AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆದು ನಿಂತ ಕರುವನ್ನು ಮನೆಯ ಮಗಳಂತೆ ಕಾಣುತ್ತಿರುವ ಮಹಿಳೆ, ನೋಡಲು ಕ್ಯೂ ನಿಲ್ಲುತ್ತಿರುವ ಜನ!

Punganur cross Breed calf: ಜಯಲಕ್ಷ್ಮೀಪುರಂ ಗ್ರಾಮದಲ್ಲಿ ಅಪರೂಪದ ಜಾತಿಯ ಕರುವನ್ನು ಮನೆ ಮಾಲಿಕರು ಮನೆಯ ಮಗುವಿಗಿಂತಲೂ ಹೆಚ್ಚು ಪ್ರೀತಿಸುತ್ತಾರೆ. ಈ ಅಪರೂಪದ ತಳಿಯನ್ನು ನೋಡಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ವಿಶೇಷವಾಗಿದೆ.

ಬೆಳೆದು ನಿಂತ ಕರುವನ್ನು ಮನೆಯ ಮಗಳಂತೆ ಕಾಣುತ್ತಿರುವ ಮಹಿಳೆ, ನೋಡಲು ಕ್ಯೂ ನಿಲ್ಲುತ್ತಿರುವ ಜನ!
ಬೆಳೆದು ನಿಂತ ಕರುವನ್ನು ಮನೆಯ ಮಗಳಂತೆ ಕಾಣುತ್ತಿರುವ ಮಹಿಳೆ, ನೋಡಲು ಕ್ಯೂ
ಸಾಧು ಶ್ರೀನಾಥ್​
|

Updated on: Feb 16, 2024 | 1:03 PM

Share

ಪುಂಗನೂರು ಹಸುಗಳು ಅಂದರೆ ಯಾರು ತಾನೆ ಪ್ರೀತಿಸದೆ ಇರುತ್ತಾರೆ ಹೇಳಿ? ಪುಂಗನೂರು ಜಾತಿಯ ಹಸುಗಳು ಬಹಳ ಅಪರೂಪವಾಗಿ ಕಾಣಸಿಗುತ್ತವೆ. ಈ ಜಾತಿಯ ಹಸುಗಳೂ ನಶಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ದೂರದ ಹಳ್ಳಿಯ ಮಹಿಳಾ ಅರ್ಚಕರೊಬ್ಬರು ತಮ್ಮ ಮನೆಯಲ್ಲಿ ಲಕ್ಷ್ಮಿ ದೇವಿ ಜನಿಸಿದ್ದಾಳೆಂದು ಪರಿಭಾವಿಸಿ, ಕರುವನ್ನು (Punganur cross Breed calf) ಹೆಣ್ಣು ಮಗುವಿನಂತೆ (Daughter) ಸಾಕುತ್ತಿದ್ದಾರೆ. ಖಮ್ಮಂ (Khammam) ಜಿಲ್ಲೆಯ ವೆಂಸೂರು ಮಂಡಲದ ಜಯಲಕ್ಷ್ಮೀಪುರಂ ಗ್ರಾಮದಲ್ಲಿ ಅಪರೂಪದ ಜಾತಿಯ ಕರುವನ್ನು ತುಂಬು ಆಪ್ಯಾಯತೆಯಿಂದ ಸಾಕಲಾಗುತ್ತಿದೆ.

ಗುಂಟ್ರು ವೆಂಕಟ ಸ್ವಾಮಿ -ತಿರುಪತಮ್ಮ ದಂಪತಿಗೆ ಒಬ್ಬ ಮಗನಿದ್ದಾನೆ. ಇವರಿಗೆ ಹೆಣ್ಣು ಮಗುವೆಂದರೆ ತುಂಬಾ ಇಷ್ಟ. ತಮಗೆ ಮಗಳು ಇಲ್ಲದಿದ್ದರೂ ಒಂದು ಹಸುವನ್ನು ತಂದು ಸಾಕುತ್ತಿದ್ದಾರೆ. ಅದೇ ಹಸುವಿಗೆ ಪಕ್ಕದ ಗ್ರಾಮದ ಪಶುವೈದ್ಯರ ನೆರವಿನಿಂದ ಚುಚ್ಚುಮದ್ದಿನ ಮೂಲಕ ಕ್ರಾಸಿಂಗ್​ ಮಾಡಿಸಿದ್ದು, ಪುಂಗನೂರು ತಳಿಯ ಹೆಣ್ಣು ಕರು ಹುಟ್ಟಿದೆ. ಇದರಿಂದ ಮನೆಯ ಯಜಮಾನಿ ತಿರುಪತಮ್ಮ ಹೇಳತೀರದ ಸಂತಸ ಅನುಭವಿಸಿದ್ದಾರೆ. ಸಾಕ್ಷಾತ್​​​ ಲಕ್ಷ್ಮೀದೇವಿ ಮನೆಗೆ ಬಂದಿದ್ದಾಳೆ. ಅದೃಷ್ಟ ಲಕ್ಷ್ಮಿ ಮನೆಗೆ ಬಂದಿದ್ದಾಳೆ ಎಂದು ನಿತ್ಯವೂ ಪೂಜಿಸುತ್ತಿದ್ದಾರೆ.

ಕರುವಿನ ಕುತ್ತಿಗೆ, ಕಾಲುಗಳು ಮತ್ತು ಹೊಟ್ಟೆ ಭಾಗಕ್ಕೆ ಮುತ್ತುಗಳನ್ನು ಕಟ್ಟಿ ಅಲಂಕರಿಸಿದ್ದಾರೆ. ಅದರ ಬಾಲ ಕೂದಲನ್ನು ಸುಂದರವಾಗಿ ಅಲಂಕರಿಸುತ್ತಾರೆ. ಅವರು ಅದನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಅದು ಅಪರೂಪದ ಪಂಗನೂರು ತಳಿಯ ಹಸುವಾಗಿದ್ದು, ನೋಡಲು ತುಂಬಾ ಮುದ್ದಾಗಿದೆ. ಕೇವಲ 2 ಅಡಿ ಎತ್ತರವಿದ್ದು, ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ತಿರುಗಾಡುತ್ತದೆ.

Also Read: ಆಂಧ್ರಪ್ರದೇಶ -ಸಿಂಹದ ಜತೆ ಸೆಲ್ಫಿ ತೆಗೆಯಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

ಈ ಅಪರೂಪದ ಜಾತಿಯ ಕರುವನ್ನು ನೋಡಲು ಸಾಕಷ್ಟು ಮಂದಿ ಇವರ ಮನೆಗೆ ಬರುತ್ತಿದ್ದಾರೆ. ಮನೆ ಮಾಲಿಕರು ಹೇಳುವಂತೆ ಅವರು ಕರುವನ್ನು ಮನೆಯ ಮಗುವಿಗಿಂತಲೂ ಹೆಚ್ಚು ಪ್ರೀತಿಸುತ್ತಾರೆ. ಏನೇ ಆಗಲಿ ಈ ಅಪರೂಪದ ತಳಿಯನ್ನು ನೋಡಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ವಿಶೇಷವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ