Pune Porsche Crash: ಪೋರ್ಷೆ ಅಪಘಾತ; ಸಿಬಿಐ ತನಿಖೆ, ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ಪುಣೆಯಲ್ಲಿ ಮೇ 19ರಂದು ಮಧ್ಯರಾತ್ರಿ ಕುಡಿದು ಪೋರ್ಷೆ ಕಾರು ಚಲಾಯಿಸಿ, ಬೈಕ್​ನಲ್ಲಿದ್ದ ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳ ಸಾವಿಗೆ ಕಾರಣವಾಗಿದ್ದ 17 ವರ್ಷದ ಅಪ್ರಾಪ್ತ ಯುವಕನ ಪ್ರಕರಣ ಇದೀಗ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಹಾರಾಷ್ಟ್ರ ಕಾಂಗ್ರೆಸ್ ಒತ್ತಾಯಿಸಿದೆ.

Pune Porsche Crash: ಪೋರ್ಷೆ ಅಪಘಾತ; ಸಿಬಿಐ ತನಿಖೆ, ದೇವೇಂದ್ರ ಫಡ್ನವಿಸ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
ಪೋರ್ಷೆ ಅಪಘಾತ
Follow us
|

Updated on: May 28, 2024 | 10:05 PM

ಪುಣೆ: ಇಡೀ ದೇಶಾದ್ಯಂತ ಸುದ್ದಿಯಾಗಿದ್ದ ಪುಣೆ ಅಗರ್​ವಾಲ್ ಕುಟುಂಬದ ಪೋರ್ಷೆ ಅಪಘಾತದ (Pune Porsche Crash) ಕುರಿತು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಇಂದು ಒತ್ತಾಯಿಸಿದೆ. ಇದರ ಜೊತೆಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆಗೂ ಕಾಂಗ್ರೆಸ್ ಆಗ್ರಹಿಸಿದೆ. 10 ದಿನಗಳ ಹಿಂದೆ 17 ವರ್ಷದ ಯುವಕ ಎರಡು ಬಾರ್‌ಗಳಲ್ಲಿ ಪಾರ್ಟಿಯಲ್ಲಿ ಭಾಗವಹಿಸಿದ ನಂತರ ಪೋರ್ಷೆ ಕಾರನ್ನು ವೇಗವಾಗಿ ಚಲಾಯಿಸುತ್ತಿದ್ದಾಗ ಬೈಕ್​ನಲ್ಲಿ ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು ಕೊಂದಿದ್ದ. ಆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಸ್ತೆ ಸುರಕ್ಷತೆಯ ಬಗ್ಗೆ ಪ್ರಬಂಧ ಬರೆಯುವ ಷರತ್ತಿನಡಿಯಲ್ಲಿ ಆ ಅಪ್ರಾಪ್ತನನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದಕ್ಕೂ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದವು.

ಆ ಅಪ್ರಾಪ್ತನ ಬಿಡುಗಡೆಯು ರಾಷ್ಟ್ರವ್ಯಾಪಿ ಆಕ್ರೋಶವನ್ನು ಉಂಟುಮಾಡಿತು. ನಂತರ ಆತನ ಜಾಮೀನು ರದ್ದುಪಡಿಸಲಾಗಿತ್ತು. ಆ ಬಾಲಕನಿಗೆ ಅಕ್ರಮವಾಗಿ ಕಾರು ಚಲಾಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಆತನ ತಂದೆ ವಿಶಾಲ್ ಅಗರ್​ವಾಲ್​ನನ್ನು ಬಂಧಿಸಲಾಗಿತ್ತು. ಬಳಿಕ ಕಾರು ಚಾಲಕನಿಗೆ ಬೆದರಿಕೆ ಹಾಕಿ ಅಕ್ರಮವಾಗಿ ಬಂಧಿಸಿಟ್ಟಿದ್ದಕ್ಕೆ ಆ ಬಾಲಕನ ಅಜ್ಜ ಸುರೇಂದ್ರ ಅಗರ್​ವಾಲ್ ಅವರನ್ನು ಕೂಡ ಬಂಧಿಸಲಾಗಿತ್ತು.

ಇದನ್ನೂ ಓದಿ: Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಇದೀಗ ಸಸೂನ್ ಜನರಲ್ ಆಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಅಜಯ್ ತಾವರೆ ಮತ್ತು ಅದರ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಶ್ರೀಹರಿ ಹಾಲ್ನೋರ್ ಅವರನ್ನು ಸಹ ಆ ಬಾಲಾಪರಾಧಿಯ ರಕ್ತದ ಮಾದರಿಗಳನ್ನು ಬದಲಾಯಿಸಿದ್ದಕ್ಕೆ ಬಂಧಿಸಲಾಗಿದೆ. ಇದೀಗ ಅಗರ್​ವಾಲ್ ಕುಟುಂಬದ 3 ತಲೆಮಾರಿನವರು ಜೈಲು ಕಂಬಿ ಎಣಿಸುತ್ತಿದ್ದಾರೆ.

ಕಾಂಗ್ರೆಸ್‌ನ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಈ ಬಗ್ಗೆ ಮಾತನಾಡಿ, ಆಸ್ಪತ್ರೆಯು ಅಪರಾಧಿಗಳ ಪಂಚತಾರಾ ಹೋಟೆಲ್‌ ಆಗಿ ಮಾರ್ಪಟ್ಟಿದೆ. “ನಾಗ್ಪುರ, ಜಲಗಾಂವ್ ಮತ್ತು ಪುಣೆಯಲ್ಲಿ ಇಂತಹ ಘಟನೆಗಳು ವರದಿಯಾಗಿವೆ. ಆದರೆ ವಿಶೇಷ ಆರೋಪಿಗಳಿಗೆ ತಕ್ಷಣದ ಜಾಮೀನು ಸಿಗುವಂತೆ ಮಾಡಲು ಸರ್ಕಾರಿ ವ್ಯವಸ್ಥೆಯ ಮೂಲಕ ಪ್ರಯತ್ನಗಳನ್ನು ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಂಡಿತ; ಪುಣೆ ಪೋರ್ಷೆ ಅಪಘಾತದ ಬಗ್ಗೆ ಮೌನ ಮುರಿದ ಸಿಎಂ ಏಕನಾಥ್ ಶಿಂಧೆ

ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಹೇಳಿದ್ದಾರೆ. ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪವೂ ಇದೆ ಎಂದು ಆರೋಪಿಸಿದ್ದಾರೆ. ಅಪ್ರಾಪ್ತ ಆರೋಪಿಯ ಜತೆ ಶಾಸಕರೊಬ್ಬರ ಪುತ್ರನೂ ಇದ್ದ ಎಂದು ಅವರು ಆರೋಪಿಸಿದ್ದಾರೆ.

‘‘ಪುಣೆಯಲ್ಲಿ ಅಕ್ರಮ ಡ್ರಗ್ ದಂಧೆ ನಡೆಯುತ್ತಿದೆ. ಪುಣೆ, ನಾಗ್ಪುರದಲ್ಲಿ ಅಕ್ರಮ ಪಬ್ ಗಳ ಹಾವಳಿ ಹೆಚ್ಚಾಗಿದೆ. ಕಾರು ಅಪಘಾತ ಪ್ರಕರಣದ ಬಳಿಕ ಪುಣೆಯ 36 ಅಕ್ರಮ ಪಬ್ ಗಳನ್ನು ನೆಲಸಮಗೊಳಿಸಬೇಕಿತ್ತು. ಗುಜರಾತ್​ನಿಂದ ಮಹಾರಾಷ್ಟ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ತಂದು ಬಿಜೆಪಿ ಯುವಕರನ್ನು ಹಾಳು ಮಾಡಿದೆ.” ಎಂದು ಆರೋಪಿಸಿದ್ದಾರೆ. ಡಿಸಿಎಂ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ