AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​ನಲ್ಲಿ ಬಿಜೆಪಿ ಕಾರ್ಯಕ್ರಮ: ರೈತ ಪ್ರತಿಭಟನಾಕಾರರನ್ನು ನೋಡಿ ಹಿಂಬಾಗಿಲಿನಿಂದ ಪರಾರಿಯಾದ ನಾಯಕರು!

ಪ್ರತಿಭಟನಾನಿರತ ರೈತರು ಹೋಟೆಲ್​ಗೆ ಮುತ್ತಿಗೆ ಹಾಕಲು ಪ್ರಯತನ್ನಿಸಿದ್ದು, ಬಿಜೆಪಿ ನಾಯಕರು ಹಿಂಬಾಗಿಲಿನಿಂದ ಓಡಿ ಹೋಗಿದ್ದಾರೆ!

ಹೋಟೆಲ್​ನಲ್ಲಿ ಬಿಜೆಪಿ ಕಾರ್ಯಕ್ರಮ: ರೈತ ಪ್ರತಿಭಟನಾಕಾರರನ್ನು ನೋಡಿ ಹಿಂಬಾಗಿಲಿನಿಂದ ಪರಾರಿಯಾದ ನಾಯಕರು!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 9:42 PM

Share

ಅಮೃತ​ಸರ: ಇಂದು ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಈ ವಿಶೇಷ ದಿನವನ್ನು ಆಚರಣೆ ಮಾಡಲು ಪಂಜಾಬ್​ ಬಿಜೆಪಿ ನಾಯಕರು ಹೋಟೆಲ್​ ಒಂದರಲ್ಲಿ ಸೇರಿದ್ದರು. ಈ ವೇಳೆ ಪ್ರತಿಭಟನಾನಿರತ ರೈತರು ಹೋಟೆಲ್​ಗೆ ಮುತ್ತಿಗೆ ಹಾಕಲು ಪ್ರಯತನ್ನಿಸಿದ್ದು, ಬಿಜೆಪಿ ನಾಯಕರು ಹಿಂಬಾಗಿಲಿನಿಂದ ಓಡಿ ಹೋಗಿದ್ದಾರೆ!

ಫಾಗ್ವಾರದ ಹೋಟೆಲ್​ ಒಂದರಲ್ಲಿ ಬಿಜೆಪಿ ನಾಯಕರು ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದರು. ಬಿಜೆಪಿ ನಾಯಕರಿಗೆ ಪೊಲೀಸ್​ ಭದ್ರತೆ ಕೂಡ ಇತ್ತು. ಇದನ್ನು ಅರಿತ ಭಾರ್ತಿ ಕಿಸಾನ್​ ಯೂನಿಯನ್​ ಹೋಟೆಲ್​ ಹೊರ ಭಾಗದಲ್ಲಿ ಪ್ರತಿಭಟೆ ನಡೆಸಿದ್ದಾರೆ.

ಕೆಲವರು ಒಳಗೆ ಸೇರಿದ್ದರೆ, ಇನ್ನೂ ಕೆಲವರು ಕಾರ್ಯಕ್ರಮಕ್ಕೆ ಆಗಮಿಸುವವರಿದ್ದರು. ಕೆಲ ಬಿಜೆಪಿ ನಾಯಕರನ್ನು ಒಳಗೆ ಬಿಡಲು ರೈತ ಪ್ರತಿಭಟನಾಕಾರರು ತಡೆವೊಡ್ಡಿದ್ದಾರೆ. ಕೆಲವರು ಹೋಟೆಲ್​ ಒಳ ನುಗ್ಗಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಬಿಜೆಪಿ ನಾಯಕರು ಹೋಟೆಲ್​ ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೇಳಿ ಬಂದಿದೆ.

ಈ ಹೋಟೆಲ್​ ಬಿಜೆಪಿ ಕಾರ್ಯಕರ್ತನೋರ್ವನಿಗೆ ಸೇರಿದ್ದಾಗಿದೆ. ಇವರು ಚಿಕನ್​ ಉತ್ಪನ್ನ ತಯಾರಿಸುವ ಉದ್ಯಮ ಕೂಡ ನಡೆಸುತ್ತಿದ್ದಾರೆ.ಈ ಉತ್ಪನ್ನಗಳನ್ನು ಈಗ ಬ್ಯಾನ್​ ಮಾಡುವ ಬೆದರಿಕೆಯನ್ನು ರೈತರು ಒಡ್ಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಒಂದು ತಿಂಗಳು ಪೂರೈಸಿದೆ. ಸರ್ಕಾರ ಈಗಾಗಲೇ ಕೆಲ ಸುತ್ತಿನ ಮಾತುಕತೆ ನಡೆಸಿದರೂ ಅದು ಫಲ ಕೊಡಲಿಲ್ಲ. ಈ ಬೆನ್ನಲ್ಲೇ ಪ್ರತಿಭಟನಾ ರೈತರು, ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ರವಾನೆ ಮಾಡಿದ್ದರು.

ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ: ಪ್ರತಿಭಟನಾ ರೈತರ ಸಂದೇಶ

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!