AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಗೋಡೆಗೆ ಕೇಸರಿ ಬಣ್ಣ ಬಳಿದ ಬಿಜೆಪಿ ಸಂಸದೆ, ಹುಟ್ಟಿತೊಂದು ಹೊಸ ವಿವಾದ

ಹಳದಿ ಬಣ್ಣದ ಗೋಡೆಯ ಮೇಲೆ ಹಸಿರು ಬಣ್ಣ ಹಚ್ಚಿ ಹೂವಿನಿಂದ ಶೃಂಗಾರ ಮಾಡಿದ್ದ ಗೋಡೆಯನ್ನು ಬಿಜೆಪಿ ಸಂಸದೆ ಮೇಧಾ ಕೇಸರಿ ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ. ತಿಲಕ್ ರಸ್ತೆಯ ಗೋಡೆಯ ಮೇಲೆ ಏಕಾಏಕಿ ಹಸಿರು ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿ ಮೇಧಾ ಗೋಡೆಗೆ ಕೇಸರಿ ಬಣ್ಣ ಹಚ್ಚಿ ಗಣೇಶನ ಫೋಟೊವನ್ನು ಇರಿಸಿದ್ದಾರೆ.

ಹಸಿರು ಗೋಡೆಗೆ ಕೇಸರಿ ಬಣ್ಣ ಬಳಿದ ಬಿಜೆಪಿ ಸಂಸದೆ, ಹುಟ್ಟಿತೊಂದು ಹೊಸ ವಿವಾದ
ಸಂಸದೆ ಮೇಧಾ
ನಯನಾ ರಾಜೀವ್
|

Updated on: Dec 30, 2024 | 9:13 AM

Share

ಪುಣೆಯಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದೆ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಹಸಿರು ಗೋಡೆಗೆ ಕೇಸರಿ ಬಣ್ಣ ಬಳಿದಿರುವುದು ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಬಿಜೆಪಿ ನಾಯಕಿಯ ಕಾರ್ಯವೈಖರಿಯನ್ನು ಉದ್ಧವ್ ಸೇನಾ ನಾಯಕ ಪ್ರಶ್ನಿಸಿದ್ದಾರೆ. ಪುಣೆ ನಗರದ ಸದಾಶಿವ ಪೇಠೆಯಲ್ಲಿ ಗೋಡೆಗೆ ಹಸಿರು ಬಣ್ಣ ಬಳಿದು ಹೂವುಗಳನ್ನು ಹಾಕಲಾಗಿತ್ತು.

ಇದು ಗಮನಕ್ಕೆ ಬಂದ ತಕ್ಷಣ ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಆ ಜಾಗಕ್ಕೆ ತೆರಳಿ ಹಸಿರು ಬಣ್ಣದ ಮೇಲೆ ಕೇಸರಿ ಬಣ್ಣ ಬಳಿದು ಗಣೇಶನ ಫೋಟೊ ಇರಿಸಿದ್ದಾರೆ. ಜಾಗೃತ ಹಿಂದೂಗಳಾದ ನಾವು ನಮ್ಮ ಸುತ್ತಮುತ್ತ ಏನಾಗುತ್ತಿದೆ ಎಂಬುದರತ್ತ ಗಮನ ಹರಿಸಬೇಕು ಎಂದು ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಮನವಿ ಮಾಡಿದ್ದಾರೆ. ಈ ಸ್ಥಳದಲ್ಲಿ ಕೇಸರಿ ಬಣ್ಣ ಬಳಿದಿರುವ ಫೋಟೋಗಳು ಮತ್ತು ಸಂಬಂಧಿತ ಪೋಸ್ಟ್ ಅನ್ನು ಮೇಧಾ ಕುಲಕರ್ಣಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಜ್ಞಾನಪ್ರಬೋಧಿನಿ ಶಾಲೆಯ ಮುಂದಿನ ರಸ್ತೆಗೆ ಹಸಿರು ಬಣ್ಣ ಬಳಿದು ಹೂಮಾಲೆ, ಹೂ, ಅಗರಬತ್ತಿಗಳಿಂದ ಪೂಜೆ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ಹಾಗೂ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಬಗ್ಗೆ ಮಾಹಿತಿ ಪಡೆದ ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಸೇರಿದಂತೆ ಕೆಲವರು ಹಸಿರು ಬಣ್ಣ ಬಳಿದಿದ್ದ ಗೋಡೆಗೆ ಮತ್ತೆ ಕೇಸರಿ ಬಣ್ಣ ಬಳಿದು ಗಣೇಶನ ಫೋಟೋ ಹಾಕಿದ್ದರು. ಈ ಪ್ರಕರಣ ಪುಣೆ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ .

ಮತ್ತಷ್ಟು ಓದಿ:ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ

ಇದು ಪಿತೂರಿಯ ಭಾಗ ಎಂದು ಬಣ್ಣಿಸಿದ ಬಿಜೆಪಿ ಸಂಸದರು, ಪುಣೆಯಲ್ಲಿ ಮಾತ್ರವಲ್ಲ, ಮಹಾರಾಷ್ಟ್ರ ಸೇರಿದಂತೆ ಇತರ ಹಲವು ಕಡೆಗಳಲ್ಲಿ ಇಂತಹ ಚಟುವಟಿಕೆಗಳು ಇತ್ತೀಚೆಗೆ ಹೆಚ್ಚಿವೆ. ಪ್ರಜ್ಞಾಪೂರ್ವಕ ಹಿಂದೂವಾಗಿ ನಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಗಮನಹರಿಸಿ ಕ್ರಮ ತೆಗೆದುಕೊಳ್ಳೋಣ ಎಂದಿರುವ ಸಂಸದೆ ಇದರೊಂದಿಗೆ ತಮ್ಮ ಫೋನ್ ನಂಬರ್ ಕೂಡ ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ