AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಮದಿನಕ್ಕಾಗಿ ದುಬೈಗೆ ಟ್ರಿಪ್‌ ಹೋಗಲಿಲ್ಲ ಎಂದು ಮೂಗಿಗೆ ಹೊಡೆದು ಪತಿಯನ್ನು ಸಾಯಿಸಿದ ಪೂನಾ ಹೆಂಡತಿ!

ವನವಡಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಪತಿ ನಿಖಿಲ್ ಖನ್ನಾ ತನ್ನ ಹೆಂಡತಿಯ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆಯನ್ನು ಉಡುಗೊರೆಯಾಗಿ ನೀಡಲಿಲ್ಲ ಮತ್ತು ಅವಳು ಬಯಸಿದಂತೆ ದುಬೈಗೆ ಪ್ರವಾಸವನ್ನು ಯೋಜಿಸಲಿಲ್ಲ ಎಂಬ ಕಾರಣಕ್ಕಾಗಿ ದಂಪತಿ ಜಗಳವಾಡಿದ್ದರಂತೆ.

ಜನ್ಮದಿನಕ್ಕಾಗಿ ದುಬೈಗೆ ಟ್ರಿಪ್‌ ಹೋಗಲಿಲ್ಲ ಎಂದು ಮೂಗಿಗೆ ಹೊಡೆದು ಪತಿಯನ್ನು ಸಾಯಿಸಿದ ಪೂನಾ ಹೆಂಡತಿ!
ದುಬೈಗೆ ಟ್ರಿಪ್‌ ಹೋಗಲಿಲ್ಲ ಎಂದು ಪತಿಯನ್ನು ಸಾಯಿಸಿದ ಹೆಂಡತಿ!
ಸಾಧು ಶ್ರೀನಾಥ್​
|

Updated on: Nov 25, 2023 | 1:54 PM

Share

ಪುಣೆ: ಗಂಡ (husband) ನಿಖಿಲ್ ಖನ್ನಾ ತನ್ನ ಹೆಂಡತಿಯ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ (gift) ನೀಡಲಿಲ್ಲವೆಂದು, ಅವಳು ಬಯಸಿದಂತೆ ದುಬೈಗೆ (Dubai) ಪ್ರವಾಸ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕಾಗಿ ದಂಪತಿ ಮಧ್ಯೆ ಜಗಳವಾಗಿದೆ. ತನ್ನ ಸಂಬಂಧಿಕರ ಹುಟ್ಟುಹಬ್ಬ ಆಚರಣೆಗಾಗಿಯೂ (birthday celebration) ಈ ಹಿಂದೆ ದೆಹಲಿಗೆ ಕರೆದುಕೊಂಡು ಹೋಗಲು ನಿಖಿಲ್ ಒಪ್ಪಲಿಲ್ಲ ಎಂದೂ ಪತ್ನಿ (wife) ರೇಣುಕಾ ಅಸಮಾಧಾನಗೊಂಡಿದ್ದರು ಎಂದು ವನವಡಿ ಪೊಲೀಸ್ ಠಾಣೆಯ (Wanavdi Police station) ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಪತ್ನಿಯನ್ನು ಬಂಧಿಸಲಾಗಿದೆ.

ಹುಟ್ಟು ಹಬ್ಬಕ್ಕೆ ದುಬೈಗೆ ಕರೆದುಕೊಂಡು ಹೋಗಲು ನಿರಾಕರಿಸಿದ ಪತ್ನಿಯ ಮೂಗಿಗೆ ಗುದ್ದಿದ್ದರಿಂದ 36 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ಪುಣೆಯ ವನವಡಿ ಬಡಾವಣೆಯಲ್ಲಿರುವ ದಂಪತಿಯ ನಿವಾಸದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಆರು ವರ್ಷಗಳ ಹಿಂದೆ, ಸಾವಿಗೀಡಾದ ರಿಯಲ್​ ಎಸ್ಟೇಟ್​ ನಿರ್ಮಾಣ ಉದ್ಯಮದ ಉದ್ಯಮಿ ನಿಖಿಲ್ ಖನ್ನಾ ಅವರು 38 ವರ್ಷದ ರೇಣುಕಾ ಅವರನ್ನು ಪ್ರೀತಿಸಿ, ವಿವಾಹವಾಗಿದ್ದರು ಎಂದು Pune Times Mirror ವರದಿ ಮಾಡಿದೆ.

ವನವಡಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಪತಿ ನಿಖಿಲ್ ಖನ್ನಾ ತನ್ನ ಹೆಂಡತಿಯ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆಯನ್ನು ಉಡುಗೊರೆಯಾಗಿ ನೀಡಲಿಲ್ಲ ಮತ್ತು ಅವಳು ಬಯಸಿದಂತೆ ದುಬೈಗೆ ಪ್ರವಾಸವನ್ನು ಯೋಜಿಸಲಿಲ್ಲ ಎಂಬ ಕಾರಣಕ್ಕಾಗಿ ದಂಪತಿ ಜಗಳವಾಡಿದ್ದರಂತೆ. ತನ್ನ ಸಂಬಂಧಿಕರ ಹುಟ್ಟುಹಬ್ಬವನ್ನು ಆಚರಿಸುವುದಕ್ಕೂ ದೆಹಲಿಗೆ ಕರೆದುಕೊಂಡು ಹೋಗಲು ನಿಖಿಲ್ ಒಪ್ಪಲಿಲ್ಲ ಎಂದು ಪತ್ನಿ ರೇಣುಕಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರಂತೆ.

Also Read: ಆ ಯುವಕ ದುಬೈ ಸ್ಪರ್ಧೆಯಲ್ಲಿ 50 ಲಕ್ಷ ಗೆದ್ದಿದ್ದಕ್ಕೆ ಗ್ರಾಮೀಣ ಮಕ್ಕಳಿಗೆ ಹವಾನಿಯಂತ್ರಿತ ಬಸ್​ನಲ್ಲಿ ಕಂಪ್ಯೂಟರ್ ಪಾಠ ಕೇಳುವ ಭಾಗ್ಯ!

ಈ ಹಿನ್ನೆಲೆಯಲ್ಲಿ ತೀವ್ರ ವಾಗ್ವಾದದ ವೇಳೆ ರೇಣುಕಾ ತನ್ನ ಪತಿ ನಿಖಿಲ್ ಮುಖಕ್ಕೆ ಹೊಡೆದಿದ್ದಾಳೆ. ಗುದ್ದಿದ ರಭಸಕ್ಕೆ ನಿಖಿಲ್ ಅವರ ಮೂಗು ಮತ್ತು ಕೆಲವು ಹಲ್ಲುಗಳು ಮುರಿದಿವೆ. ಭಾರೀ ರಕ್ತಸ್ರಾವದಿಂದ ನಿಖಿಲ್ ಪ್ರಜ್ಞೆ ಕಳೆದುಕೊಂಡರು. ಈ ಮಾರಣಾಂತಿಕ ವಾಗ್ವಾದ ಪ್ರಕರಣದಿಂದಾಗಿ ಪೊಲೀಸರು ರೇಣುಕಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ