ಪೋರ್ಷೆ ಕಾರು ಅಪಘಾತ: ವೇದಾಂತ್​ ಕುಡಿದ ಮತ್ತಿನಲ್ಲಿ ಕಾರು ಓಡಿಸುತ್ತಿದ್ದುದನ್ನು ಒಪ್ಪಿಕೊಂಡ ಸ್ನೇಹಿತ

ಪುಣೆಯಲ್ಲಿ ಸಂಭವಿಸಿದ ಪೋರ್ಷೆ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ವೇದಾಂತ್​ ಅಗರ್ವಾಲ್​ ಸ್ನೇಹಿತ ಕೆಲವು ಮಾಹಿತಿಗಳನ್ನು ನೀಡಿದ್ದಾರೆ. ಅಂದು ವೇದಾಂತ್​ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದುದು ಹೌದು ಎಂದು ಒಪ್ಪಿಕೊಂಡಿದ್ದಾರೆ.

ಪೋರ್ಷೆ ಕಾರು ಅಪಘಾತ: ವೇದಾಂತ್​ ಕುಡಿದ ಮತ್ತಿನಲ್ಲಿ ಕಾರು ಓಡಿಸುತ್ತಿದ್ದುದನ್ನು ಒಪ್ಪಿಕೊಂಡ ಸ್ನೇಹಿತ
ಕಾರು ಅಪಘಾತ
Follow us
|

Updated on: May 29, 2024 | 11:44 AM

ವೇದಾಂತ್ ಅಗರ್ವಾಲ್(Vedant Agarwal)​ ಕುಡಿದ ಮತ್ತಿನಲ್ಲಿ ಕಾರು ಓಡಿಸುತ್ತಿದ್ದ ಎನ್ನುವ ವಿಚಾರವನ್ನು ಆತನ ಸ್ನೇಹಿತ ಒಪ್ಪಿಕೊಂಡಿದ್ದಾರೆ. ಮೇ 19ರಂದು ಪುಣೆಯಲ್ಲಿ ಪೋರ್ಷೆ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು.

ಪುಣೆಯ ಅಪರಾಧ ವಿಭಾಗದ ಕಚೇರಿಯಲ್ಲಿ ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಆರೋಪಿ ಅಪ್ರಾಪ್ತ ಸ್ನೇಹಿತನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ.

ಘಟನೆ ಏನು? 17 ವರ್ಷದ ಬಾಲಕ ವೇದಾಂತ್​ ಅಗರ್ವಾಲ್​ ಎಂಬಾತ ತನ್ನ ಐಷಾರಾಮಿ ಪೋರ್ಷೆ ಕಾರು ಅಪಘಾತ ಮಾಡಿ ಇಬ್ಬರ ಜೀವ ತೆಗೆದಿದ್ದ. ಇದಾಗ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು, ಆದರೆ ಬಾಲಾಪರಾಧಿ ನ್ಯಾಯಾಲಯ ಆತನಿಗೆ ಷರತ್ತುಬದ್ಧ ಜಾಮೀನು ನೀಡಿ ಬಿಡುಗಡೆ ಮಾಡಿತ್ತು. ಕೂಡಲೇ ಆತನ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು

ಆದರೆ ಸಾಕಷ್ಟು ಕಡೆಗಳಿಂದ ಇದಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಬಾಲಕನನ್ನು ಮತ್ತೆ ಬಂಧಿಸಲಾಗಿದೆ. ಇದಾದ ಬಳಿಕ ವಿಶಾಲ್​ ಅಗರ್ವಾಲ್​ ತಮ್ಮ ಕಾರಿಗೆ ಬೇರೆ ಚಾಲಕನಿದ್ದಾನೆ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಎಂದು ಹೇಳಿದ್ದರು.

ಆದರೆ ಕಾರು ಚಾಲಕ ಇಲ್ಲಾ ತಮ್ಮ ಮಗನೇ ಕಾರು ಓಡಿಸುತ್ತಾನೆ ನೀನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತುಕೊಳ್ಳುವಂತೆ ಹೇಳಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಮಧ್ಯೆ ವೇದಾಂತ್ ರಕ್ತದ ಮಾದರಿಯನ್ನು ಬದಲಿಸಲು ವೈದ್ಯರಿಗೆ 3 ಲಕ್ಷ ರೂ ಕೊಡಲಾಗಿತ್ತು ಎನ್ನುವ ಆರೋಪವೂ ಕೇಳಿಬಂದಿದೆ. ಹಾಗೆಯೇ ಅಪ್ರಾಪ್ತರಿಗೆ ಮದ್ಯ ನೀಡಿದ ಆರೋಪದ ಮೇಲೆ ಬಾರ್​ನ್ನು ಮುಚ್ಚಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್