ಲೋಕಸಭೆ ಹಂಗಾಮಿ ಸ್ಪೀಕರ್ ವಿವಾದ: ಕಾಂಗ್ರೆಸ್ ಸುಳ್ಳುಗಳನ್ನು ಹಬ್ಬಿಸುತ್ತಿದೆ ಎಂದ ಕಿರಣ್ ರಿಜಿಜು

ಲೋಕಸಭೆಯ ಹಂಗಾಮಿ ಸ್ಪೀಕರ್ ನೇಮಕವನ್ನು ಕಾಂಗ್ರೆಸ್ "ರಾಜಕೀಯಗೊಳಿಸುತ್ತಿದೆ" ಎಂದು ಆರೋಪಿಸಿದ ರಿಜಿಜು, ಇಲ್ಲಿ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ಹೇಳಿದ್ದಾರೆ.  ಸುರೇಶ್ ಅವರು ಎಂಟು ಬಾರಿ ಸಂಸದರಾಗಿದ್ದರೂ, 1998 ಮತ್ತು 2004ರಲ್ಲಿ ಲೋಕಸಭೆಯ ಸದಸ್ಯರಾಗಿಲ್ಲ ಆದ್ದರಿಂದ ಲೋಕಸಭೆಯಲ್ಲಿ ನಿರಂತರ ಅಧಿಕಾರಾವಧಿಯನ್ನು ಹೊಂದಿರಲಿಲ್ಲ ಎಂದು ರಿಜಿಜು ಹೇಳಿದ್ದಾರೆ.

ಲೋಕಸಭೆ ಹಂಗಾಮಿ ಸ್ಪೀಕರ್ ವಿವಾದ: ಕಾಂಗ್ರೆಸ್ ಸುಳ್ಳುಗಳನ್ನು ಹಬ್ಬಿಸುತ್ತಿದೆ ಎಂದ ಕಿರಣ್ ರಿಜಿಜು
ಕಿರಣ್ ರಿಜಿಜು
Follow us
|

Updated on: Jun 21, 2024 | 8:59 PM

ದೆಹಲಿ ಜೂನ್ 21: 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ (pro-tem speaker) ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ (Bhartruhari Mahtab) ಅವರನ್ನು ನೇಮಿಸಿದ ಕುರಿತು ಕಾಂಗ್ರೆಸ್ ಟೀಕೆಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju )ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಏಳನೇ ಬಾರಿಗೆ ಜಯಗಳಿಸಿದ ಮಹತಾಬ್ ಅವರನ್ನು ಜೂನ್ 19 ರಂದು ಭಾರತದ ರಾಷ್ಟ್ರಪತಿಗಳು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದರು. ಆದರೆ, ಎಂಟು ಬಾರಿ ಲೋಕಸಭಾ ಸಂಸದರಾಗಿದ್ದ ಕೋಡಿಕುನ್ನಿಲ್ ಸುರೇಶ್ ಅವರನ್ನು ಕಡೆಗಣಿಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರವು ಸಂಸದೀಯ ಮಾನದಂಡಗಳನ್ನು ನಿರ್ನಾಮ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಲೋಕಸಭೆಯ ಹಂಗಾಮಿ ಸ್ಪೀಕರ್ ನೇಮಕವನ್ನು ಕಾಂಗ್ರೆಸ್ “ರಾಜಕೀಯಗೊಳಿಸುತ್ತಿದೆ” ಎಂದು ಆರೋಪಿಸಿದ ರಿಜಿಜು, ಇಲ್ಲಿ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ಹೇಳಿದ್ದಾರೆ.  ಸುರೇಶ್ ಅವರು ಎಂಟು ಬಾರಿ ಸಂಸದರಾಗಿದ್ದರೂ, 1998 ಮತ್ತು 2004ರಲ್ಲಿ ಲೋಕಸಭೆಯ ಸದಸ್ಯರಾಗಿಲ್ಲ ಆದ್ದರಿಂದ ಲೋಕಸಭೆಯಲ್ಲಿ ನಿರಂತರ ಅಧಿಕಾರಾವಧಿಯನ್ನು ಹೊಂದಿರಲಿಲ್ಲ ಎಂದು ರಿಜಿಜು ಹೇಳಿದ್ದಾರೆ.

“ನಾವು ಸಂಸತ್ತಿನ ಕಲಾಪಗಳು ಉತ್ತಮ ಟಿಪ್ಪಣಿಯಲ್ಲಿ ಪ್ರಾರಂಭವಾಗುತ್ತವೆ ಎಂದು ನಾವು ನಿರೀಕ್ಷಿಸಿದ್ದೇವೆ. ಆದರೆ, ಸಂಸತ್ತಿನ ಮೊದಲ ಅಧಿವೇಶನ ಪ್ರಾರಂಭವಾಗುವ ಮುಂಚೆಯೇ, ಕಾಂಗ್ರೆಸ್ ಸುಳ್ಳುಗಳನ್ನು ಹರಡಲು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಎಲ್ಲರನ್ನು ದಾರಿ ತಪ್ಪಿಸುತ್ತದೆ” ಎಂದು ರಿಜಿಜು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಹಂಗಾಮಿ ಸ್ಪೀಕರ್ ಹುದ್ದೆಯು “ತುಂಬಾ ತಾತ್ಕಾಲಿಕ” ಮತ್ತು ಹೊಸ ಸ್ಪೀಕರ್ ಆಯ್ಕೆಯವರೆಗೂ ಅವರು ತಮ್ಮ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ರಿಜಿಜು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಪ್ರವಾಹ; ಡಬಲ್ ಇಂಜಿನ್ ಸರ್ಕಾರ ಜನರಿಗೆ ದ್ರೋಹ ಮಾಡಿದೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷದವರು ಈ ರೀತಿ ಮಾತನಾಡಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ ಎಂದು ಬಹಳ ವಿಷಾದದಿಂದ ಹೇಳಬೇಕಾಗಿದೆ. ಮೊದಮೊದಲು ಹಂಗಾಮಿ ಸ್ಪೀಕರ್ ಬಗ್ಗೆ ವಿವಾದ ಸೃಷ್ಟಿಸಿದರು. ಈ ಹಂಗಾಮಿ ಸ್ಪೀಕರ್ ಹುದ್ದೆ ತೀರಾ ತಾತ್ಕಾಲಿಕ. ನೂತನ ಸ್ಪೀಕರ್ ಆಯ್ಕೆಯಾಗುವವರೆಗೂ ತಮ್ಮ ಪಾತ್ರವನ್ನು ನಿರ್ವಹಿಸುತ್ತಾರೆ. ಎಂದು ರಿಜಿಜು ಹೇಳಿದ್ದಾರೆ.

2004ರಲ್ಲಿ ಒಂಬತ್ತು ಅವಧಿಯ ಸಂಸದ ಜಾರ್ಜ್ ಫರ್ನಾಂಡಿಸ್ ಲೋಕಸಭೆಯ ಸದಸ್ಯರಾಗಿದ್ದಾಗ ಎಂಟು ಅವಧಿಯ ಸದಸ್ಯ ಬಾಳಾಸಾಹೇಬ್ ವಿಖೆ ಪಾಟೀಲ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದಾಗ ಯುಪಿಎ ಸರ್ಕಾರ ಹಿರಿತನವನ್ನು ಕಡೆಗಣಿಸಿದೆ ಎಂದು ಸಚಿವರು ಹಿಂದಿನ ನಿದರ್ಶನಗಳನ್ನು ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?