AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋರ್ಷೆ ಕಾರು ಅಪಘಾತ: ಆರೋಪಿ ಬಾಲಕನ ಕುಟುಂಬ ಹಾಗೂ ಭೂಗತ ಪಾತಕಿ ಛೋಟಾ ರಾಜನ್​ಗಿದೆ ನಂಟು?

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಇಡಿ ದೇಶದಾದ್ಯಂತ ಸದ್ದು ಮಾಡಿದೆ. ಬಾಲಕನ ಅಜ್ಜ ಸುರೀಂದರ್ ಅಗರ್ವಾಲ್ ಹಾಗೂ ಜೈಲಿನಲ್ಲಿರುವ ಛೋಟಾ ರಾಜನ್​ನೊಂದಿಗೆ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ

ಪೋರ್ಷೆ ಕಾರು ಅಪಘಾತ: ಆರೋಪಿ ಬಾಲಕನ ಕುಟುಂಬ ಹಾಗೂ ಭೂಗತ ಪಾತಕಿ ಛೋಟಾ ರಾಜನ್​ಗಿದೆ ನಂಟು?
ನಯನಾ ರಾಜೀವ್
|

Updated on: May 22, 2024 | 2:36 PM

Share

ಪುಣೆಯ ಕಲ್ಯಾಣಿನಗರದಲ್ಲಿ ಶನಿವಾರ ರಾತ್ರಿ ಕುಡಿದ ಮತ್ತಿನಲ್ಲಿ 17ರ ಬಾಲಕ ವೇದಾಂತ್ ಅಗರ್ವಾಲ್(Vedant Agarwal) ವೇಗವಾಗಿ ದುಬಾರಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ಇಡೀ ದೇಶಾದ್ಯಂತ ಸದ್ದು ಮಾಡಿದೆ. ಆತ ಖ್ಯಾತ ಬಿಲ್ಡರ್​ ಪುತ್ರನಾಗಿದ್ದು, ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿ ತಂದೆಯನ್ನು ಬಂಧಿಸಲಾಗಿದೆ.

ವೇದಾಂತ್​ ಅಜ್ಜ ಸುರೀಂದರ್ ಅಗರ್ವಾಲ್ ಹಾಗೂ ಜೈಲಿನಲ್ಲಿರುವ ಛೋಟಾ ರಾಜನ್​ನೊಂದಿಗೆ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ಕೇವಲ 15 ಗಂಟೆಗಳಲ್ಲಿ ಬಾಲಾಪರಾಧಿ ನ್ಯಾಯಾಲಯ ಬಾಲಕನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಟ್ರಾಫಿಕ್​ ಪೊಲೀಸರ ಜತೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತದ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು ಇದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಛೋಟಾ ರಾಜನ್ ಹಾಗೂ ಸುರೀಂದರ್ ನಂಟು ಹೇಗೆ? ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಜಯ್ ಭೋಸ್ಲೆ ಎಂಬ ವ್ಯಕ್ತಿಯ ಕೊಲೆ ನಡೆದಿತ್ತು ಕೊಲೆ ಆರೋಪಿಗಳನ್ನು ಸುರೀಂದರ್ ಕೂಡ ಒಬ್ಬರು. ಈ ಕೊಲೆಯಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಕೂಡ ಶಾಮೀಲಾಗಿದ್ದರು.

ಮತ್ತಷ್ಟು ಓದಿ: ಕಾರು ಅಪಘಾತಕ್ಕೂ ಮುನ್ನ ಪಬ್​ನಲ್ಲಿ 90 ನಿಮಿಷಗಳಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದ ಬಾಲಕ

ಛೋಟಾ ರಾಜನ್​ ಬಂಧನದೊಂದಿಗೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು, ಇದನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲಾಯಿತು.

ಈ ಅಪಘಾತದ ಬಳಿಕ ಎರಡು ಪಬ್​ಗಳನ್ನು ಮುಚ್ಚಲು ಪುಣೆ ಕಲೆಕ್ಟರ್ ಸುಹಾಸ್ ದಿವಾಸೆ ಆದೇಶ ಹೊರಡಿಸಿದ್ದಾರೆ. ಮಗನ ಕಾರು ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬಾಲಕನ ತಂದೆ ನಾಪತ್ತೆಯಾಗಿದ್ದರು. ಬಳಿಕ ಅವರನ್ನು ಮಂಗಳವಾರ ಬಂಧಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್