AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತಕ್ಕೂ ಮುನ್ನ ಪಬ್​ನಲ್ಲಿ 90 ನಿಮಿಷಗಳಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದ ಬಾಲಕ

ಬಾಲಕ ಕಾರು ಅಪಘಾತ ಮಾಡುವ ಮುನ್ನ ಪಬ್​ನಲ್ಲಿ ಸ್ನೇಹಿತರೊಂದಿಗೆ ಸೇರಿ ಕೇವಲ 90 ನಿಮಿಷಗಳಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ನ್ಯೂಸ್​ 18 ಈ ಕುರಿತು ವರದಿ ಮಾಡಿದೆ.

ಕಾರು ಅಪಘಾತಕ್ಕೂ ಮುನ್ನ ಪಬ್​ನಲ್ಲಿ 90 ನಿಮಿಷಗಳಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದ ಬಾಲಕ
ನಯನಾ ರಾಜೀವ್
|

Updated on:May 22, 2024 | 12:38 PM

Share

ಕಾರು ಅಪಘಾತ(Car Accident)ಕ್ಕೂ ಮುನ್ನ ಅಪ್ರಾಪ್ತ ಬಾಲಕ ಪಬ್​ನಲ್ಲಿ 90 ನಿಮಿಷಗಳಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಪುಣೆಯಲ್ಲಿ ಅಪ್ರಾಪ್ತನೊಬ್ಬ(ವೇದಾಂತ್​ ಅಗರ್ವಾಲ್​) ಕುಡಿದ ಮತ್ತಿನಲ್ಲಿ ದುಬಾರಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದರು. ಬಳಿಕ ಪೊಲೀಸರು ಅವರನ್ನು ಬಂಧಿಸಿ 15ಗಂಟೆಗಳಲ್ಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ಹಲವರ ಕೆಂಗಣ್ಣಿಗೆ ಗುರಿಯಾಗಿತ್ತು.

ಅಪ್ರಾಪ್ತ ಬಾಲಕರಿಗೆ ಮದ್ಯ ನೀಡಿದ ಆರೋಪದ ಮೇಲೆ ಪಬ್​ ಹಾಗೂ ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಾಗಿದೆ. ಬಾಲಕ ಸ್ನೇಹಿತರೊಂದಿಗೆ ರಾತ್ರಿ 9.30 ರಿಂದ 10.30ರ ನಡುವೆ ಮದ್ಯ ಸೇವನೆ ಮಾಡಿದ್ದಾನೆ ಎಂದು ನ್ಯೂಸ್​ 18 ವರದಿ ಮಾಡಿದೆ.

ಐಷಾರಾಮಿ ಪೋರ್ಷೆ ಕಾರಿನ ಖಾಯಂ ನೋಂದಣಿ ಮಾರ್ಚ್​ನಿಂದ ಬಾಕಿ ಉಳಿದಿದೆ, ಮಾಲೀಕರು 1758 ರೂ. ಶುಲ್ಕವನ್ನು ಪಾವತಿಸಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಾಲಕನಿಗೆ ಜಾಮೀನು ನೀಡಿದ ಬಳಿಕ 15 ದಿನಗಳ ಕಾಲ ಟ್ರಾಫಿಕ್​ ಪೊಲೀಸರೊಂದಿಗೆ ಕೆಲಸ ಮಾಡಬೇಕು, ಅಪಘಾತಕ್ಕೆ ಸಂಬಂಧಿಸಿದಂತೆ 300 ಪುಟಗಳ ಪ್ರಬಂಧ ಬರೆಯಬೇಕು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಪೋರ್ಷೆ ಕಾರು ಅಪಘಾತ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ ಆರೋಪಿಗೆ ಪೊಲೀಸ್ ಕಸ್ಟಡಿಯಲ್ಲಿ ಪಿಜ್ಜಾ ನೀಡಲಾಗಿತ್ತು; ಕಾಂಗ್ರೆಸ್ ಆರೋಪ

 ಅಪ್ರಾಪ್ತ ಆರೋಪಿಗೆ ಪೊಲೀಸ್ ಕಸ್ಟಡಿಯಲ್ಲಿ ಪಿಜ್ಜಾ ನೀಡಲಾಗಿತ್ತು

ಪುಣೆಯಲ್ಲಿ ಪೋರ್ಷೆ ಕಾರು ಡಿಕ್ಕಿ ಹೊಡೆದು ಇಬ್ಬರು ಮೋಟಾರ್‌ಬೈಕ್ ಸವಾರರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಯಾಗಿರುವ ಅಪ್ರಾಪ್ತನಿಗೆ ಉತ್ತಮವಾದ ರೀತಿಯಲ್ಲಿ ಉಪಚರಿಸಿದ್ದರು ಎಂದು ಮಹಾರಾಷ್ಟ್ರದ ಕಾಂಗ್ರೆಸ್ (Congress) ಪಕ್ಷ ಹೇಳಿಕೊಂಡಿದೆ.

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ (MPCC) ಮುಖ್ಯ ವಕ್ತಾರ ಅತುಲ್ ಲೊಂಧೆ, ಆರೋಪಿಗೆ ಬಂಧನದಲ್ಲಿದ್ದಾಗ ಆತನಿಗೆ “ಪಿಜ್ಜಾ ಮತ್ತು ಬರ್ಗರ್ ನೀಡಲಾಯಿತು ಎಂದು ಆರೋಪಿಸಿ, ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಏತನ್ಮಧ್ಯೆ, ಪೊಲೀಸರು ಪ್ರಕರಣದ ನಿರ್ವಹಣೆಯ ಮೇಲೆ ರಾಜಕೀಯ ಒತ್ತಡ ಪ್ರಭಾವ ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪೊಲೀಸರ ಮೇಲೆ ಏನಾದರೂ ರಾಜಕೀಯ ಒತ್ತಡವಿದೆಯೇ? ಇದಕ್ಕೆ ಜನರಿಂದ ಉತ್ತರ ಸಿಗಬೇಕು. ಈ ಪ್ರಕರಣವನ್ನು ನಿಭಾಯಿಸಿದ ಎಲ್ಲ ಪೊಲೀಸರನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇತರ ನಾಗರಿಕರು ಅದೇ ರೀತಿಯ ಉಪಚಾರ ಪಡೆಯುತ್ತಾರೆಯೇ? ಎಂದು ಲೋಂಧೆ ಹೇಳಿರುವುದಾಗಿ ನ್ಯೂಸ್ 18 ವರದಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:44 am, Wed, 22 May 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ