AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಮಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ಬೇಕು. ಈ ದೇಶದ ಶತ್ರುಗಳು ಪಂಜಾಬ್​​ನ ಸುಸ್ಥಿತಿಯನ್ನು ಹಾಳುಗೆಡವಲು ಈಗಾಗಲೇ ಅನೇಕ ಬಾರಿ ಪ್ರಯತ್ನ ಮಾಡಿದ್ದಾರೆ ಎಂದೂ ಪ್ರಧಾನಿ ಮೋದಿಯವರ ಬಳಿ ಹೇಳಿದ್ದಾಗಿ ಭಗವಂತ್​ ಮಾನ್​ ತಿಳಿಸಿದ್ದಾರೆ.

ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​
ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಪಂಜಾಬ್​ ಸಿಎಂ
TV9 Web
| Edited By: |

Updated on:Mar 24, 2022 | 5:16 PM

Share

ಪಂಜಾಬ್ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann)​ ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಭೇಟಿಯಾಗಿದರು. ಅದಾದ ಬಳಿಕ ಅವರು ದೆಹಲಿ ಸಿಎಂ, ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​​ರನ್ನು ಭೇಟಿಯಾಗುವ ನಿರೀಕ್ಷೆಯಿದೆ. ಭಗವಂತ್ ಮಾನ್ ಮಾರ್ಚ್​ 16ರಂದು ಪಂಜಾಬ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ರಾಜ್ಯಕ್ಕಿದ್ದ ಉಡ್ತಾ ಪಂಜಾಬ್​ ಹಣೆಪಟ್ಟಿಯನ್ನು ತೊಡೆದು, ಭಡ್ತಾ ಪಂಜಾಬ್ (ಅಭಿವೃದ್ಧಿ) ಮಾಡುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲ, ಭ್ರಷ್ಟಾಚಾರ ನಿಯಂತ್ರಣಕ್ಕೆ ಈಗಾಗಲೇ ಹೊಸದಾದ ಕ್ರಮವನ್ನೂ ಕೈಗೊಂಡಿದ್ದಾರೆ. ಪಂಜಾಬ್​ನ 17ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್​ರಿಗೆ ಪ್ರಧಾನಿ ಮೋದಿ ಶುಭ ಹಾರೈಸಿದ್ದರು, ಕೇಂದ್ರ ಮತ್ತು ಪಂಜಾಬ್ (Punjab) ರಾಜ್ಯ ಸರ್ಕಾರಗಳು ಒಟ್ಟಾಗಿ ರಾಜ್ಯದ ಅಭಿವೃದ್ಧಿ ಮಾಡೋಣ ಎಂದಿದ್ದರು.

ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ಮಾತನಾಡಿದ ಭಗವಂತ್ ಮಾನ್​, ರಾಷ್ಟ್ರೀಯ ಭದ್ರತೆ ನಿಭಾಯಿಸುವುದಕ್ಕೆ ನಮಗೆ ಕೇಂದ್ರದ ಬೆಂಬಲದ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಹೇಳಿದ್ದೇನೆ. ಪಂಜಾಬ್​​ನ ಆರ್ಥಿಕ ಸ್ಥಿತಿ ತಳಮಟ್ಟದಲ್ಲಿದ್ದು ಚಿಂತಾಜನಕವೆನಿಸಿದೆ. ಹೀಗಾಗಿ ಇನ್ನೆರಡು ವರ್ಷಗಳ ಕಾಲ ತಲಾ 50 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್​ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರದ ಎದುರು ಬೇಡಿಕೆ ಇಟ್ಟಿದ್ದೇನೆ. ಹಣ ಬಿಡುಗಡೆ ಮಾಡಿದರೆ ನಮ್ಮ ಆರ್ಥಿಕತೆ ಸ್ವಲ್ಪ ಚೇತರಿಕೆ ಕಾಣಬಹುದು ಎಂದ ಮಾನ್​ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಮಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ಬೇಕು. ಈ ದೇಶದ ಶತ್ರುಗಳು ಪಂಜಾಬ್​​ನ ಸುಸ್ಥಿತಿಯನ್ನು ಹಾಳುಗೆಡವಲು ಈಗಾಗಲೇ ಅನೇಕ ಬಾರಿ ಪ್ರಯತ್ನ ಮಾಡಿದ್ದಾರೆ. ಆದರೆ ಪಂಜಾಬ್​ನಲ್ಲಿ ಸಾಮಾಜಿಕ ಸಔಹಾರ್ದತೆ, ಬಾಂಧವ್ಯ ಬಲಿಷ್ಠವಾಗಿದೆ. ಅಲ್ಲಿಯ ಜನರು ಶಾಂತಿಯನ್ನು ಬಯಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬಳಿ ಹೇಳಿದ್ದಾಗಿ ಭಗವಂತ್ ಮಾನ್​ ತಿಳಿಸಿದ್ದಾರೆ.  ನಾನು ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆಯೂ ಮನವರಿಕೆ ಮಾಡಿಸಿದ್ದೇನೆ. ಅವರು ಈ ವಿಚಾರವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಬಳಿ ಮಾತನಾಡುತ್ತಾರೆ ಎಂಬ ಆಶಯವಿದೆ. ಹಾಗೇ, ಎಲ್ಲ ವಿಚಾರಗಳಲ್ಲೂ ಸಹಕಾರ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ಕೊಟ್ಟಿದ್ದಾರೆ ಎಂದೂ ತಿಳಿಸಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​​ಗೆ ಪ್ರಧಾನಿ ಮೋದಿ ಅಭಿನಂದನೆ; ಬಿರೆನ್​​ ಸಿಂಗ್​​, ಪ್ರಮೋದ್​ ಸಾವಂತ್​ಗೂ ಶುಭ ಹಾರೈಕೆ

Published On - 5:15 pm, Thu, 24 March 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು