AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ: ಇಂದ್ರಯಾಣಿ ಸೇತುವೆ ಕುಸಿದು 25ರಿಂದ 30 ಪ್ರವಾಸಿಗರು ನೀರುಪಾಲು

Indrayani River Bridge Collapse: ಪುಣೆಯ ಮಾವಳ ತಾಲೂಕಿನಲ್ಲಿರುವ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಭಾನುವಾರ ಕುಸಿದು ಬಿದ್ದಿದ್ದು, 25 ರಿಂದ 30 ಪ್ರವಾಸಿಗರು ನೀರುಪಾಲಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಲವರನ್ನು ರಕ್ಷಿಸಲಾಗಿದೆ. ಆದರೆ, ಹಲವರು ಮೃತಪಟ್ಟಿರುವ ಭೀತಿಯಿದೆ. ಶಾಸಕ ಸುನಿಲ್ ಶೆಲ್ಕೆ ಅವರು 6 ಜನರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಪುಣೆ: ಇಂದ್ರಯಾಣಿ ಸೇತುವೆ ಕುಸಿದು 25ರಿಂದ 30 ಪ್ರವಾಸಿಗರು ನೀರುಪಾಲು
ಇಂದ್ರಯಾಣಿ ನದಿ ಸೇತುವೆ ಕುಸಿತ
ವಿವೇಕ ಬಿರಾದಾರ
|

Updated on:Jun 15, 2025 | 6:21 PM

Share

ಪುಣೆ, ಜೂನ್​​ 15: ಮಹಾರಾಷ್ಟ್ರದ (Maharashtra) ಪುಣೆ (Pune) ಜಿಲ್ಲೆಯ ಮಾವಲ್ ತಾಲೂಕಿನ ಇಂದ್ರಯಾಣಿ ನದಿಗೆ (Indrani River) ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ (Bridge) ಕುಸಿದು ಬಿದ್ದಿದ್ದು, 25 ರಿಂದ 30 ಪ್ರವಾಸಿಗರು ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ (ಜೂ.15) ಮಧ್ಯಾಹ್ನ ಘಟನೆ ನಡೆದಿದೆ.

ಮಾವಲ್ ತಾಲೂಕಿನಲ್ಲಿರುವ ಕುಂದಮಲ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಮಳೆಗಾಲದಲ್ಲಿ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಕುಂದಮಲಗೆ ತೆರಳಲು ಇಂದ್ರಯಾಣಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿತ್ತು. ಈ ಸೇತುವೆ ಏಕಾಏಕಿ ಕುಸಿದ ಪರಿಣಾಮ ಸೇತುವೆ ಮೇಲಿದ್ದ 25 ರಿಂದ 30 ಜನ ನದಿಯಲ್ಲಿ ಬಿದ್ದಿದ್ದಾರೆ. ಕೆಲ ಪ್ರವಾಸಿಗರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೆಲವರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ಅಪಘಾತದಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುವುದು ನಿಖರವಾಗಿ ತಿಳಿದುಬಂದಿಲ್ಲ. ಆದಾಗ್ಯೂ, ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅವಘಡದಲ್ಲಿ 20 ರಿಂದ 25 ಜನರು ನದಿಯಲ್ಲಿ ಕೊಚ್ಚಿಹೋಗಿರುವ ಸಾಧ್ಯತೆಯಿದೆ.

ಇದನ್ನೂ ಓದಿ
Image
‘ಮೇಡೇ’ ಅಷ್ಟೇ ಅಲ್ಲ! ಪೈಲಟ್ ಎಟಿಸಿಗೆ ಕಳುಹಿಸಿದ್ದ ಕೊನೆಯ ಸಂದೇಶ ಬಯಲು
Image
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
Image
ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ
Image
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ

ಇದನ್ನೂ ಓದಿ: ಏರ್ ಇಂಡಿಯಾದ ಬೋಯಿಂಗ್ ವಿಮಾನದಲ್ಲಿ ಸುರಕ್ಷತಾ ಕ್ರಮ ಹೆಚ್ಚಿಸಲು ಡಿಜಿಸಿಎ ಆದೇಶ

6 ಜನರು ಮೃತಪಟ್ಟಿದ್ದಾರೆ- ಶಾಸಕ ಸುನಿಲ್ ಶೆಲ್ಕೆ

ಈ ಅಪಘಾತದ ವಿಷಯ ತಿಳಿದ ತಕ್ಷಣ ಮಾವಲ್ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ಶೆಲ್ಕೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಟಿವಿ9 ಜೊತೆ ಮಾತನಾಡಿದ ಅವರು, ಈ ದುರಂತದಲ್ಲಿ ಇದುವರೆಗೆ 6 ಜನರು ಮೃತಪಟ್ಟಿದ್ದಾರೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿವೆ. ನದಿಯಲ್ಲಿ ಕೊಚ್ಚಿ ಹೋದವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ರಕ್ಷಣಾ ಸಿಬ್ಬಂದಿ ಇಂದ್ರಯಾಣಿ ನದಿಯಿಂದ ಇಬ್ಬರ ಶವ ಹೊರತೆಗೆದಿದ್ದಾರೆ. 32ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರ ಪೈಕಿ ಆರು ಪ್ರವಾಸಿಗರ ಸ್ಥಿತಿ ಗಂಭೀರವಾಗಿದೆ. ನಾಪತ್ತೆಯಾಗಿರುವ 25-30 ಪ್ರವಾಸಿಗರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:57 pm, Sun, 15 June 25

Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು