AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಭಗವಂತ್ ಮಾನ್ ಸಂಪುಟದಲ್ಲಿ 10 ಮಂದಿ ಸಚಿವರು, ಇಲ್ಲಿದೆ ಸಚಿವರ ಪಟ್ಟಿ

ಮಾರ್ಚ್ 19 ರಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಸಚಿವ ಸಂಪುಟ ವಿಸ್ತರಣೆ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರದ ನಂತರ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಕ್ಯಾಬಿನೆಟ್ ಸಭೆಯನ್ನು ಮಧ್ಯಾಹ್ನ 12:30 ಕ್ಕೆ ನಡೆಸಲಿದ್ದಾರೆ.

ಪಂಜಾಬ್: ಭಗವಂತ್ ಮಾನ್ ಸಂಪುಟದಲ್ಲಿ 10 ಮಂದಿ ಸಚಿವರು, ಇಲ್ಲಿದೆ ಸಚಿವರ ಪಟ್ಟಿ
ಭಗವಂತ್ ಮಾನ್
TV9 Web
| Edited By: |

Updated on: Mar 18, 2022 | 9:25 PM

Share

ಚಂಡೀಗಢ: ಭಗವಂತ್ ಮಾನ್ (Bhagwant Mann) ಪಂಜಾಬ್ (Punjab) ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಶನಿವಾರ ರಚನೆಯಾಗಲಿರುವ ಅವರ ಹೊಸ ಸಚಿವ ಸಂಪುಟದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಒಟ್ಟು ಹತ್ತು ಮಂದಿ ಸಚಿವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಾರ್ಚ್ 19 ರಂದು ಬೆಳಗ್ಗೆ 11 ಗಂಟೆಗೆ ಚಂಡೀಗಢದಲ್ಲಿ ಸಚಿವ ಸಂಪುಟ ವಿಸ್ತರಣೆ ಸಮಾರಂಭ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರದ ನಂತರ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಕ್ಯಾಬಿನೆಟ್ ಸಭೆಯನ್ನು ಮಧ್ಯಾಹ್ನ 12:30 ಕ್ಕೆ ನಡೆಸಲಿದ್ದಾರೆ. ಪಂಜಾಬ್ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಒಟ್ಟು 18 ಸ್ಥಾನಗಳಿವೆ.  ಪಂಜಾಬ್‌ನ ಶಹೀದ್ ಭಗತ್ ಸಿಂಗ್ ನಗರ್ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಬುಧವಾರ ಭಗವಂತ್ ಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. “ಇಂಕಿಲಾಬ್ ಜಿಂದಾಬಾದ್” ಎಂಬ ಘೋಷಣೆಯೊಂದಿಗೆ ಮಾನ್ ತಮ್ಮ ಪ್ರಮಾಣವಚನವನ್ನು ಮುಗಿಸಿದ್ದರು.

ಪಂಜಾಬ್ ಸಂಪುಟ ವಿಸ್ತರಣೆ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರ ಪಟ್ಟಿ ಇಲ್ಲಿದೆ: ಹರ್ಪಾಲ್ ಸಿಂಗ್ ಚೀಮಾ ಡಾ ಬಲ್ಜಿತ್ ಕೌರ್ ಹರ್ಭಜನ್ ಸಿಂಗ್ ಇಟಿಒ ಡಾ ವಿಜಯ್ ಸಿಂಗ್ಲಾ ಲಾಲ್ ಚಂದ್ ಕತರುಚಕ್ ಗುರ್ಮೀತ್ ಸಿಂಗ್ ಮೀತ್ ಹೇಯರ್ ಕುಲದೀಪ್ ಸಿಂಗ್ ಧಲಿವಾಲ್ ಲಾಲ್ಜಿತ್ ಸಿಂಗ್ ಭುಲ್ಲರ್ ಬ್ರಾಮ್ ಶಂಕರ್ (ಜಿಂಪಾ) ಹರ್ಜೋತ್ ಸಿಂಗ್ ಬೈನ್ಸ್

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಚೊಚ್ಚಲ ಸಭೆಯಲ್ಲಿ, ಮುಖ್ಯಮಂತ್ರಿ ಮಾನ್ ಅವರು ರಾಜ್ಯವನ್ನು ಮುಂಚೂಣಿಯಲ್ಲಿರುವಂತೆ ಮಾಡಲು ಅಧಿಕಾರಿಗಳನ್ನು ಒತ್ತಾಯಿಸಿದರು. ಭಾರತೀಯ ಕ್ರಿಕೆಟ್ ತಂಡದ ಉದಾಹರಣೆಯನ್ನು ನೀಡಿದ ಅವರು, “ಪಂದ್ಯಗಳು ಗೆಲ್ಲುತ್ತವೆ ಅಥವಾ ಸೋಲುತ್ತವೆ ಆದರೆ ತಂಡದ ಮನೋಭಾವವು ಮುಖ್ಯವಾಗಿದೆ. ನಮ್ಮ ರಾಜ್ಯವನ್ನು ಲಂಡನ್, ಕ್ಯಾಲಿಫೋರ್ನಿಯಾ ಅಥವಾ ಪ್ಯಾರಿಸ್ ಅಲ್ಲ. ನಿಜವಾದ ಪಂಜಾಬ್ ಆಗಿ ಮಾಡುವುದು ನಮ್ಮ ಪ್ರಧಾನ ಕಾಳಜಿಯಾಗಬೇಕು ಎಂದು ಹೇಳಿದ್ದಾರೆ. ಎಎಪಿ ಪಂಜಾಬ್‌ನಲ್ಲಿ 117 ಸದಸ್ಯರ ಅಸೆಂಬ್ಲಿಯಲ್ಲಿ 92 ಸ್ಥಾನಗಳನ್ನು ಗಳಿಸುವ ಮೂಲಕ ಚುನಾವಣಾ ವಿಜಯವನ್ನು ಗಳಿಸಿತು. ಪಕ್ಷದ ಹೊಸದಾಗಿ ಚುನಾಯಿತರಾದ ಬಹುಪಾಲು ಶಾಸಕರು ಮೊದಲ ಬಾರಿಗೆ ಚುನಾವಣೆ ಸ್ಪರ್ಧಿಸಿದವರಾಗಿದ್ದಾರೆ.

ಇದನ್ನೂ ಓದಿ: ನವೀನ್‌ ದೇಹ ಸೋಮವಾರ ಆಗಮನ: ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಶರೀರ ದಾನ -ನವೀನ್ ತಂದೆ ಶೇಖರಗೌಡ

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!