AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾರನ್ನು ಜುಲೈ 6 ರವರೆಗೆ ಬಂಧಿಸುವಂತಿಲ್ಲ: ಪಂಜಾಬ್ ಹೈಕೋರ್ಟ್

Tajinder Pal Singh Bagga ಶನಿವಾರ ತಡರಾತ್ರಿ ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೇಳಿದ ಮೂರು ದಿನಗಳ ನಂತರ ಈ ಆದೇಶ ಬಂದಿದೆ.

ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾರನ್ನು ಜುಲೈ 6 ರವರೆಗೆ  ಬಂಧಿಸುವಂತಿಲ್ಲ: ಪಂಜಾಬ್ ಹೈಕೋರ್ಟ್
ತಜೀಂದರ್ ಸಿಂಗ್ ಬಗ್ಗಾ
TV9 Web
| Edited By: |

Updated on:May 10, 2022 | 1:50 PM

Share

ದೆಹಲಿ: ದೆಹಲಿಯ ಬಿಜೆಪಿ (BJP) ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ (Tajinder Pal Singh Bagga) ಅವರನ್ನು ಜುಲೈ 6 ರವರೆಗೆ ಬಂಧಿಸುವಂತಿಲ್ಲ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ (Punjab and Haryana High Court ) ಆದೇಶ ನೀಡಿದೆ. ಶನಿವಾರ ತಡರಾತ್ರಿ ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೇಳಿದ ಮೂರು ದಿನಗಳ ನಂತರ ಈ ಆದೇಶ ಬಂದಿದೆ. ಮೊಹಾಲಿ ನ್ಯಾಯಾಲಯ ಬಗ್ಗಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ನ್ಯಾಯದ ಹಿತದೃಷ್ಟಿಯಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿರುವ ಆರೋಪಿ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರಿಗೆ ತನಿಖೆಗೆ ಅನುಕೂಲವಾಗುವಂತೆ ಜಾಮೀನು ರಹಿತ ವಾರಂಟ್ ಹೊರಡಿಸುವುದು ಅಗತ್ಯವಾಗಿದೆ ಎಂದು ನ್ಯಾಯಾಂಗ ಮ್ಯಾಜಿಸ್ಟ್ರೇಟ್ (1ನೇ ತರಗತಿ) ರಾವ್ತೇಶ್ ಇಂದರ್‌ಜಿತ್ ಸಿಂಗ್ ಹೇಳಿದ್ದು, ಪ್ರಕರಣವನ್ನು ಮೇ 23 ಕ್ಕೆ ಮುಂದೂಡಿದ್ದರು. ಮಾಧ್ಯಮಗಳಲ್ಲಿ ಮತ್ತು ಟ್ವಿಟರ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಪ್ರಕಟಿಸಿದ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 1 ರಂದು ಮೊಹಾಲಿಯಲ್ಲಿ ಬಗ್ಗಾ ವಿರುದ್ಧ ಈ ವಾರಂಟ್ ಹೊರಡಿಸಲಾಗಿದೆ. ಈ ಪ್ರಕರಣದಲ್ಲಿ ಶುಕ್ರವಾರ ಬೆಳಗ್ಗೆ ಅವರನ್ನು ದೆಹಲಿಯ ನಿವಾಸದಿಂದ ಬಂಧಿಸಲಾಗಿತ್ತು.

ಮೊಹಾಲಿ ಸಿಟಿ-1, ಮೊಹಾಲಿಯ ಡಿಎಸ್ಪಿ ಸುಖನಾಜ್ ಸಿಂಗ್ ಅವರು ಬಗ್ಗಾ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವ ಅರ್ಜಿಯು ಮೇ 10 ರಂದು ಹೈಕೋರ್ಟ್‌ನಲ್ಲಿ ಬಾಕಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಮೊಹಾಲಿ ತನ್ನ ಆದೇಶದಲ್ಲಿ ಹೇಳಿದೆ. ಬಗ್ಗಾ ಬಂಧನಕ್ಕೆ ಯಾವುದೇ ತಡೆ ಇಲ್ಲ ಅಥವಾ ಅವರು ಯಾವುದೇ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿಲ್ಲ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಮೇ 7 ರ ಮುಂಜಾನೆ ಬಗ್ಗಾ ಅವರನ್ನು ಜನಕ್‌ಪುರಿ ನಿವಾಸದಿಂದ ಪಂಜಾಬ್ ಪೊಲೀಸರು ಬಂಧಿಸಿದ ನಂತರ ಕಳೆದ ವಾರ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವಿನ ಜಟಾಪಟಿ  ಮುಂದುವರಿದಿದೆ.

ಇದನ್ನೂ ಓದಿ
Image
Tajinder Bagga Arrest ಬಂಧನದಿಂದ ರಕ್ಷಣೆ ನೀಡಿದ್ದಕ್ಕಾಗಿ ಪಂಜಾಬ್ ಹೈಕೋರ್ಟ್‌ಗೆ ಧನ್ಯವಾದ ಅರ್ಪಿಸಿದ ತಜೀಂದರ್ ಬಗ್ಗಾ

“ನನ್ನ ವಿರುದ್ಧ ಒಂದು ಅಥವಾ 100 ಎಫ್‌ಐಆರ್‌ಗಳು ದಾಖಲಾಗಿರಲಿ, ಗುರು ಗ್ರಂಥ ಸಾಹಿಬ್‌ನ ಅವಮಾನ ಮತ್ತು ಕಾಶ್ಮೀರಿ ಪಂಡಿತರಿಗೆ ಕೇಜ್ರಿವಾಲ್ ಮಾಡಿದ ಅವಮಾನದ ವಿಷಯಗಳನ್ನು ನಾನು ಎತ್ತುತ್ತಲೇ ಇರುತ್ತೇನೆ”. ಎಎಪಿ ಮತ್ತು ಅದರ ಮುಖ್ಯಸ್ಥ ಕೇಜ್ರಿವಾಲ್ ವಿರುದ್ಧ ಧ್ವನಿ ಎತ್ತಿದ್ದಕ್ಕೆ  ನನ್ನ ಮೇಲೆ ದಾಳಿ  ಮಾಡಲಾಗುತ್ತಿದೆ ಎಂದು ಬಗ್ಗಾ ಹೇಳಿದ್ದಾರೆ.  ಬಗ್ಗಾ ಬಂಧನ ಖಂಡಿಸಿ ಬಿಜೆಪಿ ನಾಯಕರು ದೆಹಲಿ ಮುಖ್ಯಮಂತ್ರಿಯವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದು ಕೇಜ್ರಿವಾಲ್ ನ್ನು  “ಸರ್ವಾಧಿಕಾರಿ” ಎಂದು  ಕರೆದಿದ್ದಾರೆ.

ಪಂಜಾಬ್‌ನಲ್ಲಿ ಗಲಭೆಗಳನ್ನು ಪ್ರಚೋದಿಸಿದ ಬಿಜೆಪಿ ಮತ್ತು ಅದರ ಸರ್ಕಾರಗಳು ತನ್ನ “ಗೂಂಡಾ” ವನ್ನು ರಕ್ಷಿಸುತ್ತಿವೆ ಎಂದು ಎಎಪಿ ಆರೋಪಿಸಿದೆ. ಎಎಪಿ ನಾಯಕ ಸನ್ನಿ ಅಹ್ಲುವಾಲಿಯಾ ಏಪ್ರಿಲ್ 1 ರಂದು ಮೊಹಾಲಿಯಲ್ಲಿ ಬಗ್ಗಾ ವಿರುದ್ಧ ದೂರು ನೀಡಿದ್ದು ,ಪ್ರಕರಣ ದಾಖಲಿಸಲಾಗಿತ್ತು.

ಬಗ್ಗಾ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಪಹರಣ ಪ್ರಕರಣ ದಾಖಲಿಸಿದ್ದಾರೆ. ಪಂಜಾಬ್ ಪೊಲೀಸರು ದೆಹಲಿಗೆ ಕರೆದೊಯ್ಯುತ್ತಿದ್ದಂತೆ,ಹರ್ಯಾಣ  ಪೊಲೀಸರು ತಡೆದಿದ್ದಾರೆ. ಬಗ್ಗಾರನ್ನು  ನಂತರ ದೆಹಲಿ ಪೊಲೀಸರು ರಾಜಧಾನಿಗೆ ಕರೆತಂದಿದ್ದು, ದ್ವಾರಕಾ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಮೊದಲು ಮೆಡಿಕೋ-ಲೀಗಲ್-ಕೇಸ್ (MLC) ಎಂದು DDU ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಹಿಂದೆ ಬಿಜೆಪಿ ನಾಯಕನ ವಿರುದ್ಧದ ವಾರಂಟ್‌ಗೆ ನ್ಯಾಯಾಲಯ ತಡೆ ನೀಡಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:20 pm, Tue, 10 May 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ