AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಮಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ಬೇಕು. ಈ ದೇಶದ ಶತ್ರುಗಳು ಪಂಜಾಬ್​​ನ ಸುಸ್ಥಿತಿಯನ್ನು ಹಾಳುಗೆಡವಲು ಈಗಾಗಲೇ ಅನೇಕ ಬಾರಿ ಪ್ರಯತ್ನ ಮಾಡಿದ್ದಾರೆ ಎಂದೂ ಪ್ರಧಾನಿ ಮೋದಿಯವರ ಬಳಿ ಹೇಳಿದ್ದಾಗಿ ಭಗವಂತ್​ ಮಾನ್​ ತಿಳಿಸಿದ್ದಾರೆ.

ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​
ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಪಂಜಾಬ್​ ಸಿಎಂ
TV9 Web
| Edited By: |

Updated on:Mar 24, 2022 | 5:16 PM

Share

ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)​ ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಭೇಟಿಯಾಗಿದರು. ಅದಾದ ಬಳಿಕ ಅವರು ದೆಹಲಿ ಸಿಎಂ, ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​​ರನ್ನು ಭೇಟಿಯಾಗುವ ನಿರೀಕ್ಷೆಯಿದೆ. ಭಗವಂತ್ ಮಾನ್ ಮಾರ್ಚ್​ 16ರಂದು ಪಂಜಾಬ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ರಾಜ್ಯಕ್ಕಿದ್ದ ಉಡ್ತಾ ಪಂಜಾಬ್​ ಹಣೆಪಟ್ಟಿಯನ್ನು ತೊಡೆದು, ಭಡ್ತಾ ಪಂಜಾಬ್ (ಅಭಿವೃದ್ಧಿ) ಮಾಡುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಭ್ರಷ್ಟಾಚಾರ ನಿಯಂತ್ರಣಕ್ಕೆ ಈಗಾಗಲೇ ಹೊಸದಾದ ಕ್ರಮವನ್ನೂ ಕೈಗೊಂಡಿದ್ದಾರೆ. ಪಂಜಾಬ್​ನ 17ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್​ರಿಗೆ ಪ್ರಧಾನಿ ಮೋದಿ ಶುಭ ಹಾರೈಸಿದ್ದರು, ಕೇಂದ್ರ ಮತ್ತು ಪಂಜಾಬ್ (Punjab) ರಾಜ್ಯ ಸರ್ಕಾರಗಳು ಒಟ್ಟಾಗಿ ರಾಜ್ಯದ ಅಭಿವೃದ್ಧಿ ಮಾಡೋಣ ಎಂದಿದ್ದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಮಾತನಾಡಿದ ಭಗವಂತ್ ಮಾನ್​, ರಾಷ್ಟ್ರೀಯ ಭದ್ರತೆ ನಿಭಾಯಿಸುವುದಕ್ಕೆ ನಮಗೆ ಕೇಂದ್ರದ ಬೆಂಬಲದ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಹೇಳಿದ್ದೇನೆ. ಪಂಜಾಬ್​​ನ ಆರ್ಥಿಕ ಸ್ಥಿತಿ ತಳಮಟ್ಟದಲ್ಲಿದ್ದು ಚಿಂತಾಜನಕವೆನಿಸಿದೆ. ಹೀಗಾಗಿ ಇನ್ನೆರಡು ವರ್ಷಗಳ ಕಾಲ ತಲಾ 50 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್​ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರದ ಎದುರು ಬೇಡಿಕೆ ಇಟ್ಟಿದ್ದೇನೆ. ಹಣ ಬಿಡುಗಡೆ ಮಾಡಿದರೆ ನಮ್ಮ ಆರ್ಥಿಕತೆ ಸ್ವಲ್ಪ ಚೇತರಿಕೆ ಕಾಣಬಹುದು ಎಂದ ಮಾನ್​ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಮಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ಬೇಕು. ಈ ದೇಶದ ಶತ್ರುಗಳು ಪಂಜಾಬ್​​ನ ಸುಸ್ಥಿತಿಯನ್ನು ಹಾಳುಗೆಡವಲು ಈಗಾಗಲೇ ಅನೇಕ ಬಾರಿ ಪ್ರಯತ್ನ ಮಾಡಿದ್ದಾರೆ. ಆದರೆ ಪಂಜಾಬ್​ನಲ್ಲಿ ಸಾಮಾಜಿಕ ಸಔಹಾರ್ದತೆ, ಬಾಂಧವ್ಯ ಬಲಿಷ್ಠವಾಗಿದೆ. ಅಲ್ಲಿಯ ಜನರು ಶಾಂತಿಯನ್ನು ಬಯಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬಳಿ ಹೇಳಿದ್ದಾಗಿ ಭಗವಂತ್ ಮಾನ್​ ತಿಳಿಸಿದ್ದಾರೆ.  ನಾನು ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆಯೂ ಮನವರಿಕೆ ಮಾಡಿಸಿದ್ದೇನೆ. ಅವರು ಈ ವಿಚಾರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಳಿ ಮಾತನಾಡುತ್ತಾರೆ ಎಂಬ ಆಶಯವಿದೆ. ಹಾಗೇ, ಎಲ್ಲ ವಿಚಾರಗಳಲ್ಲೂ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ಕೊಟ್ಟಿದ್ದಾರೆ ಎಂದೂ ತಿಳಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​​ಗೆ ಪ್ರಧಾನಿ ಮೋದಿ ಅಭಿನಂದನೆ; ಬಿರೆನ್​​ ಸಿಂಗ್​​, ಪ್ರಮೋದ್​ ಸಾವಂತ್​ಗೂ ಶುಭ ಹಾರೈಕೆ

Published On - 5:15 pm, Thu, 24 March 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್