AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bathinda Firing: ಬಟಿಂಡಾ ಸೇನಾ ಘಟಕದ ಮೇಲೆ ಗುಂಡಿನ ದಾಳಿ: ಹುತಾತ್ಮರಾದ ನಾಲ್ವರು ಯೋಧರ ಗುರುತು ಪತ್ತೆ

ಭಾರತೀಯ ಸೇನೆಯ ಪ್ರಕಾರ, ಶೋಧ ತಂಡವು INSAS ರೈಫಲ್ ಮತ್ತು ಕಾರ್ಟ್ರಿಡ್ಜ್ ಅನ್ನು ಪತ್ತೆ ಮಾಡಿದೆ. ಇವುಗಳನ್ನು ಈಗ ಪಂಜಾಬ್ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ತಂಡಗಳು ವಿಧಿವಿಜ್ಞಾನ ವಿಶ್ಲೇಷಣೆಗೆ ಒಳಪಡಿಸಲಿವೆ.

Bathinda Firing: ಬಟಿಂಡಾ ಸೇನಾ ಘಟಕದ ಮೇಲೆ ಗುಂಡಿನ ದಾಳಿ: ಹುತಾತ್ಮರಾದ ನಾಲ್ವರು ಯೋಧರ ಗುರುತು ಪತ್ತೆ
ಬಟಿಂಡಾ ಸೇನಾ ನೆಲೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 12, 2023 | 10:38 PM

Share

ಮುಖ್ಯಾಂಶಗಳು

  • ಪಂಜಾಬ್‌ನ ಬಟಿಂಡಾದ ಸೇನಾ ನೆಲೆಯ ಬ್ಯಾರಕ್‌ನಲ್ಲಿ ಯೋಧರು ನಿದ್ರಿಸುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ
  • ಬುಧವಾರ ಮುಂಜಾನೆ 4.30ರ ಸುಮಾರಿಗೆ ಘಟನೆ ನಡೆದಿದ್ದು, ವಿಸ್ತೃತ ತನಿಖೆಗೆ ಆದೇಶಿಸಲಾಗಿದೆ
  • ಕಾಣೆಯಾದ 28 ಗುಂಡುಗಳ ಪೈಕಿ 19 ಶವಗಳಲ್ಲಿ ಪತ್ತೆಯಾಗಿವೆ

ಪಂಜಾಬ್‌ನ (Punjab) ಬಟಿಂಡಾದ ಸೇನಾ ಘಟಕದ (Bathinda military station) ಬ್ಯಾರಕ್‌ನಲ್ಲಿ ಯೋಧರು ನಿದ್ರಿಸುತ್ತಿದ್ದಾಗ ಗುಂಡಿನ ದಾಳಿ ನಡೆದಿದ್ದು ನಾಲ್ವರು ಯೋಧರು ಗುಂಡಿಗೆ ಬಲಿಯಾಗಿದ್ದಾರೆ. ಇವರನ್ನು ಸಾಗರ್ ಬನ್ನೆ (25), ಕಮಲೇಶ್ ಆರ್ (24), ಯೋಗೇಶ್‌ಕುಮಾರ್ ಜೆ (24) ಮತ್ತು ಸಂತೋಷ್ ಎಂ ನಾಗರಾಳ್ (25) ಎಂದು ಗುರುತಿಸಲಾಗಿದೆ. ಅವರ ಕುಟುಂಬಗಳಿಗೆ ಸೂಚನೆ ನೀಡಲಾಗಿದೆ ಎಂದು ಸೇನೆಯು ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.ಮುಂಜಾನೆ 4.30ರ ಸುಮಾರಿಗೆ ಘಟನೆ ನಡೆದಿದ್ದು, ವಿಸ್ತೃತ ತನಿಖೆಗೆ ಆದೇಶಿಸಲಾಗಿದೆ ಎಂದು ಸೇನೆ ತಿಳಿಸಿದೆ.  ಹಲವಾರು ಇತರ ಅಂಶಗಳ ಪೈಕಿ, ಸೋಮವಾರ ನಾಪತ್ತೆಯಾದ INSAS ಅಸಾಲ್ಟ್ ರೈಫಲ್ ಮತ್ತು 28 ಬುಲೆಟ್‌ಗಳ ಮೇಲೆ ವಿಚಾರಣೆಗಳು ಕೇಂದ್ರೀಕರಿಸುತ್ತವೆ ಎಂದು ಪಂಜಾಬ್ ಪೊಲೀಸ್ ಅಧಿಕಾರಿಗಳು ವಿವರಿಸಿದರು.

ಕಾಣೆಯಾದ 28 ಗುಂಡುಗಳ ಪೈಕಿ 19 ಶವಗಳಲ್ಲಿ ಪತ್ತೆಯಾಗಿವೆ ಎಂದು ಘಟನೆಯ ತನಿಖೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಂಜೆ ಹೊತ್ತಿಗೆ ರೈಫಲ್ ಮತ್ತು ಅನಿರ್ದಿಷ್ಟ ಸಂಖ್ಯೆಯ ಬುಲೆಟ್‌ಗಳು ಪತ್ತೆಯಾಗಿವೆ.

ದಾಳಿಕೋರರು ಕುರ್ತಾ ಪೈಜಾಮ ಧರಿಸಿದ್ದರು

ಕುರ್ತಾ ಪೈಜಾಮ ಧರಿಸಿದ್ದ ಇಬ್ಬರು ಐಎನ್‌ಎಸ್‌ಎಎಸ್ ರೈಫಲ್ ಮತ್ತು ಕೊಡಲಿ ಹಿಡಿದುಕೊಂಡು ಬಟಿಂಡಾ ಮಿಲಿಟರಿ ಠಾಣೆಯಲ್ಲಿ ನಾಲ್ವರು ಯೋಧರನ್ನು ಕೊಂದಿದ್ದಾರೆ ಎಂದು ಪಂಜಾಬ್ ಪೊಲೀಸ್ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಬುಧವಾರ ತಿಳಿಸಿದೆ. ಎಫ್‌ಐಆರ್‌ನ ಪ್ರಕಾರ, ದಾಳಿಕೋರರಿಬ್ಬರೂ ಮುಖ ಮುಚ್ಚಿಕೊಂಡಿದ್ದರು.

ಭಾರತೀಯ ಸೇನೆಯ ಪ್ರಕಾರ, ಶೋಧ ತಂಡವು INSAS ರೈಫಲ್ ಮತ್ತು ಕಾರ್ಟ್ರಿಡ್ಜ್ ಅನ್ನು ಪತ್ತೆ ಮಾಡಿದೆ. ಇವುಗಳನ್ನು ಈಗ ಪಂಜಾಬ್ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ತಂಡಗಳು ವಿಧಿವಿಜ್ಞಾನ ವಿಶ್ಲೇಷಣೆಗೆ ಒಳಪಡಿಸಲಿವೆ.

ಇದನ್ನೂ ಓದಿ: Punjab: ಪಂಜಾಬ್​​ನ ಬಟಿಂಡಾ ಸೇನಾ ಠಾಣೆಯೊಳಗೆ ಗುಂಡಿನ ದಾಳಿ, ನಾಲ್ಕು ಸಾವು

ವಿಧಿವಿಜ್ಞಾನ ವಿಶ್ಲೇಷಣೆಯ ನಂತರವೇ ಶಸ್ತ್ರಾಸ್ತ್ರದಲ್ಲಿನ ಸುತ್ತುಗಳ ಬಾಕಿ ಸಂಖ್ಯೆ ಲಭ್ಯವಾಗಲಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಪಂಜಾಬ್ ಪೊಲೀಸರೊಂದಿಗೆ ಜಂಟಿ ತನಿಖೆ ಪ್ರಗತಿಯಲ್ಲಿದೆ. ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಯಾವುದೇ ವ್ಯಕ್ತಿಯನ್ನು ಬಂಧಿಸಲಾಗಿಲ್ಲ ಎಂದು ಸೇನೆ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ