AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಗೋಡೆಗೆ ಕೇಸರಿ ಬಣ್ಣ ಬಳಿದ ಬಿಜೆಪಿ ಸಂಸದೆ, ಹುಟ್ಟಿತೊಂದು ಹೊಸ ವಿವಾದ

ಹಳದಿ ಬಣ್ಣದ ಗೋಡೆಯ ಮೇಲೆ ಹಸಿರು ಬಣ್ಣ ಹಚ್ಚಿ ಹೂವಿನಿಂದ ಶೃಂಗಾರ ಮಾಡಿದ್ದ ಗೋಡೆಯನ್ನು ಬಿಜೆಪಿ ಸಂಸದೆ ಮೇಧಾ ಕೇಸರಿ ಬಣ್ಣಗಳಿಂದ ಕಂಗೊಳಿಸುವಂತೆ ಮಾಡಿದ್ದಾರೆ. ತಿಲಕ್ ರಸ್ತೆಯ ಗೋಡೆಯ ಮೇಲೆ ಏಕಾಏಕಿ ಹಸಿರು ಬಣ್ಣ ಹಚ್ಚಿರುವ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿ ಮೇಧಾ ಗೋಡೆಗೆ ಕೇಸರಿ ಬಣ್ಣ ಹಚ್ಚಿ ಗಣೇಶನ ಫೋಟೊವನ್ನು ಇರಿಸಿದ್ದಾರೆ.

ಹಸಿರು ಗೋಡೆಗೆ ಕೇಸರಿ ಬಣ್ಣ ಬಳಿದ ಬಿಜೆಪಿ ಸಂಸದೆ, ಹುಟ್ಟಿತೊಂದು ಹೊಸ ವಿವಾದ
ಸಂಸದೆ ಮೇಧಾ
ನಯನಾ ರಾಜೀವ್
|

Updated on: Dec 30, 2024 | 9:13 AM

Share

ಪುಣೆಯಲ್ಲಿ ಬಿಜೆಪಿಯ ರಾಜ್ಯಸಭಾ ಸಂಸದೆ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಹಸಿರು ಗೋಡೆಗೆ ಕೇಸರಿ ಬಣ್ಣ ಬಳಿದಿರುವುದು ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಬಿಜೆಪಿ ನಾಯಕಿಯ ಕಾರ್ಯವೈಖರಿಯನ್ನು ಉದ್ಧವ್ ಸೇನಾ ನಾಯಕ ಪ್ರಶ್ನಿಸಿದ್ದಾರೆ. ಪುಣೆ ನಗರದ ಸದಾಶಿವ ಪೇಠೆಯಲ್ಲಿ ಗೋಡೆಗೆ ಹಸಿರು ಬಣ್ಣ ಬಳಿದು ಹೂವುಗಳನ್ನು ಹಾಕಲಾಗಿತ್ತು.

ಇದು ಗಮನಕ್ಕೆ ಬಂದ ತಕ್ಷಣ ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಆ ಜಾಗಕ್ಕೆ ತೆರಳಿ ಹಸಿರು ಬಣ್ಣದ ಮೇಲೆ ಕೇಸರಿ ಬಣ್ಣ ಬಳಿದು ಗಣೇಶನ ಫೋಟೊ ಇರಿಸಿದ್ದಾರೆ. ಜಾಗೃತ ಹಿಂದೂಗಳಾದ ನಾವು ನಮ್ಮ ಸುತ್ತಮುತ್ತ ಏನಾಗುತ್ತಿದೆ ಎಂಬುದರತ್ತ ಗಮನ ಹರಿಸಬೇಕು ಎಂದು ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಮನವಿ ಮಾಡಿದ್ದಾರೆ. ಈ ಸ್ಥಳದಲ್ಲಿ ಕೇಸರಿ ಬಣ್ಣ ಬಳಿದಿರುವ ಫೋಟೋಗಳು ಮತ್ತು ಸಂಬಂಧಿತ ಪೋಸ್ಟ್ ಅನ್ನು ಮೇಧಾ ಕುಲಕರ್ಣಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಜ್ಞಾನಪ್ರಬೋಧಿನಿ ಶಾಲೆಯ ಮುಂದಿನ ರಸ್ತೆಗೆ ಹಸಿರು ಬಣ್ಣ ಬಳಿದು ಹೂಮಾಲೆ, ಹೂ, ಅಗರಬತ್ತಿಗಳಿಂದ ಪೂಜೆ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ಹಾಗೂ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಬಗ್ಗೆ ಮಾಹಿತಿ ಪಡೆದ ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಸೇರಿದಂತೆ ಕೆಲವರು ಹಸಿರು ಬಣ್ಣ ಬಳಿದಿದ್ದ ಗೋಡೆಗೆ ಮತ್ತೆ ಕೇಸರಿ ಬಣ್ಣ ಬಳಿದು ಗಣೇಶನ ಫೋಟೋ ಹಾಕಿದ್ದರು. ಈ ಪ್ರಕರಣ ಪುಣೆ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ .

ಮತ್ತಷ್ಟು ಓದಿ:ಬೆಳಗಾವಿ: ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ಎಂಇಎಸ್​ ಪುಂಡರ ಬಂಧನ

ಇದು ಪಿತೂರಿಯ ಭಾಗ ಎಂದು ಬಣ್ಣಿಸಿದ ಬಿಜೆಪಿ ಸಂಸದರು, ಪುಣೆಯಲ್ಲಿ ಮಾತ್ರವಲ್ಲ, ಮಹಾರಾಷ್ಟ್ರ ಸೇರಿದಂತೆ ಇತರ ಹಲವು ಕಡೆಗಳಲ್ಲಿ ಇಂತಹ ಚಟುವಟಿಕೆಗಳು ಇತ್ತೀಚೆಗೆ ಹೆಚ್ಚಿವೆ. ಪ್ರಜ್ಞಾಪೂರ್ವಕ ಹಿಂದೂವಾಗಿ ನಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಗಮನಹರಿಸಿ ಕ್ರಮ ತೆಗೆದುಕೊಳ್ಳೋಣ ಎಂದಿರುವ ಸಂಸದೆ ಇದರೊಂದಿಗೆ ತಮ್ಮ ಫೋನ್ ನಂಬರ್ ಕೂಡ ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ