AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​ನಲ್ಲಿ ಬಿಜೆಪಿ ಕಾರ್ಯಕ್ರಮ: ರೈತ ಪ್ರತಿಭಟನಾಕಾರರನ್ನು ನೋಡಿ ಹಿಂಬಾಗಿಲಿನಿಂದ ಪರಾರಿಯಾದ ನಾಯಕರು!

ಪ್ರತಿಭಟನಾನಿರತ ರೈತರು ಹೋಟೆಲ್​ಗೆ ಮುತ್ತಿಗೆ ಹಾಕಲು ಪ್ರಯತನ್ನಿಸಿದ್ದು, ಬಿಜೆಪಿ ನಾಯಕರು ಹಿಂಬಾಗಿಲಿನಿಂದ ಓಡಿ ಹೋಗಿದ್ದಾರೆ!

ಹೋಟೆಲ್​ನಲ್ಲಿ ಬಿಜೆಪಿ ಕಾರ್ಯಕ್ರಮ: ರೈತ ಪ್ರತಿಭಟನಾಕಾರರನ್ನು ನೋಡಿ ಹಿಂಬಾಗಿಲಿನಿಂದ ಪರಾರಿಯಾದ ನಾಯಕರು!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 25, 2020 | 9:42 PM

Share

ಅಮೃತ​ಸರ: ಇಂದು ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಈ ವಿಶೇಷ ದಿನವನ್ನು ಆಚರಣೆ ಮಾಡಲು ಪಂಜಾಬ್​ ಬಿಜೆಪಿ ನಾಯಕರು ಹೋಟೆಲ್​ ಒಂದರಲ್ಲಿ ಸೇರಿದ್ದರು. ಈ ವೇಳೆ ಪ್ರತಿಭಟನಾನಿರತ ರೈತರು ಹೋಟೆಲ್​ಗೆ ಮುತ್ತಿಗೆ ಹಾಕಲು ಪ್ರಯತನ್ನಿಸಿದ್ದು, ಬಿಜೆಪಿ ನಾಯಕರು ಹಿಂಬಾಗಿಲಿನಿಂದ ಓಡಿ ಹೋಗಿದ್ದಾರೆ!

ಫಾಗ್ವಾರದ ಹೋಟೆಲ್​ ಒಂದರಲ್ಲಿ ಬಿಜೆಪಿ ನಾಯಕರು ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದರು. ಬಿಜೆಪಿ ನಾಯಕರಿಗೆ ಪೊಲೀಸ್​ ಭದ್ರತೆ ಕೂಡ ಇತ್ತು. ಇದನ್ನು ಅರಿತ ಭಾರ್ತಿ ಕಿಸಾನ್​ ಯೂನಿಯನ್​ ಹೋಟೆಲ್​ ಹೊರ ಭಾಗದಲ್ಲಿ ಪ್ರತಿಭಟೆ ನಡೆಸಿದ್ದಾರೆ.

ಕೆಲವರು ಒಳಗೆ ಸೇರಿದ್ದರೆ, ಇನ್ನೂ ಕೆಲವರು ಕಾರ್ಯಕ್ರಮಕ್ಕೆ ಆಗಮಿಸುವವರಿದ್ದರು. ಕೆಲ ಬಿಜೆಪಿ ನಾಯಕರನ್ನು ಒಳಗೆ ಬಿಡಲು ರೈತ ಪ್ರತಿಭಟನಾಕಾರರು ತಡೆವೊಡ್ಡಿದ್ದಾರೆ. ಕೆಲವರು ಹೋಟೆಲ್​ ಒಳ ನುಗ್ಗಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಬಿಜೆಪಿ ನಾಯಕರು ಹೋಟೆಲ್​ ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೇಳಿ ಬಂದಿದೆ.

ಈ ಹೋಟೆಲ್​ ಬಿಜೆಪಿ ಕಾರ್ಯಕರ್ತನೋರ್ವನಿಗೆ ಸೇರಿದ್ದಾಗಿದೆ. ಇವರು ಚಿಕನ್​ ಉತ್ಪನ್ನ ತಯಾರಿಸುವ ಉದ್ಯಮ ಕೂಡ ನಡೆಸುತ್ತಿದ್ದಾರೆ.ಈ ಉತ್ಪನ್ನಗಳನ್ನು ಈಗ ಬ್ಯಾನ್​ ಮಾಡುವ ಬೆದರಿಕೆಯನ್ನು ರೈತರು ಒಡ್ಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಒಂದು ತಿಂಗಳು ಪೂರೈಸಿದೆ. ಸರ್ಕಾರ ಈಗಾಗಲೇ ಕೆಲ ಸುತ್ತಿನ ಮಾತುಕತೆ ನಡೆಸಿದರೂ ಅದು ಫಲ ಕೊಡಲಿಲ್ಲ. ಈ ಬೆನ್ನಲ್ಲೇ ಪ್ರತಿಭಟನಾ ರೈತರು, ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ರವಾನೆ ಮಾಡಿದ್ದರು.

ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ: ಪ್ರತಿಭಟನಾ ರೈತರ ಸಂದೇಶ

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್