AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Porsche Car Accident: ಅಪಘಾತದ ಸಮಯದಲ್ಲಿ ತಾನು ಮದ್ಯಪಾನ ಮಾಡಿದ್ದೆ ಎಂದು ಒಪ್ಪಿಕೊಂಡ ಆರೋಪಿ ಬಾಲಕ

ಅಪಘಾತದ ಸಮಯದಲ್ಲಿ ತಾನು ಮದ್ಯಪಾನ ಮಾಡಿದ್ದಾಗಿ ಆರೋಪಿ ಬಾಲಕ ವೇದಾಂತ್​ ಒಪ್ಪಿಕೊಂಡಿದ್ದಾನೆ. ಮೇ 19ರಂದು ಪುಣೆಯಲ್ಲಿ ಐಷಾರಾಮಿ ಪೋರ್ಷೆ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು.

Porsche Car Accident: ಅಪಘಾತದ ಸಮಯದಲ್ಲಿ ತಾನು ಮದ್ಯಪಾನ ಮಾಡಿದ್ದೆ ಎಂದು ಒಪ್ಪಿಕೊಂಡ ಆರೋಪಿ ಬಾಲಕ
ನಯನಾ ರಾಜೀವ್
|

Updated on:Jun 02, 2024 | 11:13 AM

Share

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ(Porsche Car Accident) ಪ್ರಕರಣ ದಿನದಿಂದ ದಿನಕ್ಕೆ ಹೊಸ ಆಯಾಮವನ್ನು ಪಡೆದುಕೊಳ್ಳುತ್ತಿದೆ. ಒಂದೊಮ್ಮೆ ಬಾಲಕನ ತಂದೆ ತನ್ನ ಮಗ ಕಾರು ಓಡಿಸುತ್ತಲೇ ಇರಲಿಲ್ಲ ಎಂದು ಹೇಳಿಕೆ ಕೊಟ್ಟರೆ ಇನ್ನೊಂದೆಡೆ ಮಗ ಸ್ವತಃ ಅಪಘಾತದ ಸಮಯದಲ್ಲಿ ತಾನು ಕುಡಿದಿದ್ದೆ ಎಂಬುದಾಗಿ ಸತ್ಯ ಬಾಯ್ಬಿಟ್ಟಿದ್ದಾನೆ.

ಮೇ 19ರಂದು 17 ವರ್ಷದ ಬಾಲಕ ವೇದಾಂತ್​ ಅಗರ್ವಾಲ್​ ಎಂಬಾತ ಐಷಾರಾಮಿ ಪೋರ್ಷೆ ಕಾರನ್ನು ಕುಡಿದ ಮತ್ತಿನಲ್ಲಿ ಚಲಾಯಿಸಿಕೊಂಡು ಬಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು. ಕೂಡಲೇ ಆತನನ್ನು ಬಂಧಿಸಲಾಗಿತ್ತು, ಬಳಿಕ ಷರತ್ತಿನ ಮೇರೆಗೆ ಬಿಡುಗಡೆ ಮಾಡಲಾಗಿತ್ತು. ಜತೆಗೆ ಆತನ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಲಾಗಿತ್ತು.

ಆದರೆ ಎಲ್ಲೆಡೆ ವೇದಾಂತ್​ ಬಿಡುಗಡೆ ಕುರಿತು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತೆ ಬಂಧಿಸಲಾಗಿತ್ತು. ಇಷ್ಟೇ ಅಲ್ಲ ಆತನ ಅಜ್ಜ ಭೂಗತ ಪಾತಕಿ ಛೋಟಾ ರಾಜನ್​ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗಿದ್ದು, ಕಾರಿನ ಚಾಲಕನಿಗೆ ಬೆದರಿಸಿದ ಆರೋಪದ ಮೇಲೆ ಅವರನ್ನೂ ಬಂಧಿಸಲಾಗಿದೆ.

ಪೋರ್ಷೆ ಕಾರು ಅಪಘಾತ: ವೇದಾಂತ್​ ಕುಡಿದ ಮತ್ತಿನಲ್ಲಿ ಕಾರು ಓಡಿಸುತ್ತಿದ್ದುದನ್ನು ಒಪ್ಪಿಕೊಂಡ ಸ್ನೇಹಿತ

ಇನ್ನೊಂದೆಡೆ ತಮ್ಮ ಮಗ ಕುಡಿದಿರಲಿಲ್ಲ ಎಂದು ಸಾಬೀತು ಮಾಡುವ ಭರದಲ್ಲಿ ಆತನ ರಕ್ತದ ಮಾದರಿಯನ್ನು ಬದಲಿಸಲಾಗಿತ್ತು, ಬದಲಾಗಿ ಆತನ ತಾಯಿಯ ರಕ್ತದ ಮಾದರಿಯನ್ನು ಅಲ್ಲಿಡಲಾಗಿತ್ತು, ಈ ಸಂಬಂಧ ವೈದ್ಯರಿಗೆ 3 ಲಕ್ಷ ರೂ. ನೀಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಒಂದೊಡೆ ಚಾಲಕ ನಾನು ಡ್ರೈವಿಂಗ್​ ಸೀಟ್​ನಲ್ಲಿರಲಿಲ್ಲ ವಿಶಾಲ್​ ಅವರ ಮಾತಿನ ಮೇರೆಗೆ ವೇದಾಂತ್​ ಅವರನ್ನು ಡ್ರೈವಿಂಗ್​ ಸೀಟ್​ನಲ್ಲಿ ಕೂರಿಸಿ ನಾನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತಿದ್ದೆ ಎಂದು ಚಾಲಕ ಹೇಳಿಕೆ ನೀಡಿದ್ದರು. ಇದೀಗ ವೇದಾಂತ್​ ಅಗರ್ವಾಲ್​ ಸ್ವತಃ ಅಂದು ಅಪಘಾತದ ಸಮಯದಲ್ಲಿ ನಾನು ಕುಡಿದಿದ್ದೆ ಅಲ್ಲಿ ಏನಾಯಿತು ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:12 am, Sun, 2 June 24

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು