AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ

ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾದ ಕೆಲವು ದಿನಗಳ ನಂತರ ಇಂದು ನಸುಕಿನ ಜಾವ ಪಂಜಾಬ್​ನಲ್ಲಿ ಭೂಕಂಪ ಸಂಭವಿಸಿದೆ.

ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ
ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ
TV9 Web
| Updated By: Rakesh Nayak Manchi|

Updated on:Nov 14, 2022 | 7:33 AM

Share

ದೆಹಲಿ: ಸೋಮವಾರ (ನ.14) ಮುಂಜಾನೆ ಪಂಜಾಬ್‌ನ ಅಮೃತಸರ (Amritsar) ಬಳಿ 4.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ. ಬುಧವಾರ ಮತ್ತು ಶನಿವಾರದಂದು ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾದ ಕೆಲವು ದಿನಗಳ ನಂತರ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center for Seismology-NCS)ದ ಪ್ರಕಾರ ಸೋಮವಾರ ನಸುಕಿನ 3.42ರ ಸುಮಾರಿಗೆ 120 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಪಂಜಾಬ್​ನಲ್ಲಿನ ಭೂಕಂಪದ ಬಗ್ಗೆ ಟ್ವೀಟ್ ಮಾಡಿದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ, ಇಂದು (ನ.14) 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಪಂಜಾಬ್​ನ ಕೇಂದ್ರವಾಗಿರುವ ಅಮೃತಸರದ 145 ಕಿ.ಮೀ ದೂರದಲ್ಲಿ ಮುಂಜಾನೆ 3:42:27ರ ಸಮಯ್ಕೆ 31.95 ಲ್ಯಾಟ್, 73.38 ಉದ್ದಕ್ಕೆ ಮತ್ತು 120 ಕಿಮೀ ಆಳದಲ್ಲಿ ಈ ಭೂಕಂಪನ ಸಂಭವಿಸಿದೆ ಎಂದು ತಿಳಿದಿದೆ.

ರಾಷ್ಟ್ರ ರಾಜಧಾನಿ ಹಾಗೂ ಅಕ್ಕಪಕ್ಕದ ನಗರಗಳಲ್ಲಿ ನ.12 ರಾತ್ರಿ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿದೆ. ಇದು ವಾರದಲ್ಲಿ 2ನೇ ಬಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಮಾಹಿತಿ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳವಾಗಿದೆ. ನ್ಯೂ ತೆಹ್ರಿ, ಪಿಥೋರಗಢ್, ಬಾಗೇಶ್ವರ್, ಪೌರಿ ಮತ್ತು ಇತರ ಪಟ್ಟಣಗಳು ​​ಸೇರಿದಂತೆ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪದಿಂದ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ವರದಿಯಾಗಿಲ್ಲ. ಇದಕ್ಕೂ ಮುನ್ನ ನ.8ರಂದು ನೇಪಾಳದಲ್ಲಿ ಸರಿಸುಮಾರು 6.3 ತೀವ್ರತೆಯಷ್ಟು ಭೂಕಂಪ ಸಂಭವಿಸಿತ್ತು. ಇದರಿಂದ 6 ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡಿದ್ದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Mon, 14 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?