AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ

ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾದ ಕೆಲವು ದಿನಗಳ ನಂತರ ಇಂದು ನಸುಕಿನ ಜಾವ ಪಂಜಾಬ್​ನಲ್ಲಿ ಭೂಕಂಪ ಸಂಭವಿಸಿದೆ.

ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ
ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ
TV9 Web
| Edited By: Rakesh Nayak Manchi|

Updated on:Nov 14, 2022 | 7:33 AM

Share

ದೆಹಲಿ: ಸೋಮವಾರ (ನ.14) ಮುಂಜಾನೆ ಪಂಜಾಬ್‌ನ ಅಮೃತಸರ (Amritsar) ಬಳಿ 4.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ. ಬುಧವಾರ ಮತ್ತು ಶನಿವಾರದಂದು ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾದ ಕೆಲವು ದಿನಗಳ ನಂತರ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center for Seismology-NCS)ದ ಪ್ರಕಾರ ಸೋಮವಾರ ನಸುಕಿನ 3.42ರ ಸುಮಾರಿಗೆ 120 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಪಂಜಾಬ್​ನಲ್ಲಿನ ಭೂಕಂಪದ ಬಗ್ಗೆ ಟ್ವೀಟ್ ಮಾಡಿದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ, ಇಂದು (ನ.14) 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಪಂಜಾಬ್​ನ ಕೇಂದ್ರವಾಗಿರುವ ಅಮೃತಸರದ 145 ಕಿ.ಮೀ ದೂರದಲ್ಲಿ ಮುಂಜಾನೆ 3:42:27ರ ಸಮಯ್ಕೆ 31.95 ಲ್ಯಾಟ್, 73.38 ಉದ್ದಕ್ಕೆ ಮತ್ತು 120 ಕಿಮೀ ಆಳದಲ್ಲಿ ಈ ಭೂಕಂಪನ ಸಂಭವಿಸಿದೆ ಎಂದು ತಿಳಿದಿದೆ.

ರಾಷ್ಟ್ರ ರಾಜಧಾನಿ ಹಾಗೂ ಅಕ್ಕಪಕ್ಕದ ನಗರಗಳಲ್ಲಿ ನ.12 ರಾತ್ರಿ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿದೆ. ಇದು ವಾರದಲ್ಲಿ 2ನೇ ಬಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಮಾಹಿತಿ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳವಾಗಿದೆ. ನ್ಯೂ ತೆಹ್ರಿ, ಪಿಥೋರಗಢ್, ಬಾಗೇಶ್ವರ್, ಪೌರಿ ಮತ್ತು ಇತರ ಪಟ್ಟಣಗಳು ​​ಸೇರಿದಂತೆ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪದಿಂದ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ವರದಿಯಾಗಿಲ್ಲ. ಇದಕ್ಕೂ ಮುನ್ನ ನ.8ರಂದು ನೇಪಾಳದಲ್ಲಿ ಸರಿಸುಮಾರು 6.3 ತೀವ್ರತೆಯಷ್ಟು ಭೂಕಂಪ ಸಂಭವಿಸಿತ್ತು. ಇದರಿಂದ 6 ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡಿದ್ದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Mon, 14 November 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ