AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಗೆ ಗಂಡನಿಂದ ಕಪಾಳಮೋಕ್ಷ; ವಿಡಿಯೋ ವೈರಲ್

ಈ ವೀಡಿಯೊದಲ್ಲಿ ಬಲ್ಜಿಂದರ್ ಕೌರ್ ತನ್ನ ಪತಿ ಸುಖರಾಜ್ ಸಿಂಗ್ ಜೊತೆ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಸುಖರಾಜ್ ಸಿಂಗ್ ಎದ್ದು ಕೋಪದಿಂದ ಬಲ್ಜಿಂದರ್ ಕೌರ್‌ ಕಪಾಲಕ್ಕೆ ಹೊಡೆದಿದ್ದಾರೆ.

Viral Video: ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಗೆ ಗಂಡನಿಂದ ಕಪಾಳಮೋಕ್ಷ; ವಿಡಿಯೋ ವೈರಲ್
ಜನರೆದುರೇ ಪಂಜಾಬ್​ನ ಆಮ್ ಆದ್ಮಿ ಶಾಸಕಿಯ ಕಪಾಲಕ್ಕೆ ಬಾರಿಸಿದ ಗಂಡ
TV9 Web
| Edited By: |

Updated on:Sep 02, 2022 | 10:26 AM

Share

ನವದೆಹಲಿ: ಗಂಡ-ಹೆಂಡತಿ ಜಗಳ ಬೀದಿಗಿಳಿದು ಜಗಳವಾಡುವುದು ಸಾಮಾನ್ಯ. ಆದರೆ, ಶಾಸಕಿಗೇ ಜನರೆದುರು ಗಂಡ ಕಪಾಲಕ್ಕೆ ಹೊಡೆದಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಗಂಡ- ಹೆಂಡತಿ ನಡುವೆ ಜಗಳ ಉಂಟಾದ ಪರಿಣಾಮ ಆಮ್ ಆದ್ಮಿ ಪಕ್ಷದ (AAP) ಶಾಸಕಿ ಬಲ್ಜಿಂದರ್ ಕೌರ್ (Baljinder Kaur) ಅವರಿಗೆ ಆಡಳಿತ ಪಕ್ಷದ ನಾಯಕರೂ ಆಗಿರುವ ಅವರ ಪತಿ ಕಪಾಳಮೋಕ್ಷ ಮಾಡಿದ್ದಾರೆ.

ತಲ್ವಾಂಡಿ ಸಾಬೊದಿಂದ 2 ಬಾರಿ ಶಾಸಕಿಯಾಗಿರುವ ಬಲ್ಜಿಂದರ್ ಕೌರ್ ಜೊತೆ ಜಗಳವಾಡಿದ ಆಕೆಯ ಗಂಡ ಜನರೆದುರೇ ಶಾಸಕಿಗೆ ಹೊಡೆದಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಬಲ್ಜಿಂದರ್ ಕೌರ್ ತನ್ನ ಪತಿ ಸುಖರಾಜ್ ಸಿಂಗ್ ಜೊತೆ ಜಗಳವಾಡುತ್ತಿರುವುದನ್ನು ನೋಡಬಹುದು. ಆಗ ಸುಖರಾಜ್ ಸಿಂಗ್ ಎದ್ದು ಕೋಪದಿಂದ ಬಲ್ಜಿಂದರ್ ಕೌರ್‌ ಕಪಾಲಕ್ಕೆ ಹೊಡೆದಿದ್ದಾರೆ. ಆಗ ದಂಪತಿಗಳ ಬಳಿ ನಿಂತಿದ್ದ ಕೆಲವರು ಮಧ್ಯ ಪ್ರವೇಶಿಸಿ ಸುಖರಾಜ್ ಸಿಂಗ್​​ರನ್ನು ತಳ್ಳಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ: ಬಂಧನದ ಎಕ್ಸ್​ಕ್ಲ್ಯೂಸೀವ್ ವಿಡಿಯೋ ಇಲ್ಲಿದೆ

ಜುಲೈ 10ರಂದು ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕಿ ಬಲ್ಜಿಂದರ್ ಕೌರ್ ತನ್ನ ಪತಿಯ ವಿರುದ್ಧ ಯಾವುದೇ ದೂರು ದಾಖಲಿಸಿಲ್ಲ. ಪಂಜಾಬ್ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮನೀಶಾ ಗುಲಾಟಿ ಅವರು ಈ ವೀಡಿಯೊವನ್ನು ನೋಡಿದ್ದಾರೆ. ಈ ಘಟನೆಯ ಬಗ್ಗೆ ಸ್ವಯಂಪ್ರೇರಿತವಾಗಿ ನೋಟಿಸ್ ನೀಡುವುದಾಗಿ ಹೇಳಿದ್ದಾರೆ.

ಎಎಪಿಯ ಮಜಾ ಪ್ರದೇಶದ ಯುವ ವಿಭಾಗದ ಸಂಚಾಲಕರಾಗಿರುವ ಬಲ್ಜಿಂದರ್ ಕೌರ್ ಮತ್ತು ಸುಖರಾಜ್ ಸಿಂಗ್ ಫೆಬ್ರವರಿ 2019ರಲ್ಲಿ ವಿವಾಹವಾಗಿದ್ದರು. ಬಲ್ಜಿಂದರ್ ಕೌರ್ ಅವರು 2009ರಲ್ಲಿ ಪಟಿಯಾಲದ ಪಂಜಾಬ್ ವಿಶ್ವವಿದ್ಯಾಲಯದಿಂದ M Phil ಪದವಿ ಪಡೆದಿದ್ದಾರೆ. ರಾಜಕೀಯಕ್ಕೆ ಸೇರುವ ಮೊದಲು, ಬಲ್ಜಿಂದರ್ ಕೌರ್ ಫತೇಘರ್ ಸಾಹಿಬ್‌ನಲ್ಲಿರುವ ಮಾತಾ ಗುಜ್ರಿ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Fri, 2 September 22

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ