇಶ ಸೇವೆಗಾಗಿ ಭಾರತೀಯ ಸೇನೆಗೆ ಶನಿವಾರ ಸೇರ್ಪಡೆಗೊಂಡರು. ತಮ್ಮ ಪತಿಗೆ ಗೌರವ ಸಲ್ಲಿಸಿದರು. ಅವರು ಇಂದು (ಮೇ 29) ಮೊದಲ ಬಾರಿಗೆ ಸೈನ್ಯದ ಸಮವಸ್ತ್ರವನ್ನು ಧರಿಸಿದ್ದು, ಅವರಿಗೆ ಹಾಗೂ ದೇಶಕ್ಕೆ ಇದೊಂದು ಹೆಮ್ಮೆಯ ಕ್ಷಣವಾಗಿತ್ತು. ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್, 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಹುತಾತ್ಮರಾಗಿದ್ದರು. ರಾಷ್ಟ್ರಕ್ಕಾಗಿ ಅವರು ಮಾಡಿದ ತ್ಯಾಗಕ್ಕಾಗಿ ಅವರಿಗೆ ಮರಣೋತ್ತರ ಶೌರ್ಯ ಚಕ್ರವನ್ನು ನೀಡಲಾಗಿತ್ತು.

ಇಂದು, ಅವರ ಪತ್ನಿ ನಿತಿಕಾ ಕೌಲ್ ಅವರು ಭಾರತೀಯ ಸೇನೆಯ ಶ್ರೇಣಿಗೆ ಸೇರುವ ಮೂಲಕ ಅವರಿಗೆ ಗೌರವ ಸಲ್ಲಿಸಿದರು. ಆರ್ಮಿ ಕಮಾಂಡರ್ ಉತ್ತರ ಕಮಾಂಡ್ ಲೆಫ್ಟಿನೆಂಟ್ ಜನರಲ್ ವೈ.ಕೆ.ಜೋಶಿ ಅವರಿಂದ ಸ್ಟಾರ್​ಗಳನ್ನು ಪಡೆದುಕೊಂಡರು.

ರಕ್ಷಣಾ ಸಚಿವಾಲಯದ ಪಿ.ಆರ್.ಒ ಉಧಂಪುರ್, ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಪುಲ್ವಾಮದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಮೇಜರ್ ವಿಭೂತಿ ಶಂಕರ್‌ ಧೌಂಡಿಯಾಲ್ ಅವರಿಗೆ ಎಸ್‌ಸಿ(ಪಿ) ಗೌರವ ನೀಡಲಾಗಿತ್ತು. ಇಂದು ಅವರ ಪತ್ನಿ ನಿತಿಕಾ ಕೌಲ್ ಇಂಡಿಯನ್ ಆರ್ಮಿ ಸಮವಸ್ತ್ರವನ್ನು ಧರಿಸಿ, ಗೌರವ ಸಲ್ಲಿಸಿದರು ಎಂದು ಬರೆದುಕೊಂಡಿದ್ದಾರೆ.

ಮೇಜರ್ ಧೌಂಡಿಯಾಲ್ ಅವರ ನಿಧನಕ್ಕೆ ಕೇವಲ 9 ತಿಂಗಳ ಮೊದಲು ನಿತಿಕಾ ಕೌಲ್​ರನ್ನು ವಿವಾಹವಾಗಿದ್ದರು. ಇದೀಗ ಅವರ ಪತ್ನಿ ಭಾರತೀಯ ಸೇನೆಗೆ ಸೇರುವಂಥ ಮತ್ತು ತನ್ನ ಪತಿಯ ಕರ್ತವ್ಯಕ್ಕೆ ಹೆಮ್ಮೆ ಪಡುವಂಥ ಸ್ಪೂರ್ತಿದಾಯಕ ನಿರ್ಧಾರವನ್ನು ಕೈಗೊಂಡಿದ್ದಾರೆ.

ತನ್ನ ಗಂಡನ ಮರಣದ ಕೇವಲ ಆರು ತಿಂಗಳ ನಂತರ, ನಿತಿಕಾ ಎಸ್‌ಎಸ್‌ಸಿ ಫಾರ್ಮ್ ಅನ್ನು ಭರ್ತಿ ಮಾಡಿದ್ದರು. ಜೊತೆಗೆ, ಸೇವಾ ಆಯ್ಕೆ ಮಂಡಳಿ (ಎಸ್‌ಎಸ್‌ಬಿ)ಯ ಪರೀಕ್ಷೆ ಮತ್ತು ಸಂದರ್ಶನವನ್ನು ಕೂಡ ಎದುರಿಸಿ, ಪೂರ್ಣಗೊಳಿಸಿದ್ದಾರೆ. ಬಳಿಕ ಶೀಘ್ರದಲ್ಲೇ ತಮ್ಮ ತರಬೇತಿಗಾಗಿ ಚೆನ್ನೈನ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ (ಒಟಿಎ) ನಿಯೋಜನೆಗೊಂಡರು. 2021 ರ ಮೇ 29 ರಂದು ಅಧಿಕೃತವಾಗಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ನಿತಿಕಾ ಕೌಲ್ ಧೌಂಡಿಯಾಲ್ ಆಗಿ ಸೇರಿಕೊಂಡರು.

ಇದನ್ನೂ ಓದಿ: PPE Kit: ಕೊರೊನಾ ಯೋಧರಿಗಾಗಿ ಹೊಸ ಮಾದರಿಯ ತಂಪಾದ ಪಿಪಿಇ ಕಿಟ್; ವಿದ್ಯಾರ್ಥಿಯೊಬ್ಬನ ವಿನೂತನ ಸಂಶೋಧನೆ!

35 ವರ್ಷ ದೇಶ ಸೇವೆ ಸಲ್ಲಿಸಿ ಊರಿಗೆ ವಾಪಸ್ ಆದ ಯೋಧನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

Published On - 3:21 pm, Sat, 29 May 21

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ