AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕ್​​ ಎಂಡ್​​ ಮಸ್ತಿ! ಪಂಚತಾರಾ ಹೋಟೆಲಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ನಟಿ, ಮಾಡೆಲ್ ಅರೆಸ್ಟ್​

ವೇಶ್ಯಾವಾಟಿಕೆ ನಡೆಯುತ್ತಿರುವ ವಿಷಯ ದೃಢಪಡುತ್ತಿದ್ದಂತೆ ಅಪರಾಧ ವಿಭಾಗದ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಗೆ ಸಹಕರಿಸುತ್ತಿದ್ದ ಮೂವರು ವಿಟಪುರುಷರನ್ನೂ ಸಹ ಬಂಧಿಸಲಾಗಿದೆ

ವೀಕ್​​ ಎಂಡ್​​ ಮಸ್ತಿ! ಪಂಚತಾರಾ ಹೋಟೆಲಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದ ನಟಿ, ಮಾಡೆಲ್ ಅರೆಸ್ಟ್​
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: May 14, 2023 | 12:44 PM

Share

ಮಹಾರಾಷ್ಟ್ರದ ಪಂಚತಾರಾ ಹೋಟೆಲ್‌ವೊಂದರಲ್ಲಿ (Hotel) ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆಯನ್ನು ಪುಣೆ ಪೊಲೀಸರು (Pune Police) ಬೇಧಿಸಿದ್ದಾರೆ. ಅತ್ಯಂತ ಗುಪ್ತ್​​ ಗುಪ್ತ್​​ ಆಗಿ ನಡೆಸುತ್ತಿದ್ದ ವ್ಯವಹಾರವನ್ನು ವಕಾಡ್ ಪ್ರದೇಶದಲ್ಲಿ ಪತ್ತೆಹಚ್ಚಿದ್ದಾರೆ. ವೇಶ್ಯಾವಾಟಿಕೆ ಗ್ಯಾಂಗ್ ದಂಧೆ ನಡೆಸುತ್ತಿ ವೇಳೆ ಪೊಲೀಸರು ದಾಳಿ ನಡೆಸಿದಾಗ ಭೋಜ್‌ಪುರಿ ನಟಿಯೂ (Bhojpuri Actress) ಆ ವೇಶ್ಯಾವಾಟಿಕೆಯಲ್ಲಿ (Prostitution) ಭಾಗಿಯಾಗಿರುವುದು ಪತ್ತೆಯಾಗಿದೆ. ಜೊತೆಗೆ ಮತ್ತೊಬ್ಬ ಮಾಡೆಲ್ ಮತ್ತು ಏಜೆಂಟ್ ನನ್ನು ಬಂಧಿಸಲಾಗಿದೆ. ವಾರಂತ್ಯಕ್ಕೆ ಶುಕ್ರವಾರ ಸಂಜೆ ಪಂಚತಾರಾ ಹೋಟೆಲ್‌ನಲ್ಲಿ ಕೆಲವು ಅಸಾಮಾಜಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಅದರಂತೆ ನಟಿ ಮತ್ತು ಮಾಡೆಲ್ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ರೆಡ್​ ಹ್ಯಾಂಡ್​​ಆಗಿ ಸಿಕ್ಕಿಬಿದ್ದರು ಎಂದು ವಕಾಡ್ ಪೊಲೀಸ್ ಠಾಣೆಯ ತನಿಖಾಧಿಕಾರಿ ದೇವೆನ್ ಚವಾಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ದೇವೆನ್ ಚವಾಣ್ “ಮೊದಲು ನಾವು ಗುಪ್ತ್​​ ಗುಪ್ತ್​​ ಆಗಿ ಆನ್‌ಲೈನ್‌ನಲ್ಲಿ ಸಂಪರ್ಕಿಸಿ ಹೋಟೆಲ್ ರೂಮ್ ಅನ್ನು ಬುಕ್ ಮಾಡಿದೆವು. ನಂತರ ನಾವು ಪೊಲೀಸ್ ಇಲಾಖೆಯಿಂದ ಡಮ್ಮಿ ಗ್ರಾಹಕರನ್ನು ಹೋಟೆಲಿಗೆ ಕಳುಹಿಸಿದ್ದೆವು. ಡಮ್ಮಿ ಗ್ರಾಹಕರು ಹೋಟೆಲಿಗೆ ಪ್ರವೇಶಿಸಿದ ನಂತರ ಅವರು ತಮ್ಮ ಸೆಲ್ ಫೋನ್‌ಗಳಲ್ಲಿ ನಟಿ ಮತ್ತು ಮಾಡೆಲ್‌ನ ಫೋಟೋಗಳನ್ನು ತೆಗೆದುಕೊಂಡು ನಮಗೆ ಕಳುಹಿಸಿದರು.

Also Read:  ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ವೇಶ್ಯಾವಾಟಿಕೆ ನಡೆಯುತ್ತಿರುವ ವಿಷಯ ದೃಢಪಡುತ್ತಿದ್ದಂತೆ ಅಪರಾಧ ವಿಭಾಗದ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿದರು. ಈ ವೇಳೆ ವೇಶ್ಯಾವಾಟಿಕೆ ದಂಧೆಗೆ ಸಹಕರಿಸುತ್ತಿದ್ದ ಮೂವರು ವಿಟಪುರುಷರನ್ನೂ ಸಹ ಬಂಧಿಸಲಾಗಿದೆ ಎಂದು ಚವಾಣ್ ಹೇಳಿದ್ದಾರೆ. ಆರೋಪಿಗಳನ್ನು ಪ್ರಬೀರ್ ಪಿ ಮಜುಂದಾರ್, ದಿನೇಶ್ ಯಾದವ್ ಮತ್ತು ವಿರಾಜ್ ಯಾದವ್ ಎಂದು ಪೊಲೀಸರು ಗುರುತಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!