AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab New DGP: ಪ್ರಧಾನಿ ಭದ್ರತಾ ಲೋಪದ ಆರೋಪದ ಬೆನ್ನಲ್ಲೇ ಪಂಜಾಬ್​ನಲ್ಲಿ ನೂತನ ಡಿಜಿಪಿ ನೇಮಕ

ಪಂಜಾಬ್​ನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಅವರ ಅಧಿಕಾರಾವಧಿಯ ಸುಮಾರು 100 ದಿನಗಳಲ್ಲಿ ಮೂರನೇ ಬಾರಿಗೆ ಡಿಜಿಪಿಯನ್ನು ಬದಲಿಸಲಾಗಿದೆ. ಪಂಜಾಬ್ ನೂತನ ಪೊಲೀಸ್ ಮುಖ್ಯಸ್ಥರನ್ನಾಗಿ ವಿಕೆ ಭಾವ್ರಾ ಅವರನ್ನು ನೇಮಕ ಮಾಡಲಾಗಿದೆ.

Punjab New DGP: ಪ್ರಧಾನಿ ಭದ್ರತಾ ಲೋಪದ ಆರೋಪದ ಬೆನ್ನಲ್ಲೇ ಪಂಜಾಬ್​ನಲ್ಲಿ ನೂತನ ಡಿಜಿಪಿ ನೇಮಕ
ಪಂಜಾಬ್ ಡಿಜಿಪಿ ಭಾವ್ರಾ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 08, 2022 | 5:48 PM

Share

ಚಂಡೀಗಢ: ಪಂಜಾಬ್​ನಲ್ಲಿ ಉಂಟಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಲೋಪ ಇಡೀ ದೇಶಾದ್ಯಂತ ಭಾರೀ ಚರ್ಚೆಗೆ ಒಳಗಾಗಿತ್ತು. ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಆ ಘಟನೆಯ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆಯನ್ನೂ ನೀಡಿದ್ದರು. ಆದರೂ ಪ್ರಧಾನಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಹಾಗೇ, ಸುಪ್ರೀಂ ಕೋರ್ಟ್​ನಲ್ಲೂ ಈ ಬಗ್ಗೆ ವಿಚಾರಣೆ ನಡೆಸಲಾಗಿದೆ. ಇದರ ಬೆನ್ನಲ್ಲೇ ಪಂಜಾಬ್ ಸರ್ಕಾರ ಇಂದು (ಶನಿವಾರ) ವಿಕೆ ಭಾವ್ರ ಅವರನ್ನು ಪಂಜಾಬ್​ನ ನೂತನ ಪೊಲೀಸ್ ಮಹಾನಿರ್ದೇಶಕರನ್ನಾಗಿ (ಡಿಜಿಪಿ) ನೇಮಕ ಮಾಡಿದೆ.

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಅಂತಿಮಗೊಳಿಸಿದ್ದ ಮೂರು ಅಭ್ಯರ್ಥಿಗಳ ಪಟ್ಟಿಯಲ್ಲಿ ಭಾವ್ರ ಅವರನ್ನು ಡಿಜಿಪಿಯಾಗಿ ಆಯ್ಕೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ದಿನಕರ್ ಗುಪ್ತಾ ಮತ್ತು ಪ್ರಬೋಧ್ ಕುಮಾರ್ ಇತರರ ಹೆಸರು ಕೂಡ ಇತ್ತು. ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ವಿ.ಕೆ. ಭಾವ್ರ 1987ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಪಂಜಾಬ್​ನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಅವರ ಅಧಿಕಾರಾವಧಿಯ ಸುಮಾರು 100 ದಿನಗಳಲ್ಲಿ ಮೂರನೇ ಬಾರಿಗೆ ಡಿಜಿಪಿಯನ್ನು ಬದಲಿಸಲಾಗಿದೆ. ಚುನಾವಣಾ ಆಯೋಗವು ಮುಂದಿನ ತಿಂಗಳ ಚುನಾವಣೆಗೆ ಇಂದು ದಿನಾಂಕವನ್ನು ನಿಗದಿ ಮಾಡಿದ್ದು, ಅದಕ್ಕೂ ಮೊದಲೇ ಪಂಜಾಬ್ ಸರ್ಕಾರ ನೂತನ ಡಿಜಿಪಿಯನ್ನು ನೇಮಕ ಮಾಡಿದೆ.

ನಿರ್ಗಮಿತ ಪಂಜಾಬ್ ಡಿಜಿಪಿ ಸಿದ್ಧಾರ್ಥ್ ಚಟ್ಟೋಪಾಧ್ಯಾಯ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಕೇಂದ್ರ ಗೃಹ ಸಚಿವಾಲಯದ ತಂಡವು ಕರೆಸಿದ್ದು, ಫಿರೋಜ್‌ಪುರ ಜಿಲ್ಲೆಯ ಫ್ಲೈಓವರ್‌ನಲ್ಲಿ 20 ನಿಮಿಷಗಳ ಕಾಲ ಪ್ರಧಾನಿಯವರ ವಾಹನ ಮೆರವಣಿಗೆಯನ್ನು ಹಿಡಿದಿಟ್ಟುಕೊಳ್ಳಲು ಕಾರಣವಾದ ಸಂದರ್ಭಗಳ ಕುರಿತು ವಿಚಾರಣೆ ನಡೆಸುತ್ತಿದೆ. ಇದೀಗ ಹೊಸತಾಗಿ ನೇಮಕವಾಗಿರುವ ಡಿಜಿಪಿ ವಿಕೆ ಭಾವ್ರ ಎರಡು ವರ್ಷಗಳ (ಕನಿಷ್ಠ) ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಚಟ್ಟೋಪಾಧ್ಯಾಯ ಅವರ ಬದಲಾಗಿ ಭಾವ್ರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಭದ್ರತಾ ಲೋಪ; ಪಂಜಾಬ್​ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು 27 ಐಪಿಎಸ್ ಅಧಿಕಾರಿಗಳಿಂದ ರಾಷ್ಟ್ರಪತಿಗೆ ಪತ್ರ

ಪಂಜಾಬ್​ನಲ್ಲಿ ಪ್ರಧಾನಿ ಭದ್ರತಾ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಕಾರಣ; ಮಲ್ಲಿಕಾರ್ಜುನ ಖರ್ಗೆ ಆರೋಪ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ