AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ಸಮ್ಮತಿಯ ಲೈಂಗಿಕ ಕ್ರಿಯೆ, ಪುಣೆ ಅತ್ಯಾಚಾರ ಆರೋಪಿ ನ್ಯಾಯಾಲಯದಲ್ಲಿ ಶಾಕಿಂಗ್ ಹೇಳಿಕೆ

ಅದು ಸಮ್ಮತಿಯ ಲೈಂಗಿಕ ಕ್ರಿಯೆಯಾಗಿತ್ತು, ಅತ್ಯಾಚಾರವಲ್ಲ ಎಂದು ಪುಣೆ ಅತ್ಯಾಚಾರ ಆರೋಪಿ ದತ್ತಾತ್ರೇಯ ಗಡೆ ನ್ಯಾಯಾಲಯದಲ್ಲಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸುಮಾರು 72 ಗಂಟೆಗಳ ಕಾಲ ಹುಡುಕಾಟ ನಡೆಸಿದ ನಂತರ ಶುಕ್ರವಾರ ಬೆಳಗ್ಗೆ ಶಿರೂರು ತಹಸಿಲ್‌ನಿಂದ ಬಂಧಿಸಲ್ಪಟ್ಟ ಪುಣೆ ಅತ್ಯಾಚಾರ ಆರೋಪಿ ದತ್ತಾತ್ರಯ ರಾಮದಾಸ್ ಗಾಡೆಯನ್ನು ಪುಣೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಅದು ಸಮ್ಮತಿಯ ಲೈಂಗಿಕ ಕ್ರಿಯೆ, ಪುಣೆ ಅತ್ಯಾಚಾರ ಆರೋಪಿ ನ್ಯಾಯಾಲಯದಲ್ಲಿ ಶಾಕಿಂಗ್ ಹೇಳಿಕೆ
ದತ್ತಾತ್ರೇಯ Image Credit source: News 9
ನಯನಾ ರಾಜೀವ್
|

Updated on:Mar 01, 2025 | 12:29 PM

Share

ಪುಣೆ, ಮಾರ್ಚ್​ 1: ಅದು ಸಮ್ಮತಿಯ ಲೈಂಗಿಕ ಕ್ರಿಯೆಯಾಗಿತ್ತು, ಅತ್ಯಾಚಾರವಲ್ಲ ಎಂದು ಪುಣೆ ಅತ್ಯಾಚಾರ ಆರೋಪಿ ದತ್ತಾತ್ರೇಯ ಗಡೆ ನ್ಯಾಯಾಲಯದಲ್ಲಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸುಮಾರು 72 ಗಂಟೆಗಳ ಕಾಲ ಹುಡುಕಾಟ ನಡೆಸಿದ ನಂತರ ಶುಕ್ರವಾರ ಬೆಳಗ್ಗೆ ಶಿರೂರು ತಹಸಿಲ್‌ನಿಂದ ಬಂಧಿಸಲ್ಪಟ್ಟ ಪುಣೆ ಅತ್ಯಾಚಾರ ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆಯನ್ನು ಪುಣೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಆರೋಪಿಯನ್ನು ಈಗ 12 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ತನಿಖೆಗಾಗಿ ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದ್ದರು ಆದರೆ 12 ದಿನಗಳ ಕಸ್ಟಡಿಗೆ ನೀಡಲಾಯಿತು. ಏತನ್ಮಧ್ಯೆ, ಆರೋಪಿ ಗಡೆ ಪರ ವಕೀಲರು, ಇದು ಪರಸ್ಪರ ಒಪ್ಪಿಗೆಯ ಲೈಂಗಿಕ ಕ್ರಿಯೆಯಾಗಿದ್ದು, ಮಹಿಳೆ ಹೇಳಿಕೊಂಡಿರುವಂತೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ಪ್ರತಿಪಾದಿಸಿದರು.

ಆರೋಪಿಯ ವಿರುದ್ಧ 6 ಕ್ರಿಮಿನಲ್ ಪ್ರಕರಣಗಳಿವೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸಂತ್ರಸ್ತೆ ಸ್ವಯಂಪ್ರೇರಣೆಯಿಂದ ಅತ್ಯಾಚಾರ ಘಟನೆ ನಡೆದ ಬಸ್‌ಗೆ ಪ್ರವೇಶಿಸುತ್ತಿರುವುದನ್ನು ತೋರಿಸಲಾಗಿದೆ. ಆದರೆ, ಆರೋಪಿಯ ವಿರುದ್ಧ ಈ ಹಿಂದೆ ಆರು ಪ್ರಕರಣಗಳು ದಾಖಲಾಗಿದ್ದು, ಆತನ ವಿರುದ್ಧ ಕ್ರಿಮಿನಲ್ ಹಿನ್ನೆಲೆಗಳಿವೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ತಿಳಿಸಿದರು.

ಗಡೆ ವಿರುದ್ಧದ ಈ ಆರು ಪ್ರಕರಣಗಳಲ್ಲಿ ಐದು ಪ್ರಕರಣಗಳು ಮಹಿಳಾ ದೂರುದಾರರನ್ನು ಒಳಗೊಂಡಿವೆ ಎಂದು ಅವರು ಹೇಳಿದರು. ಆರೋಪಿ ದತ್ತಾತ್ರೇಯ ಗಾಡೆ ಅವರನ್ನು ಮಾರ್ಚ್ 12 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಪುಣೆ: ನಾನು ದೊಡ್ಡ ತಪ್ಪು ಮಾಡಿದ್ದೇನೆ, ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಿ ದತ್ತಾತ್ರೇಯ ಹೇಳಿದ್ದೇನು?

ಅತ್ಯಾಚಾರ ಘಟನೆಯ ನಂತರ, ಭಾರಿ ಆಕ್ರೋಶ ಭುಗಿಲೆದ್ದಿತು ಮತ್ತು ಕೋಪಗೊಂಡ ಸ್ಥಳೀಯರು ಸ್ವರ್ಗೇಟ್ ಬಸ್ ಡಿಪೋ ಭದ್ರತಾ ಕ್ಯಾಬಿನ್ ಅನ್ನು ಧ್ವಂಸಗೊಳಿಸಿದರು. ಘಟನೆಯ ನಂತರ, ಆರೋಪಿ ದತ್ತಾತ್ರೇಯ ಗಡೆ ಸ್ಥಳದಿಂದ ಪರಾರಿಯಾಗಿ ತನ್ನ ಸ್ವಂತ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ.

ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪೊಲೀಸರು ಡ್ರೋನ್‌ಗಳು ಮತ್ತು ಡಜನ್ಗಟ್ಟಲೆ ಪೊಲೀಸರನ್ನು ಬಳಸಬೇಕಾಯಿತು. ಆರೋಪಿಯನ್ನು ಹಿಡಿಯಲು ಬೃಹತ್ ಹುಡುಕಾಟವನ್ನು ಪ್ರಾರಂಭಿಸಲಾಯಿತು ಮತ್ತು ಮೂರು ದಿನಗಳ ಹುಡುಕಾಟದ ನಂತರ ಆತನನ್ನು ಬಂಧಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Sat, 1 March 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ