ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು

ಪುಣೆಯ ಪೋರ್ಷೆ ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ ವೇದಾಂತ್ ಅಗರ್ವಾಲ್​ ರಕ್ತದ ಮಾದರಿಯನ್ನು ಬದಲಾಯಿಸಿ ಡಸ್ಟ್​ಬಿನ್​ಗೆ ಎಸೆಯಲಾಗಿತ್ತು, ಈ ಕೆಲಸಕ್ಕೆ 3 ಲಕ್ಷ ರೂ ಕೊಡಲಾಗಿತ್ತು ಎನ್ನುವ ವಿಚಾರ ಇದೀಗ ಬಹಿರಂಗಗೊಂಡಿದೆ.

ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು
ಕಾರು ಅಪಘಾತImage Credit source: India Today
Follow us
|

Updated on: May 28, 2024 | 10:46 AM

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ(Porsche Car Accident) ಪ್ರಕರಣ ದಿನದಿಂದ ದಿನಕ್ಕೆ ಬೇರೆ ದಿಕ್ಕು ಪಡೆದುಕೊಳ್ಳುತ್ತಿದೆ. ಅಪ್ರಾಪ್ತ ಆರೋಪಿ ವೇದಾಂತ್​ ರಕ್ತದ ಮಾದರಿಯನ್ನು ಬದಲಾಯಿಸಲು ಆಸ್ಪತ್ರೆ ಸಿಬ್ಬಂದಿಗೆ 3 ಲಕ್ಷ ರು. ಕೊಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆರೋಪಿ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಆರೋಪಿಯನ್ನು ನಿರಪರಾಧಿ ಎಂದು ಸಾಬೀತುಮಾಡಲು ಈ ಕೃತ್ಯವೆಸಗಿದ್ದಾರೆ. ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿ ನಿಜವಾದ ಮಾದರಿಯನ್ನು ಡಸ್ಟ್​ಬಿನ್​ಗೆ ಎಸೆಯಲಾಗಿತ್ತು.

ಈ ಸಂಬಂಧ ಆಸ್ಪತ್ರೆ ಇಬ್ಬರ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ವರದಿಯಲ್ಲಿ ಆತನ ರಕ್ತದಲ್ಲಿ ಆಲ್ಕೋಹಾಲ್ ಇರಲಿಲ್ಲ ಎನ್ನುವ ವಿಚಾರ ಪೊಲೀಸರಿಗೆ ಆಶ್ಚರ್ಯ ಮೂಡಿಸಿತ್ತು.

ಮೇ 19ರಂದು ಕುಡಿದ ಮತ್ತಿನಲ್ಲಿ ವೇದಾಂತ್​ ಅಗರ್ವಾಲ್​ ತನ್ನ ಐಷಾರಾಮಿ ಪೋರ್ಷೆ ಕಾರು ಓಡಿಸಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ:  Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಇದಾದ ಬಳಿಕ ವೇದಾಂತ್​ನ್ನು ಪೊಲೀಸರು ಬಂಧಿಸಿದ್ದರು, ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿ ಆತನ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಎಲ್ಲೆಡೆ ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ವೇದಾಂತ್​ ಅಗರ್ವಾಲ್​ ಜಾಮೀನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿದೆ.

ಮೊದಲು ತಮ್ಮ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಚಾಲಕರಿದ್ದಾರೆ ಎಂದು ವಿಶಾಲ್ ಹೇಳಿದ್ದರು, ಆದರೆ ಚಾಲಕನನ್ನು ಕೇಳಿದಾಗ ಮಗ ಡ್ರೈವ್​ ಮಾಡ್ತಾನೆ ನೀನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತುಕೋ ಎಂದು ವಿಶಾಲ್​ ತನಗೆ ಹೇಳಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭೂಗತ ಪಾತಕಿ ಛೋಟಾ ರಾಜನ್ ಹಾಗೂ ವೇದಾಂತ್​ ಅಜ್ಜನಿಗೂ ನಂಟಿದೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ