Sign In

By signing in or creating an account, you agree with Associated Broadcasting Company's Terms & Conditions and Privacy Policy.

Zika Virus: ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ತಗುಲಿದ ಸೋಂಕು

ಡೆಂಗ್ಯೂ ನಂತರ ಇದೀಗ ಝಿಕಾ ವೈರಸ್​ ಗದ್ದಲ ಶುರುವಾಗಿದೆ, ಪುಣೆಯಲ್ಲಿ ಇಬ್ಬರಲ್ಲಿ ಝಿಕಾ ಸೋಂಕು ಪತ್ತೆಯಾಗಿದ್ದು, ಆತಂಕ ಶುರುವಾಗಿದೆ. ಪುಣೆಯ ವೈದ್ಯರು ಹಾಗೂ ಅವರ ಮಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Zika Virus: ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ತಗುಲಿದ ಸೋಂಕು
ಝಿಕಾ ವೈರಸ್
Follow us
ನಯನಾ ರಾಜೀವ್
|

Updated on: Jun 26, 2024 | 3:03 PM

ದೇಶಕ್ಕೆ ಮುಂಗಾರು ಆಗಮಿಸಿದೆ. ಹಲವು ರಾಜ್ಯಗಳಲ್ಲಿ ಭಾರೀ ಮಳೆ ಆರಂಭವಾಗಿದೆ. ಈ ಅವಧಿಯಲ್ಲಿ ಜನರು ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ಮಲೇರಿಯಾ, ಡೆಂಗ್ಯೂ ಸೇರಿ ಇದೀಗ ಪುಣೆಯಲ್ಲಿ ಇಬ್ಬರಲ್ಲಿ ಝಿಕಾ ವೈರಸ್ ಸೋಂಕಿತರು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ.  ವೈದ್ಯರು ಮತ್ತು ಅವರ 13 ವರ್ಷದ ಮಗಳಲ್ಲಿ  ರೋಗಲಕ್ಷಣಗಳು ಕಂಡುಬಂದಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಬ್ಬರಿಗೂ ಜ್ವರ ಹಾಗೂ ದದ್ದುಗಳಂತಹ ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಾದರಿಯನ್ನು ತೆಗೆದುಕೊಂಡಿರುವ ವೈದ್ಯರು ಇದು ಝಿಕಾ ವೈರಸ್ ಎಂದು ದೃಢಪಡಿಸಿದ್ದಾರೆ.

ಈಗ ಕುಟುಂಬದ ಐದು ಮಂದಿ ಸದಸ್ಯರ ರಕ್ತದ ಮಾದರಿಯನ್ನೂ ತೆಗೆದುಕೊಳ್ಳಲಾಗಿದೆ. ಈ ಸೋಂಕು ಮೊದಲು 1947ರಲ್ಲಿ ಉಂಗಾಡದಲ್ಲಿ ಗುರುತಿಸಲಾಯಿತು. ಒಂದೊಮ್ಮೆ ಗರ್ಭಿಣಿಯರಿಗೆ ಸೋಂಕು ತಗುಲಿದರೆ ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಮತ್ತಷ್ಟು ಓದಿ: West Nile Fever: ಕೇರಳದಲ್ಲಿ ಐವರಿಗೆ ವೆಸ್ಟ್ ನೈಲ್ ಜ್ವರ ಪತ್ತೆ

46 ವರ್ಷದ ವೈದ್ಯರು ಮತ್ತು ಅವರ 13 ವರ್ಷದ ಮಗಳಲ್ಲಿ ರೋಗಲಕ್ಷಣಗಳು ಕಂಡುಬಂದಿವೆ. ಈ ರೋಗವು ಸೊಳ್ಳೆಗಳಿಂದ ಉಂಟಾಗುತ್ತದೆ. ಗರ್ಭಿಣಿಯರು ಹೆಚ್ಚು ಅಪಾಯದಲ್ಲಿದ್ದಾರೆ. ಇದರಿಂದಾಗಿ ಇಂತಹ ಮಹಿಳೆಯರು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಲಾಗುತ್ತಿದೆ.

ಹವಾಮಾನ ವೈಪರೀತ್ಯದಿಂದ ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ ಸೇರಿದಂತೆ ಇತರೆ ರೋಗಗಳೂ ಹೆಚ್ಚಾಗತೊಡಗಿವೆ. ಝಿಕಾ ವೈರಸ್ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಉಂಟಾಗುವ ಕಾಯಿಲೆಯಾಗಿದ್ದು, ಈ ರೋಗದ ಶೇಕಡಾ 80 ರಷ್ಟು ರೋಗಿಗಳು ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ.

ಕೆಲವು ರೋಗಿಗಳು ಜ್ವರ, ಕೀಲು ನೋವು, ದೇಹದ ನೋವು, ತಲೆನೋವು, ಕೆಂಪು ಕಣ್ಣುಗಳು, ವಾಂತಿ, ಅಸ್ವಸ್ಥತೆ, ಜ್ವರ ಮತ್ತು ದೇಹದ ದದ್ದುಗಳನ್ನು ಅನುಭವಿಸುತ್ತಾರೆ. ಝಿಕಾ ರೋಗಿ ಪತ್ತೆಯಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯೂ ಎಚ್ಚೆತ್ತುಕೊಂಡಿದೆ.

ಇದನ್ನು ತಡೆಯುವುದು ಹೇಗೆ? ಮನೆಗಳಲ್ಲಿ ಸೊಳ್ಳೆಗಳನ್ನು ತಪ್ಪಿಸಿ, ಸ್ವಚ್ಛವಾಗಿಡಿ, ಸೊಳ್ಳೆ ಪರದೆಗಳನ್ನು ಬಳಸಿ ಹೆಚ್ಚು ಕಾಲ ನೀರು ನಿಲ್ಲದಂತೆ ನೋಡಿಕೊಳ್ಳಿ ಎರಡು ದಿನಗಳ ಕಾಲ ಜ್ವರ ಮುಂದುವರೆದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಚವಾಗಿಡಬೇಕು, ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ