AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಗೆ ಗಂಡನಿಂದ ಕಪಾಳಮೋಕ್ಷ; ವಿಡಿಯೋ ವೈರಲ್

ಈ ವೀಡಿಯೊದಲ್ಲಿ ಬಲ್ಜಿಂದರ್ ಕೌರ್ ತನ್ನ ಪತಿ ಸುಖರಾಜ್ ಸಿಂಗ್ ಜೊತೆ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಸುಖರಾಜ್ ಸಿಂಗ್ ಎದ್ದು ಕೋಪದಿಂದ ಬಲ್ಜಿಂದರ್ ಕೌರ್‌ ಕಪಾಲಕ್ಕೆ ಹೊಡೆದಿದ್ದಾರೆ.

Viral Video: ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಗೆ ಗಂಡನಿಂದ ಕಪಾಳಮೋಕ್ಷ; ವಿಡಿಯೋ ವೈರಲ್
ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಯ ಕಪಾಲಕ್ಕೆ ಬಾರಿಸಿದ ಗಂಡ
TV9 Web
| Edited By: |

Updated on:Sep 02, 2022 | 10:26 AM

Share

ನವದೆಹಲಿ: ಗಂಡ-ಹೆಂಡತಿ ಜಗಳ ಬೀದಿಗಿಳಿದು ಜಗಳವಾಡುವುದು ಸಾಮಾನ್ಯ. ಆದರೆ, ಶಾಸಕಿಗೇ ಜನರೆದುರು ಗಂಡ ಕಪಾಲಕ್ಕೆ ಹೊಡೆದಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಗಂಡ- ಹೆಂಡತಿ ನಡುವೆ ಜಗಳ ಉಂಟಾದ ಪರಿಣಾಮ ಆಮ್ ಆದ್ಮಿ ಪಕ್ಷದ (AAP) ಶಾಸಕಿ ಬಲ್ಜಿಂದರ್ ಕೌರ್ (Baljinder Kaur) ಅವರಿಗೆ ಆಡಳಿತ ಪಕ್ಷದ ನಾಯಕರೂ ಆಗಿರುವ ಅವರ ಪತಿ ಕಪಾಳಮೋಕ್ಷ ಮಾಡಿದ್ದಾರೆ.

ತಲ್ವಾಂಡಿ ಸಾಬೊದಿಂದ 2 ಬಾರಿ ಶಾಸಕಿಯಾಗಿರುವ ಬಲ್ಜಿಂದರ್ ಕೌರ್ ಜೊತೆ ಜಗಳವಾಡಿದ ಆಕೆಯ ಗಂಡ ಜನರೆದುರೇ ಶಾಸಕಿಗೆ ಹೊಡೆದಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಬಲ್ಜಿಂದರ್ ಕೌರ್ ತನ್ನ ಪತಿ ಸುಖರಾಜ್ ಸಿಂಗ್ ಜೊತೆ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಸುಖರಾಜ್ ಸಿಂಗ್ ಎದ್ದು ಕೋಪದಿಂದ ಬಲ್ಜಿಂದರ್ ಕೌರ್‌ ಕಪಾಲಕ್ಕೆ ಹೊಡೆದಿದ್ದಾರೆ. ಆಗ ದಂಪತಿಗಳ ಬಳಿ ನಿಂತಿದ್ದ ಕೆಲವರು ಮಧ್ಯ ಪ್ರವೇಶಿಸಿ ಸುಖರಾಜ್ ಸಿಂಗ್​​ರನ್ನು ತಳ್ಳಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ: ಬಂಧನದ ಎಕ್ಸ್​ಕ್ಲ್ಯೂಸೀವ್ ವಿಡಿಯೋ ಇಲ್ಲಿದೆ

ಜುಲೈ 10ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕಿ ಬಲ್ಜಿಂದರ್ ಕೌರ್ ತನ್ನ ಪತಿಯ ವಿರುದ್ಧ ಯಾವುದೇ ದೂರು ದಾಖಲಿಸಿಲ್ಲ. ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಅವರು ಈ ವೀಡಿಯೊವನ್ನು ನೋಡಿದ್ದಾರೆ. ಈ ಘಟನೆಯ ಬಗ್ಗೆ ಸ್ವಯಂಪ್ರೇರಿತವಾಗಿ ನೋಟಿಸ್ ನೀಡುವುದಾಗಿ ಹೇಳಿದ್ದಾರೆ.

ಎಎಪಿಯ ಮಜಾ ಪ್ರದೇಶದ ಯುವ ವಿಭಾಗದ ಸಂಚಾಲಕರಾಗಿರುವ ಬಲ್ಜಿಂದರ್ ಕೌರ್ ಮತ್ತು ಸುಖರಾಜ್ ಸಿಂಗ್ ಫೆಬ್ರವರಿ 2019ರಲ್ಲಿ ವಿವಾಹವಾಗಿದ್ದರು. ಬಲ್ಜಿಂದರ್ ಕೌರ್ ಅವರು 2009ರಲ್ಲಿ ಪಟಿಯಾಲದ ಪಂಜಾಬ್ ವಿಶ್ವವಿದ್ಯಾಲಯದಿಂದ M Phil ಪದವಿ ಪಡೆದಿದ್ದಾರೆ. ರಾಜಕೀಯಕ್ಕೆ ಸೇರುವ ಮೊದಲು, ಬಲ್ಜಿಂದರ್ ಕೌರ್ ಫತೇಘರ್ ಸಾಹಿಬ್‌ನಲ್ಲಿರುವ ಮಾತಾ ಗುಜ್ರಿ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Fri, 2 September 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ