AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಗ್ಯಾಂಗ್ ​​ಸ್ಟರ್​​ ಆಯೋಜಿಸಿದ ಪಾರ್ಟಿಯಲ್ಲಿ ಭಾಗಿಯಾದ 7 ಪೊಲೀಸರು ಅಮಾನತು

ಗ್ಯಾಂಗ್​​ಸ್ಟರ್ ಕಮಲ್ ಬೋರಿ ಇತ್ತೀಚೆಗೆ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ, ಈ ಖುಷಿಗೆ ಪಾರ್ಟಿ ಮಾಡಲಾಗಿದೆ. ಈ ಪಾರ್ಟಿಯಲ್ಲಿ ಐವರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಉಪ ಅಧೀಕ್ಷಕರು (ಡಿಎಸ್‌ಪಿ) ಶ್ರೇಣಿಯ ಅಧಿಕಾರಿಗಳು ಹಾಡುತ್ತ ಕುಣಿಯುತ್ತಿರುವ ವಿಡಿಯೋ ವೈರಲ್​​ ಆಗಿದೆ.

ಪಂಜಾಬ್: ಗ್ಯಾಂಗ್ ​​ಸ್ಟರ್​​ ಆಯೋಜಿಸಿದ ಪಾರ್ಟಿಯಲ್ಲಿ ಭಾಗಿಯಾದ 7 ಪೊಲೀಸರು ಅಮಾನತು
ಗ್ಯಾಂಗ್ ​​ಸ್ಟರ್​​ನೊಂದಿಗೆ ಪಾರ್ಟಿ ಮಾಡಿದ 7 ಪೊಲೀಸರು
ಅಕ್ಷಯ್​ ಪಲ್ಲಮಜಲು​​
|

Updated on: Aug 26, 2023 | 3:42 PM

Share

ಅಮೃತಸರ, ಆ.26: ಗ್ಯಾಂಗ್​​ಸ್ಟರ್ (Gangster Goes)​​ ಕಮಲ್ ಬೋರಿ ಜತೆಗೆ ಪಂಜಾಬ್​​ನ​​ (Punjab) ಅಮೃತಸರದ ಪೊಲೀಸರು ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದೀಗ ಏಳು ಪೊಲೀಸ್​​ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಶುಕ್ರವಾರ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿತ್ತು. ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಈ ಏಳು ಜನ ಪೊಲೀಸರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.

​​ಗ್ಯಾಂಗ್​​ಸ್ಟರ್ ಕಮಲ್ ಬೋರಿ ಇತ್ತೀಚೆಗೆ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ, ಈ ಖುಷಿಗೆ ಪಾರ್ಟಿ ಮಾಡಲಾಗಿದೆ. ಈ ಪಾರ್ಟಿಯಲ್ಲಿ ಐವರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಉಪ ಅಧೀಕ್ಷಕರು (ಡಿಎಸ್‌ಪಿ) ಶ್ರೇಣಿಯ ಅಧಿಕಾರಿಗಳು ಹಾಡುತ್ತ ಕುಣಿಯುತ್ತಿರುವ ವಿಡಿಯೋ ವೈರಲ್​​ ಆಗಿದೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಉನ್ನತ ಪೊಲೀಸ್​​ ಅಧಿಕಾರಿಗಳ ಮೇಲೆ ಹಿರಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಏಳು ಜನ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಲಾಗಿದ್ದ 76 ಫ್ಲ್ಯಾಟ್‌ಗಳನ್ನು ಹಸ್ತಾಂತರಿಸಿದ ಯೋಗಿ ಆದಿತ್ಯನಾಥ

ಇದರಲ್ಲಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಪಟಿಯಾಲ ಮತ್ತು ಬಟಿಂಡಾಗೆ ವರ್ಗಾವಣೆ ಮಾಡಲಾಗಿದೆ. ಜತೆಗೆ ಗ್ಯಾಂಗ್​​ ಸ್ಟರ್​ ಕಮಲ್ ಬೋರಿ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳಿದ್ದು, ಪೊಲೀಸರು ಇದೀಗ ಆತನನ್ನು ಕೂಡ ಬಂಧಿಸಿದ್ದಾರೆ. ಇನ್ನು ಪೊಲೀಸ್​​ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!