AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ, ಚಿಕ್ಕಪ್ಪ ಸೇರಿ ಹಲವು ಮಂದಿಯಿಂದ ಬಾಲಕಿ ಮೇಲೆ ಅತ್ಯಾಚಾರ, ಕೆಟ್ಟ ಸ್ಪರ್ಶ, ಒಳ್ಳೆಯ ಸ್ಪರ್ಶ ಪಾಠ ಸಮಯದಲ್ಲಿ ತಿಳೀತು ವಿಚಾರ

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಒಳ್ಳೆಯ ಸ್ಪರ್ಶ ಯಾವುದು, ಕೆಟ್ಟ ಸ್ಪರ್ಶ ಯಾವುದು ಎಂದು ತಿಳಿಸಿಕೊಡುತ್ತಿರುವ ವೇಳೆ ಆಕೆಯ ಮೇಲೆ ನಡೆಸಿದ್ದ ಅತ್ಯಾಚಾರದ ಘಟನೆಯನ್ನು ವಿದ್ಯಾರ್ಥಿನಿ ಶಿಕ್ಷಕಿಯೊಂದಿಗೆ ಹಂಚಿಕೊಂಡಿದ್ದಾಳೆ. ಆಕೆಯ ಮೇಲೆ ತಂದೆ, ಚಿಕ್ಕಪ್ಪ ಹಾಗೂ ಇತರರಿಂದ ಅತ್ಯಾಚಾರವಾಗಿದೆ ಎಂದು ಹೇಳಿದ್ದಾಳೆ.

ತಂದೆ, ಚಿಕ್ಕಪ್ಪ ಸೇರಿ ಹಲವು ಮಂದಿಯಿಂದ ಬಾಲಕಿ ಮೇಲೆ ಅತ್ಯಾಚಾರ, ಕೆಟ್ಟ ಸ್ಪರ್ಶ, ಒಳ್ಳೆಯ ಸ್ಪರ್ಶ ಪಾಠ ಸಮಯದಲ್ಲಿ ತಿಳೀತು ವಿಚಾರ
ಕ್ರೈಂImage Credit source: News 18
ನಯನಾ ರಾಜೀವ್
|

Updated on: Jun 24, 2024 | 9:22 AM

Share

ತಂದೆ, ಚಿಕ್ಕಪ್ಪ ಹಾಗೂ ಸೋದರ ಸಂಬಂಧಿಯಿಂದ ಪದೇ ಪದೇ ತನ್ನ ಮೇಲೆ ಅತ್ಯಾಚಾರ ನಡೆದಿರುವ ವಿಚಾರವನ್ನು 13 ವರ್ಷದ ಬಾಲಕಿ ಶಿಕ್ಷಕಿಯ ಮುಂದೆ ಬಿಚ್ಚಿಟ್ಟಿದ್ದಾಳೆ. ಶಾಲೆಯಲ್ಲಿ ಒಳ್ಳೆಯ ಸ್ಪರ್ಶ ಯಾವುದು, ಕೆಟ್ಟ ಸ್ಪರ್ಶ ಯಾವುದು ಎಂಬುದರ ಕುರಿತು ವಿದ್ಯಾರ್ಥಿನಿಯರಿಗೆ ಶಿಕ್ಷಕರು ಮನದಟ್ಟು ಮಾಡಿಕೊಡುತ್ತಿದ್ದರು. ಆ ಸಮಯದಲ್ಲಿ ವಿದ್ಯಾರ್ಥಿನಿ ನಡೆದಿರುವ ಎಲ್ಲಾ ವಿಚಾರವನ್ನು ತೆರೆದಿಟ್ಟಿದ್ದಾಳೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಕೆಟ್ಟ ಸ್ಪರ್ಶ ಯಾವುದು ಎಂದು ಹೇಳಿಕೊಡುತ್ತಿರುವಾಗ ಆಕೆ ನಡೆದಿರುವ ಎಲ್ಲಾ ವಿಚಾರವನ್ನು ಬಹಿರಂಗಪಡಿಸಿದ್ದಾಳೆ. ಆಕೆಯ ಸೋದರ ಸಂಬಂಧಿ 2023ರಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಮತ್ತು ಹಲ್ಲೆ ಕೂಡ ನಟೆಸಿದ್ದಾನೆ, ಆದರೆ ಯಾರಿಗಾದರೂ ಹೇಳಿದರೆ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

2024ರ ಜನವರಿಯಲ್ಲಿ ಆಕೆಯ ಚಿಕ್ಕಪ್ಪ ಅತ್ಯಾಚಾರವೆಸಗಿದ್ದರು, ಇದನ್ನು ವಿರೋಧಿಸಿ ಕಿರುಚಾಡಿದಾಗ ಆಕೆಯ ಬಾಯಿಯನ್ನು ಕಟ್ಟಿ ಆಕೆಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆಕೆ ತಿಳಿಸಿದ್ದಾಳೆ.

ಮತ್ತಷ್ಟು ಓದಿ: ಅತ್ಯಾಚಾರ ಪ್ರತಿರೋಧಿಸಿದ ನವವಿವಾಹಿತ ಮಹಿಳೆಗೆ ಚಾಕು ಇರಿತ

ಬಾಲಕಿ ತಂದೆ ಕೂಡ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನುವ ಆತಂಕದ ವಿಚಾರವನ್ನು ಕೂಡ ಆಕೆ ಹೇಳಿಕೊಂಡಿದ್ದಾಳೆ. ಒಳ್ಳೆಯ ಸ್ಪರ್ಶ ಹಾಗೂ ಕೆಟ್ಟ ಸ್ಪರ್ಶ ಕುರಿತು ಶಾಲೆಯಲ್ಲಿ ನಡೆದ ಕೌನ್ಸೆಲಿಂಗ್ ಸಮಯದಲ್ಲಿ ಬಾಲಕಿ ಈ ವಿಚಾರವನ್ನು ತಿಳಿಸಿದ್ದಾಳೆ. ನಂತರ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರ ಆರೋಪದಡಿ ಮೂವರನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ