AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋರ್ಷೆ ಕಾರು ಅಪಘಾತ: ವೇದಾಂತ್​ ಕುಡಿದ ಮತ್ತಿನಲ್ಲಿ ಕಾರು ಓಡಿಸುತ್ತಿದ್ದುದನ್ನು ಒಪ್ಪಿಕೊಂಡ ಸ್ನೇಹಿತ

ಪುಣೆಯಲ್ಲಿ ಸಂಭವಿಸಿದ ಪೋರ್ಷೆ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ವೇದಾಂತ್​ ಅಗರ್ವಾಲ್​ ಸ್ನೇಹಿತ ಕೆಲವು ಮಾಹಿತಿಗಳನ್ನು ನೀಡಿದ್ದಾರೆ. ಅಂದು ವೇದಾಂತ್​ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದುದು ಹೌದು ಎಂದು ಒಪ್ಪಿಕೊಂಡಿದ್ದಾರೆ.

ಪೋರ್ಷೆ ಕಾರು ಅಪಘಾತ: ವೇದಾಂತ್​ ಕುಡಿದ ಮತ್ತಿನಲ್ಲಿ ಕಾರು ಓಡಿಸುತ್ತಿದ್ದುದನ್ನು ಒಪ್ಪಿಕೊಂಡ ಸ್ನೇಹಿತ
ಕಾರು ಅಪಘಾತ
ನಯನಾ ರಾಜೀವ್
|

Updated on: May 29, 2024 | 11:44 AM

Share

ವೇದಾಂತ್ ಅಗರ್ವಾಲ್(Vedant Agarwal)​ ಕುಡಿದ ಮತ್ತಿನಲ್ಲಿ ಕಾರು ಓಡಿಸುತ್ತಿದ್ದ ಎನ್ನುವ ವಿಚಾರವನ್ನು ಆತನ ಸ್ನೇಹಿತ ಒಪ್ಪಿಕೊಂಡಿದ್ದಾರೆ. ಮೇ 19ರಂದು ಪುಣೆಯಲ್ಲಿ ಪೋರ್ಷೆ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು.

ಪುಣೆಯ ಅಪರಾಧ ವಿಭಾಗದ ಕಚೇರಿಯಲ್ಲಿ ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಆರೋಪಿ ಅಪ್ರಾಪ್ತ ಸ್ನೇಹಿತನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ.

ಘಟನೆ ಏನು? 17 ವರ್ಷದ ಬಾಲಕ ವೇದಾಂತ್​ ಅಗರ್ವಾಲ್​ ಎಂಬಾತ ತನ್ನ ಐಷಾರಾಮಿ ಪೋರ್ಷೆ ಕಾರು ಅಪಘಾತ ಮಾಡಿ ಇಬ್ಬರ ಜೀವ ತೆಗೆದಿದ್ದ. ಇದಾಗ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು, ಆದರೆ ಬಾಲಾಪರಾಧಿ ನ್ಯಾಯಾಲಯ ಆತನಿಗೆ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆ ಮಾಡಿತ್ತು. ಕೂಡಲೇ ಆತನ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು

ಆದರೆ ಸಾಕಷ್ಟು ಕಡೆಗಳಿಂದ ಇದಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಬಾಲಕನನ್ನು ಮತ್ತೆ ಬಂಧಿಸಲಾಗಿದೆ. ಇದಾದ ಬಳಿಕ ವಿಶಾಲ್​ ಅಗರ್ವಾಲ್​ ತಮ್ಮ ಕಾರಿಗೆ ಬೇರೆ ಚಾಲಕನಿದ್ದಾನೆ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಎಂದು ಹೇಳಿದ್ದರು.

ಆದರೆ ಕಾರು ಚಾಲಕ ಇಲ್ಲಾ ತಮ್ಮ ಮಗನೇ ಕಾರು ಓಡಿಸುತ್ತಾನೆ ನೀನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತುಕೊಳ್ಳುವಂತೆ ಹೇಳಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಮಧ್ಯೆ ವೇದಾಂತ್ ರಕ್ತದ ಮಾದರಿಯನ್ನು ಬದಲಿಸಲು ವೈದ್ಯರಿಗೆ 3 ಲಕ್ಷ ರೂ ಕೊಡಲಾಗಿತ್ತು ಎನ್ನುವ ಆರೋಪವೂ ಕೇಳಿಬಂದಿದೆ. ಹಾಗೆಯೇ ಅಪ್ರಾಪ್ತರಿಗೆ ಮದ್ಯ ನೀಡಿದ ಆರೋಪದ ಮೇಲೆ ಬಾರ್​ನ್ನು ಮುಚ್ಚಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ