AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್ ಚನ್ನಿ ಮಗನ ಸರಳ ವಿವಾಹ; ಮದುವೆಗೆ ಗೈರಾದ ನವಜೋತ್ ಸಿಂಗ್ ಸಿಧು

ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ತಮ್ಮ ಮಗನ ಮದುವೆಯಲ್ಲಿ ಸರಳವಾದ ಉಡುಗೆ ಧರಿಸಿ, ಹೆಂಡತಿ, ಮಗ-ಸೊಸೆ ಜೊತೆ ನೆಲದ ಮೇಲೆ ಕುಳಿತು ಸರಳವಾಗಿ ಊಟ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ.

ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್ ಚನ್ನಿ ಮಗನ ಸರಳ ವಿವಾಹ; ಮದುವೆಗೆ ಗೈರಾದ ನವಜೋತ್ ಸಿಂಗ್ ಸಿಧು
ಮಗನ ಮದುವೆಯಲ್ಲಿ ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್ ಚನ್ನಿ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 11, 2021 | 4:34 PM

Share

ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಸರಳವಾಗಿ ತಮ್ಮ ಮಗನ ಮದುವೆ ಮಾಡಿದ್ದಾರೆ. ಚರಣ್​ಜಿತ್ ಸಿಂಗ್ ಚನ್ನಿ ಅವರ ಸರಳ ಮದುವೆಯಲ್ಲಿ ಪಂಜಾಬ್​ನ ಕಾಂಗ್ರೆಸ್ ನಾಯಕರು, ಸಚಿವರು ಆಗಮಿಸಿ ಶುಭಾಶಯ ಕೋರಿದ್ದಾರೆ. ಆದರೆ, ಈ ಮದುವೆಯಲ್ಲಿ ನವಜೋತ್ ಸಿಂಗ್ ಸಿಧು ಪಾಲ್ಗೊಳ್ಳದೆ ಇರುವುದು ಮತ್ತೊಮ್ಮೆ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಚರಣ್​ಜಿತ್ ಸಿಂಗ್ ಚನ್ನಿ ತಮ್ಮ ಮಗನ ಮದುವೆಯಲ್ಲಿ ಸರಳವಾದ ಉಡುಗೆ ಧರಿಸಿ, ಹೆಂಡತಿ, ಮಗ-ಸೊಸೆ ಜೊತೆ ನೆಲದ ಮೇಲೆ ಕುಳಿತು ಸರಳವಾಗಿ ಊಟ ಮಾಡುತ್ತಿರುವ ಫೋಟೋಗಳು ಭಾರೀ ವೈರಲ್ ಆಗಿವೆ. ಸಾಮಾನ್ಯವಾಗಿ ರಾಜಕಾರಣಿಗಳ ಮಕ್ಕಳ ಮದುವೆ ಬಹಳ ವೈಭವದಿಂದ ಇರುತ್ತದೆ. ಆದರೆ, ಚರಣ್​ಜಿತ್ ಸಿಂಗ್ ಚನ್ನಿ ಅವರ ಮಗನ ಸರಳವಾದ ಮದುವೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಚರಣ್​ಜಿತ್ ಸಿಂಗ್ ಅವರ ಮಗ ನವಜಿತ್ ಸಿಂಗ್ ಇಂಜಿನಿಯರ್ ಆಗಿರುವ ಸಿಮ್ರಾನ್​ಧೀರ್ ಕೌರ್ ಅವರೊಂದಿಗೆ ಮದುವೆಯಾಗಿದ್ದಾರೆ. ಮದುವೆ ಮಂಟಪಕ್ಕೆ ಸಿಎಂ ಚರಣ್​ಜಿತ್ ಸಿಂಗ್ ಅವರೇ ಕಾರು ಚಲಾಯಿಸಿಕೊಂಡು ಮಗನನ್ನು ಮದುವೆ ಮಂಟಪಕ್ಕೆ ಕರೆದುಕೊಂಡು ಬಂದಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ಕೆಲವೇ ಆಪ್ತರನ್ನು ಮಾತ್ರ ಮದುವೆಗೆ ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪಂಜಾಬ್​ನ ಸಚಿವರು, ಕಾಂಗ್ರೆಸ್ ನಾಯಕರು ಬಂದಿದ್ದರೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಮಾಜಿ ಸಿಎಂ ಅಮರೀಂದರ್ ಸಿಂಗ್, ಸುನಿಲ್ ಜಕ್ಕರ್ ಮಾತ್ರ ಗೈರಾಗಿದ್ದರು. ಇದರಿಂದ ನವಜೋತ್ ಸಿಂಗ್ ಸಿಧು ಹಾಗೂ ಸರ್ಕಾರದ ನಡುವೆ ಉತ್ತಮ ಸಂಬಂಧವಿಲ್ಲ ಎಂಬ ಅನುಮಾನ ಮತ್ತೆ ಶುರುವಾಗಿದೆ.

ಮದುವೆಗೂ ಮುಂಚಿನ ಕಾರ್ಯಕ್ರಮಗಳನ್ನು ಗುರುದ್ವಾರದಲ್ಲಿ ನಡೆಸಲಾಗಿದ್ದು, ಬಿಗಿ ಭದ್ರತೆಯೊಂದಿಗೆ ಸಣ್ಣದಾಗಿ ಮದುವೆ ನೆರವೇರಿಸಲಾಗಿದೆ. ನಂತರ ಸಂಜೆ ಆಪ್ತರಿಗಾಗಿ ರಿಸೆಪ್ಷನ್ ಕೂಡ ಆಯೋಜಿಸಲಾಗಿತ್ತು. ಒಟ್ಟಾರೆ, ಚರಣ್​ಜಿತ್ ಸಿಂಗ್ ಚನ್ನಿ ಅವರ ಮಗನ ಮದುವೆಯ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಾಂಗ್ರೆಸ್​ಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಹೊಸ ಪಕ್ಷ ಕಟ್ಟುತ್ತಾರೆಂಬ ಸುದ್ದಿ ಹರಿಡಾಡುತ್ತಿದೆ. ಹಾಗೇ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಆ ರಾಜೀನಾಮೆಯನ್ನು ಇನ್ನೂ ಕಾಂಗ್ರೆಸ್ ಹೈಕಮಾಂಡ್ ಸ್ವೀಕರಿಸಿಲ್ಲ.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧುವನ್ನು ಮಾತುಕತೆಗೆ ಆಹ್ವಾನಿಸಿದ ಪಂಜಾಬ್ ಸಿಎಂ ಚರಣ್​​ಜಿತ್ ಸಿಂಗ್ ಚನ್ನಿ

Navjot Singh Sidhu ನೈತಿಕತೆಯೊಂದಿಗೆ ರಾಜಿ ಮಾಡಲು ಸಾಧ್ಯವಿಲ್ಲ: ವಿಡಿಯೊ ಸಂದೇಶ ಬಿಡುಗಡೆ ಮಾಡಿದ ನವಜೋತ್ ಸಿಂಗ್ ಸಿಧು

Published On - 4:30 pm, Mon, 11 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ