AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು

ಪುಣೆಯ ಪೋರ್ಷೆ ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ ವೇದಾಂತ್ ಅಗರ್ವಾಲ್​ ರಕ್ತದ ಮಾದರಿಯನ್ನು ಬದಲಾಯಿಸಿ ಡಸ್ಟ್​ಬಿನ್​ಗೆ ಎಸೆಯಲಾಗಿತ್ತು, ಈ ಕೆಲಸಕ್ಕೆ 3 ಲಕ್ಷ ರೂ ಕೊಡಲಾಗಿತ್ತು ಎನ್ನುವ ವಿಚಾರ ಇದೀಗ ಬಹಿರಂಗಗೊಂಡಿದೆ.

ಪೋರ್ಷೆ ಕಾರು ಅಪಘಾತ: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ನೀಡಲಾಗಿತ್ತು
ಕಾರು ಅಪಘಾತImage Credit source: India Today
ನಯನಾ ರಾಜೀವ್
|

Updated on: May 28, 2024 | 10:46 AM

Share

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ(Porsche Car Accident) ಪ್ರಕರಣ ದಿನದಿಂದ ದಿನಕ್ಕೆ ಬೇರೆ ದಿಕ್ಕು ಪಡೆದುಕೊಳ್ಳುತ್ತಿದೆ. ಅಪ್ರಾಪ್ತ ಆರೋಪಿ ವೇದಾಂತ್​ ರಕ್ತದ ಮಾದರಿಯನ್ನು ಬದಲಾಯಿಸಲು ಆಸ್ಪತ್ರೆ ಸಿಬ್ಬಂದಿಗೆ 3 ಲಕ್ಷ ರು. ಕೊಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಆರೋಪಿ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಆರೋಪಿಯನ್ನು ನಿರಪರಾಧಿ ಎಂದು ಸಾಬೀತುಮಾಡಲು ಈ ಕೃತ್ಯವೆಸಗಿದ್ದಾರೆ. ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿ ನಿಜವಾದ ಮಾದರಿಯನ್ನು ಡಸ್ಟ್​ಬಿನ್​ಗೆ ಎಸೆಯಲಾಗಿತ್ತು.

ಈ ಸಂಬಂಧ ಆಸ್ಪತ್ರೆ ಇಬ್ಬರ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರೀಕ್ಷಾ ವರದಿಯಲ್ಲಿ ಆತನ ರಕ್ತದಲ್ಲಿ ಆಲ್ಕೋಹಾಲ್ ಇರಲಿಲ್ಲ ಎನ್ನುವ ವಿಚಾರ ಪೊಲೀಸರಿಗೆ ಆಶ್ಚರ್ಯ ಮೂಡಿಸಿತ್ತು.

ಮೇ 19ರಂದು ಕುಡಿದ ಮತ್ತಿನಲ್ಲಿ ವೇದಾಂತ್​ ಅಗರ್ವಾಲ್​ ತನ್ನ ಐಷಾರಾಮಿ ಪೋರ್ಷೆ ಕಾರು ಓಡಿಸಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ:  Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಇದಾದ ಬಳಿಕ ವೇದಾಂತ್​ನ್ನು ಪೊಲೀಸರು ಬಂಧಿಸಿದ್ದರು, ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿ ಆತನ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಎಲ್ಲೆಡೆ ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ವೇದಾಂತ್​ ಅಗರ್ವಾಲ್​ ಜಾಮೀನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿದೆ.

ಮೊದಲು ತಮ್ಮ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಚಾಲಕರಿದ್ದಾರೆ ಎಂದು ವಿಶಾಲ್ ಹೇಳಿದ್ದರು, ಆದರೆ ಚಾಲಕನನ್ನು ಕೇಳಿದಾಗ ಮಗ ಡ್ರೈವ್​ ಮಾಡ್ತಾನೆ ನೀನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತುಕೋ ಎಂದು ವಿಶಾಲ್​ ತನಗೆ ಹೇಳಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭೂಗತ ಪಾತಕಿ ಛೋಟಾ ರಾಜನ್ ಹಾಗೂ ವೇದಾಂತ್​ ಅಜ್ಜನಿಗೂ ನಂಟಿದೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ