AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಗೆ ಗಂಡನಿಂದ ಕಪಾಳಮೋಕ್ಷ; ವಿಡಿಯೋ ವೈರಲ್

ಈ ವೀಡಿಯೊದಲ್ಲಿ ಬಲ್ಜಿಂದರ್ ಕೌರ್ ತನ್ನ ಪತಿ ಸುಖರಾಜ್ ಸಿಂಗ್ ಜೊತೆ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಸುಖರಾಜ್ ಸಿಂಗ್ ಎದ್ದು ಕೋಪದಿಂದ ಬಲ್ಜಿಂದರ್ ಕೌರ್‌ ಕಪಾಲಕ್ಕೆ ಹೊಡೆದಿದ್ದಾರೆ.

Viral Video: ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಗೆ ಗಂಡನಿಂದ ಕಪಾಳಮೋಕ್ಷ; ವಿಡಿಯೋ ವೈರಲ್
ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಯ ಕಪಾಲಕ್ಕೆ ಬಾರಿಸಿದ ಗಂಡ
TV9 Web
| Edited By: |

Updated on:Sep 02, 2022 | 10:26 AM

Share

ನವದೆಹಲಿ: ಗಂಡ-ಹೆಂಡತಿ ಜಗಳ ಬೀದಿಗಿಳಿದು ಜಗಳವಾಡುವುದು ಸಾಮಾನ್ಯ. ಆದರೆ, ಶಾಸಕಿಗೇ ಜನರೆದುರು ಗಂಡ ಕಪಾಲಕ್ಕೆ ಹೊಡೆದಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಗಂಡ- ಹೆಂಡತಿ ನಡುವೆ ಜಗಳ ಉಂಟಾದ ಪರಿಣಾಮ ಆಮ್ ಆದ್ಮಿ ಪಕ್ಷದ (AAP) ಶಾಸಕಿ ಬಲ್ಜಿಂದರ್ ಕೌರ್ (Baljinder Kaur) ಅವರಿಗೆ ಆಡಳಿತ ಪಕ್ಷದ ನಾಯಕರೂ ಆಗಿರುವ ಅವರ ಪತಿ ಕಪಾಳಮೋಕ್ಷ ಮಾಡಿದ್ದಾರೆ.

ತಲ್ವಾಂಡಿ ಸಾಬೊದಿಂದ 2 ಬಾರಿ ಶಾಸಕಿಯಾಗಿರುವ ಬಲ್ಜಿಂದರ್ ಕೌರ್ ಜೊತೆ ಜಗಳವಾಡಿದ ಆಕೆಯ ಗಂಡ ಜನರೆದುರೇ ಶಾಸಕಿಗೆ ಹೊಡೆದಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಬಲ್ಜಿಂದರ್ ಕೌರ್ ತನ್ನ ಪತಿ ಸುಖರಾಜ್ ಸಿಂಗ್ ಜೊತೆ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಸುಖರಾಜ್ ಸಿಂಗ್ ಎದ್ದು ಕೋಪದಿಂದ ಬಲ್ಜಿಂದರ್ ಕೌರ್‌ ಕಪಾಲಕ್ಕೆ ಹೊಡೆದಿದ್ದಾರೆ. ಆಗ ದಂಪತಿಗಳ ಬಳಿ ನಿಂತಿದ್ದ ಕೆಲವರು ಮಧ್ಯ ಪ್ರವೇಶಿಸಿ ಸುಖರಾಜ್ ಸಿಂಗ್​​ರನ್ನು ತಳ್ಳಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ: ಬಂಧನದ ಎಕ್ಸ್​ಕ್ಲ್ಯೂಸೀವ್ ವಿಡಿಯೋ ಇಲ್ಲಿದೆ

ಜುಲೈ 10ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕಿ ಬಲ್ಜಿಂದರ್ ಕೌರ್ ತನ್ನ ಪತಿಯ ವಿರುದ್ಧ ಯಾವುದೇ ದೂರು ದಾಖಲಿಸಿಲ್ಲ. ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಅವರು ಈ ವೀಡಿಯೊವನ್ನು ನೋಡಿದ್ದಾರೆ. ಈ ಘಟನೆಯ ಬಗ್ಗೆ ಸ್ವಯಂಪ್ರೇರಿತವಾಗಿ ನೋಟಿಸ್ ನೀಡುವುದಾಗಿ ಹೇಳಿದ್ದಾರೆ.

ಎಎಪಿಯ ಮಜಾ ಪ್ರದೇಶದ ಯುವ ವಿಭಾಗದ ಸಂಚಾಲಕರಾಗಿರುವ ಬಲ್ಜಿಂದರ್ ಕೌರ್ ಮತ್ತು ಸುಖರಾಜ್ ಸಿಂಗ್ ಫೆಬ್ರವರಿ 2019ರಲ್ಲಿ ವಿವಾಹವಾಗಿದ್ದರು. ಬಲ್ಜಿಂದರ್ ಕೌರ್ ಅವರು 2009ರಲ್ಲಿ ಪಟಿಯಾಲದ ಪಂಜಾಬ್ ವಿಶ್ವವಿದ್ಯಾಲಯದಿಂದ M Phil ಪದವಿ ಪಡೆದಿದ್ದಾರೆ. ರಾಜಕೀಯಕ್ಕೆ ಸೇರುವ ಮೊದಲು, ಬಲ್ಜಿಂದರ್ ಕೌರ್ ಫತೇಘರ್ ಸಾಹಿಬ್‌ನಲ್ಲಿರುವ ಮಾತಾ ಗುಜ್ರಿ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Fri, 2 September 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್