AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ. ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. […]

ಕೊರೊನಾದಿಂದ ಬಚಾವ್​ ಆಗಲು ಬಂತು ‘ಚಿನ್ನ’ದಂಥ​ ಮಾಸ್ಕ್​, ಇದರ ಬೆಲೆ ಎಷ್ಟು ಗೊತ್ತಾ..?
KUSHAL V
|

Updated on: Jul 04, 2020 | 8:12 AM

Share

ಪುಣೆ: ಕೊರೊನಾ ಸೋಂಕು ಎಗ್ಗಿಲ್ಲದೆ ಹರಡುತ್ತಲೇ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜನರಿಗೆ ಮಾಸ್ಕ್​ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಡ್ಡಾಯ ಮಾಡಿದೆ. ಹಾಗಾಗಿ ಮಾರುಕಟ್ಟೆಗೆ ವಿಧವಿಧವಾದ ಡಿಸೈನರ್​ ಮಾಸ್ಕ್​ಗಳು ಲಗ್ಗೆ ಇಟ್ಟಿವೆ.

ಆದ್ರೆ, ಮಹಾರಾಷ್ಟ್ರದ ಪುಣೆಯ ನಿವಾಸಿಯೊಬ್ಬರು ಸ್ವಲ್ಪ ಸ್ಟೈಲಿಶ್​ ಆಗಿರೋ ಮಾಸ್ಕ್​ ಧರಿಸೋಕೆ ಮುಂದಾಗಿದ್ದಾರೆ. ಹೌದು, ಪುಣೆಯ ಪಿಂಪ್ರಿ-ಚಿಂಚವಾಡದ ನಿವಾಸಿ ಶಂಕರ್​ ಕುರಾಡೆ ತಮಗಾಗಿ ಅಪ್ಪಟ ಚಿನ್ನದಿಂದ ತಯಾರಿಸಲಾದ ಮಾಸ್ಕ್​ ಒಂದನ್ನು ಖರೀದಿಸಿದ್ದಾರೆ. ಇದರ ವಿನ್ಯಾಸ ಎಷ್ಟು ಅದ್ಭುತವಾಗಿದೆ ಎಂದರೆ ಇದನ್ನು ಬಂಗಾರದಿಂದ ಮಾಡಿದ್ರೂ ಮಾಸ್ಕ್​ನಲ್ಲಿ ಪುಟ್ಟ ಪುಟ್ಟ ರಂಧ್ರಗಳಿದೆ. ಹಾಗಾಗಿ ಉಸಿರಾಟಕ್ಕೆ ಯಾವುದೇ ತೊಂದರೆಯಾಗೋದಿಲ್ಲ ಅಂತಾ ಶಂಕರ್​ ಹೇಳಿಕೊಂಡಿದ್ದಾರೆ.

ಅಂದ ಹಾಗೆ, ಈ ಮಾಸ್ಕ್​ನ ಬೆಲೆ ಎಷ್ಟು ಗೊತ್ತಾ..? ಬರೋಬ್ಬರಿ 2.89 ಲಕ್ಷ. ಆದರೆ, ಶಂಕರ್​ಗೆ ಇದು ಹೆಚ್ಚು ಹೊರೆಯಾಗಿಲ್ಲವಂತೆ. ಬಂಗಾರಕ್ಕಿಂತ ಹೆಚ್ಚು ಬೆಲೆ ಬಾಳುವ ಜೀವದ ಎದುರು ಈ ಮಾಸ್ಕ್​ ದುಬಾರಿಯೇ? ಆದರೆ, ಇದು ನಿಜಕ್ಕೂ ರೋಗಾಣುವನ್ನು ತಡೆಯಲು ಎಷ್ಟರ ಮಟ್ಟಿಗೆ ಸಮರ್ಥವಾಗಿ ಕೆಲಸಮಾಡುತ್ತೆ ಅನ್ನೋದು ಎಲ್ಲರ ಸಂಶಯ.

Follow Us
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!