AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ

ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾದ ಕೆಲವು ದಿನಗಳ ನಂತರ ಇಂದು ನಸುಕಿನ ಜಾವ ಪಂಜಾಬ್​ನಲ್ಲಿ ಭೂಕಂಪ ಸಂಭವಿಸಿದೆ.

ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ
ದೆಹಲಿ ನಂತರ ಪಂಜಾಬ್‌ನ ಅಮೃತಸರ ಬಳಿ ಭೂಕಂಪ
TV9 Web
| Edited By: |

Updated on:Nov 14, 2022 | 7:33 AM

Share

ದೆಹಲಿ: ಸೋಮವಾರ (ನ.14) ಮುಂಜಾನೆ ಪಂಜಾಬ್‌ನ ಅಮೃತಸರ (Amritsar) ಬಳಿ 4.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ. ಬುಧವಾರ ಮತ್ತು ಶನಿವಾರದಂದು ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಕಂಪನದ ಅನುಭವವಾದ ಕೆಲವು ದಿನಗಳ ನಂತರ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center for Seismology-NCS)ದ ಪ್ರಕಾರ ಸೋಮವಾರ ನಸುಕಿನ 3.42ರ ಸುಮಾರಿಗೆ 120 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಪಂಜಾಬ್​ನಲ್ಲಿನ ಭೂಕಂಪದ ಬಗ್ಗೆ ಟ್ವೀಟ್ ಮಾಡಿದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ, ಇಂದು (ನ.14) 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಪಂಜಾಬ್​ನ ಕೇಂದ್ರವಾಗಿರುವ ಅಮೃತಸರದ 145 ಕಿ.ಮೀ ದೂರದಲ್ಲಿ ಮುಂಜಾನೆ 3:42:27ರ ಸಮಯ್ಕೆ 31.95 ಲ್ಯಾಟ್, 73.38 ಉದ್ದಕ್ಕೆ ಮತ್ತು 120 ಕಿಮೀ ಆಳದಲ್ಲಿ ಈ ಭೂಕಂಪನ ಸಂಭವಿಸಿದೆ ಎಂದು ತಿಳಿದಿದೆ.

ರಾಷ್ಟ್ರ ರಾಜಧಾನಿ ಹಾಗೂ ಅಕ್ಕಪಕ್ಕದ ನಗರಗಳಲ್ಲಿ ನ.12 ರಾತ್ರಿ 8 ಗಂಟೆ ಸುಮಾರಿಗೆ ಭೂಮಿ ಕಂಪಿಸಿದೆ. ಇದು ವಾರದಲ್ಲಿ 2ನೇ ಬಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಮಾಹಿತಿ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳವಾಗಿದೆ. ನ್ಯೂ ತೆಹ್ರಿ, ಪಿಥೋರಗಢ್, ಬಾಗೇಶ್ವರ್, ಪೌರಿ ಮತ್ತು ಇತರ ಪಟ್ಟಣಗಳು ​​ಸೇರಿದಂತೆ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪದಿಂದ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಾವುನೋವು ಅಥವಾ ಹಾನಿ ವರದಿಯಾಗಿಲ್ಲ. ಇದಕ್ಕೂ ಮುನ್ನ ನ.8ರಂದು ನೇಪಾಳದಲ್ಲಿ ಸರಿಸುಮಾರು 6.3 ತೀವ್ರತೆಯಷ್ಟು ಭೂಕಂಪ ಸಂಭವಿಸಿತ್ತು. ಇದರಿಂದ 6 ಮಂದಿ ಮೃತಪಟ್ಟು, 8 ಮಂದಿ ಗಾಯಗೊಂಡಿದ್ದರು.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Mon, 14 November 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ