AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ: ಮಹಿಳೆ ಮೇಲೆ ಅತ್ಯಾಚಾರ ನಡೆದ ಬಸ್​ನಲ್ಲಿ ಬಳಸಿದ ನೂರಾರು ಕಾಂಡೋಮ್​ಗಳು, ಮಹಿಳೆಯರ ಬಟ್ಟೆಗಳು ಪತ್ತೆ

ಪುಣೆಯ ಜನನಿಬಿಡ ಸ್ವರ್ಗೇಟ್ ಎಸ್‌ಟಿ ನಿಲ್ದಾಣದಲ್ಲಿ ನಿಂತಿದ್ದ ಶಿವಶಾಹಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ದತ್ತಾತ್ರೇಯ ರಾಮದಾಸ್ ಗಡೆ ಎಂದು ಗುರುತಿಸಲಾಗಿದೆ. ಬಸ್​ನಲ್ಲಿ ನೂರಾರು ಕಾಂಡೋಮ್​ಗಳು, ಮಹಿಳೆಯರ ಬಟ್ಟೆಗಳು ಪತ್ತೆಯಾಗಿವೆ. ಇದು ಅಪರಾಧ ಚಟುವಟಿಕೆಗಳ ತಾಣವಾಗಿತ್ತು ಎಂಬುದು ತಿಳಿದುಬಂದಿದೆ.

ಪುಣೆ: ಮಹಿಳೆ ಮೇಲೆ ಅತ್ಯಾಚಾರ ನಡೆದ ಬಸ್​ನಲ್ಲಿ ಬಳಸಿದ ನೂರಾರು ಕಾಂಡೋಮ್​ಗಳು, ಮಹಿಳೆಯರ ಬಟ್ಟೆಗಳು ಪತ್ತೆ
ಬಸ್
ನಯನಾ ರಾಜೀವ್
|

Updated on:Feb 27, 2025 | 9:20 AM

Share

ಪುಣೆ, ಫೆಬ್ರವರಿ 27: ಪುಣೆಯ ಜನನಿಬಿಡ ಸ್ವರ್ಗೇಟ್ ಎಸ್​ಟಿ ಬಸ್​ ನಿಲ್ದಾಣದಲ್ಲಿ ನಿಂತಿದ್ದ ಶಿವಶಾಹಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್​ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಎಲ್ಲಾ ಬಸ್​ಗಳಲ್ಲಿ ಬುಟ್ಟಿಗಟ್ಟಲೇ ಕಾಂಡೋಮ್​ಗಳು, ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಇದು ಅಪರಾಧ ಚಟುವಟಿಕೆಗಳ ತಾಣವಾಗಿತ್ತು ಎಂಬುದು ತಿಳಿದುಬಂದಿದೆ. ಬಿಯರ್ ಬಾಟಲಿಗಳು, ಸಿಗರೇಟ್​ ಪ್ಯಾಕ್​ಗಳು, ಕಾಂಡೋಮ್​ಗಳು, ಮಹಿಳೆಯರ ಬಟ್ಟೆಗಳು ಹತ್ತಾರು ವಸ್ತುಗಳು ಪತ್ತೆಯಾಗಿವೆ.

ಅತ್ಯಾಚಾರದ ಸುದ್ದಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಶಿವಸೇನೆ (ಯುಬಿಟಿ)ಯ ಸುಷ್ಮಾ ಅಂಧಾರೆ ಮತ್ತು ಕಸ್ಬಾದ ಮಾಜಿ ಶಾಸಕ ರವೀಂದ್ರ ಧಂಗೇಕರ್ ಮತ್ತು ಎಎಪಿಯ ಮುಕುಂದ್ ಕಿರ್ದತ್ ಅವರಂತಹ ನಾಯಕರು ನಗರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ ವಸಂತ್ ಮೋರ್ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿರುವ ಭದ್ರತಾ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಮತ್ತು ಈಗ, ನಗರವು ಅತ್ಯಾಚಾರದ ಆಘಾತದಿಂದ ನಲುಗುತ್ತಿದ್ದಂತೆ, ಸ್ವರ್ಗೇಟ್ ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ಈ ಘಟನೆ ನಡೆದಿರುವುದು ಮತ್ತಷ್ಟು ಆಘಾತ ತಂದಿದೆ ಎಂದಿದ್ದಾರೆ.

ಮತ್ತಷ್ಟು ಓದಿ: ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸಿನೊಳಗೆ ಪುಣೆಯ ಮಹಿಳೆ ಮೇಲೆ ಅತ್ಯಾಚಾರ

ಶಿವಸೇನೆ (ಯುಬಿಟಿ) ನಾಯಕ ವಸಂತ್ ಮೋರ್ ಈ ನಿಲ್ಲಿಸಲಾದ ಬಸ್‌ಗಳನ್ನು ಸ್ವರ್ಗೇಟ್ ಬಸ್ ನಿಲ್ದಾಣದ ಬಳಿ ವಸತಿಗೃಹವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇವೆಲ್ಲವು ಪ್ರದೇಶದ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತಿವೆ. ಆರೋಪಿಯನ್ನು ದತ್ತಾತ್ರೇಯ ಗಡೆ ಎಂದು ಗುರುತಿಸಲಾಗಿದೆ. ಪೊಲೀಸರು ಆತನನ್ನು ಪತ್ತೆಹಚ್ಚಲು ಎಂಟು ತಂಡಗಳನ್ನು ರಚಿಸಿದ್ದಾರೆ.

ಬಸ್ ನಿಲ್ದಾಣದಲ್ಲಿ ಸುಮಾರು 25 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡರೂ, ಈ ಕಳಪೆ ನಿರ್ವಹಣೆ, ಬಳಕೆಯಾಗದ ಬಸ್‌ಗಳನ್ನು ನಿಲ್ಲಿಸಿರುವ ಡಿಪೋದ ಗುಪ್ತ ಸ್ಥಳಗಳನ್ನು ಏನೂ ಇಲ್ಲ.

ಮಂಗಳವಾರ ಮುಂಜಾನೆ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮತ್ತು ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ.

ಈ ಘಟನೆ ಇದೀಗ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ನಂತರ ಆರೋಪಿಗಾಗಿ ವ್ಯಾಪಕ ಹುಡುಕಾಟ ನಡೆಯುತ್ತಿದೆ. ದತ್ತಾತ್ರೇಯ ರಾಮದಾಸ್ ಎಂದು ಗುರುತಿಸಲಾದ ಆರೋಪಿಯ ವಿರುದ್ಧ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:19 am, Thu, 27 February 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ