AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಗ್ಯಾಂಗ್ ​​ಸ್ಟರ್​​ ಆಯೋಜಿಸಿದ ಪಾರ್ಟಿಯಲ್ಲಿ ಭಾಗಿಯಾದ 7 ಪೊಲೀಸರು ಅಮಾನತು

ಗ್ಯಾಂಗ್​​ಸ್ಟರ್ ಕಮಲ್ ಬೋರಿ ಇತ್ತೀಚೆಗೆ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ, ಈ ಖುಷಿಗೆ ಪಾರ್ಟಿ ಮಾಡಲಾಗಿದೆ. ಈ ಪಾರ್ಟಿಯಲ್ಲಿ ಐವರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಉಪ ಅಧೀಕ್ಷಕರು (ಡಿಎಸ್‌ಪಿ) ಶ್ರೇಣಿಯ ಅಧಿಕಾರಿಗಳು ಹಾಡುತ್ತ ಕುಣಿಯುತ್ತಿರುವ ವಿಡಿಯೋ ವೈರಲ್​​ ಆಗಿದೆ.

ಪಂಜಾಬ್: ಗ್ಯಾಂಗ್ ​​ಸ್ಟರ್​​ ಆಯೋಜಿಸಿದ ಪಾರ್ಟಿಯಲ್ಲಿ ಭಾಗಿಯಾದ 7 ಪೊಲೀಸರು ಅಮಾನತು
ಗ್ಯಾಂಗ್ ​​ಸ್ಟರ್​​ನೊಂದಿಗೆ ಪಾರ್ಟಿ ಮಾಡಿದ 7 ಪೊಲೀಸರು
ಅಕ್ಷಯ್​ ಪಲ್ಲಮಜಲು​​
|

Updated on: Aug 26, 2023 | 3:42 PM

Share

ಅಮೃತಸರ, ಆ.26: ಗ್ಯಾಂಗ್​​ಸ್ಟರ್ (Gangster Goes)​​ ಕಮಲ್ ಬೋರಿ ಜತೆಗೆ ಪಂಜಾಬ್​​ನ​​ (Punjab) ಅಮೃತಸರದ ಪೊಲೀಸರು ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದೀಗ ಏಳು ಪೊಲೀಸ್​​ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಶುಕ್ರವಾರ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿತ್ತು. ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಈ ಏಳು ಜನ ಪೊಲೀಸರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.

​​ಗ್ಯಾಂಗ್​​ಸ್ಟರ್ ಕಮಲ್ ಬೋರಿ ಇತ್ತೀಚೆಗೆ ಜಾಮೀನಿನ ಮೇಲೆ ಹೊರಗಡೆ ಬಂದಿದ್ದ, ಈ ಖುಷಿಗೆ ಪಾರ್ಟಿ ಮಾಡಲಾಗಿದೆ. ಈ ಪಾರ್ಟಿಯಲ್ಲಿ ಐವರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಪೊಲೀಸ್ ಉಪ ಅಧೀಕ್ಷಕರು (ಡಿಎಸ್‌ಪಿ) ಶ್ರೇಣಿಯ ಅಧಿಕಾರಿಗಳು ಹಾಡುತ್ತ ಕುಣಿಯುತ್ತಿರುವ ವಿಡಿಯೋ ವೈರಲ್​​ ಆಗಿದೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಉನ್ನತ ಪೊಲೀಸ್​​ ಅಧಿಕಾರಿಗಳ ಮೇಲೆ ಹಿರಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಏಳು ಜನ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಲಾಗಿದ್ದ 76 ಫ್ಲ್ಯಾಟ್‌ಗಳನ್ನು ಹಸ್ತಾಂತರಿಸಿದ ಯೋಗಿ ಆದಿತ್ಯನಾಥ

ಇದರಲ್ಲಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಪಟಿಯಾಲ ಮತ್ತು ಬಟಿಂಡಾಗೆ ವರ್ಗಾವಣೆ ಮಾಡಲಾಗಿದೆ. ಜತೆಗೆ ಗ್ಯಾಂಗ್​​ ಸ್ಟರ್​ ಕಮಲ್ ಬೋರಿ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳಿದ್ದು, ಪೊಲೀಸರು ಇದೀಗ ಆತನನ್ನು ಕೂಡ ಬಂಧಿಸಿದ್ದಾರೆ. ಇನ್ನು ಪೊಲೀಸ್​​ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ