AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ: ಹುಟ್ಟುಹಬ್ಬಕ್ಕೆ ದುಬೈಗೆ ಕರೆದೊಯ್ಯಲಿಲ್ಲವೆಂದು ಪತಿಯನ್ನು ಗುದ್ದಿ ಕೊಂದ ಮಹಿಳೆ!

Pune Crime news: ಮಹಾರಾಷ್ಟ್ರದ ಪುಣೆಯ ವನವಡಿ ಪ್ರದೇಶದಲ್ಲಿ, ಹುಟ್ಟುಹಬ್ಬಕ್ಕೆ ದುಬೈಗೆ ಕರೆದೊಯ್ಯಲಿಲ್ಲವೆಂದು ಪತಿ ಪತ್ನಿ ನಡುವೆ ಜಗಳ ನಡೆದಿದೆ. ವಾಗ್ವಾದ ತೀವ್ರಗೊಂಡಿದ್ದು, ಕೋಪದಲ್ಲಿ ಗಂಡನ ಮೂಗಿಗೆ ಹೆಂಡತಿ ಬಲವಾಗಿ ಗುದ್ದಿದ್ದಾಳೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಆಮೇಲೇನಾಯ್ತು? ವಿವರ ಮುಂದೆ ಓದಿ...

ಪುಣೆ: ಹುಟ್ಟುಹಬ್ಬಕ್ಕೆ ದುಬೈಗೆ ಕರೆದೊಯ್ಯಲಿಲ್ಲವೆಂದು ಪತಿಯನ್ನು ಗುದ್ದಿ ಕೊಂದ ಮಹಿಳೆ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 25, 2023 | 11:58 AM

Share

ಪುಣೆ, ನವಂಬರ್ 25: ಆಘಾತಕಾರಿ ಘಟನೆಯೊಂದರಲ್ಲಿ, ಹುಟ್ಟುಹಬ್ಬಕ್ಕೆ ದುಬೈಗೆ ಕರೆದೊಯ್ಯಲಿಲ್ಲವೆಂದು ಮಹಿಳೆಯೊಬ್ಬರು ಪತಿಯ ಮೂಗಿಗೆ ಗುದ್ದಿದ ಪರಿಣಾಮ ಆತ ಮೃತಪಟ್ಟ ಘಟನೆ ಮಹಾರಾಷ್ಟ್ರದ (Maharashtra) ಪುಣೆಯ (Pune) ವನವಡಿ ಪ್ರದೇಶದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು 36 ವರ್ಷ ವಯಸ್ಸಿನ ನಿಖಿಲ್ ಖನ್ನಾ ಎಂದು ಗುರುತಿಸಲಾಗಿದೆ. ವನವಡಿ ಪ್ರದೇಶದಲ್ಲಿರುವ ಅಪಾರ್ಟ್​​ಮೆಂಟ್​ನ ಐಷಾರಾಮಿ ವಸತಿಗೃಹದಲ್ಲಿ ಘಟನೆ ನಡೆದಿದೆ.

ಮೃತ ನಿಖಿಲ್ ಕಟ್ಟಡ ನಿರ್ಮಾಣ ಕ್ಷೇತ್ರದ ಉದ್ಯಮಿಯಾಗಿದ್ದರು. ಇವರು ಆರು ವರ್ಷಗಳ ಹಿಂದೆ ರೇಣುಕಾ (38) ಅವರೊಂದಿಗೆ ಪ್ರೇಮ ವಿವಾಹವಾಗಿದ್ದರು ಎಂದು ವನವಡಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ರೇಣುಕಾ ಅವರ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಲು ಅವರನ್ನು ನಿಖಿಲ್ ದುಬೈಗೆ ಕರೆದುಕೊಂಡು ಹೋಗದ ಹಾಗೂ ಹುಟ್ಟುಹಬ್ಬದಂದು ದುಬಾರಿ ಉಡುಗೊರೆ ನೀಡದ ಕಾರಣ ದಂಪತಿ ನಡುವೆ ಜಗಳ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇಷ್ಟೇ ಅಲ್ಲದೆ, ಸಂಬಂಧಿಕರ ಹುಟ್ಟುಹಬ್ಬವನ್ನು ಆಚರಿಸಲು ದೆಹಲಿಗೆ ಹೋಗಬೇಕೆಂಬ ಬಯಕೆಗೆ ಕೂಡ ನಿಖಿಲ್‌ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ರೇಣುಕಾ ಅಸಮಾಧಾನಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳದ ಸಮಯದಲ್ಲಿ ನಿಖಿಲ್‌ನ ಮುಖಕ್ಕೆ ರೇಣುಕಾ ಗುದ್ದಿದ್ದಾರೆ. ಗುದ್ದಿದ ರಭಸಕ್ಕೆ ನಿಖಿಲ್ ಅವರ ಮೂಗು ಮತ್ತು ಕೆಲವು ಹಲ್ಲುಗಳು ಮುರಿದಿವೆ. ತೀವ್ರ ರಕ್ತಸ್ರಾವದಿಂದ, ನಿಖಿಲ್ ಪ್ರಜ್ಞೆ ಕಳೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪುಟ್ಟ ಬಾಲಕಿಯರಿಬ್ಬರ ಪ್ರಾಣ ತೆಗೆದ ಕಣ್ಣಾಮುಚ್ಚಾಲೆ ಆಟ ; ಏನಿದು ಘಟನೆ?

ಈ ಮಧ್ಯೆ, ಪೊಲೀಸರು ರೇಣುಕಾ ವಿರುದ್ಧ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆಗಾಗಿ ಅವರನ್ನು ಬಂಧಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು