AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಚೆನ್ನಾಗಿದೆ; ಜಲಿಯನ್ ವಾಲಾಬಾಗ್ ನವೀಕರಣ ಬಗ್ಗೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

Amarinder Singh: "ಏನು ತೆಗೆದುಹಾಕಲಾಗಿದೆ ಎಂದು ನನಗೆ ಗೊತ್ತಿಲ್ಲ. ನನಗೆ ಇದು ತುಂಬಾ ಚೆನ್ನಾಗಿ ಕಾಣುತ್ತದೆ" ಎಂದು ಸಿಂಗ್ ಹೇಳಿದ್ದಾರೆ. ಇತ್ತ ರಾಹುಲ್ ಗಾಂಧಿ "ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಅವಮಾನ" ಎಂದು ಕರೆದಿದ್ದು ಸಿಂಗ್ ರಾಹುಲ್​​ಗಿಂತ ಭಿನ್ನವಾದ ನಿಲುವು ವ್ಯಕ್ತಪಡಿಸಿದ್ದಾರೆ.

ನೋಡಲು ಚೆನ್ನಾಗಿದೆ; ಜಲಿಯನ್ ವಾಲಾಬಾಗ್ ನವೀಕರಣ ಬಗ್ಗೆ ಪಂಜಾಬ್ ಸಿಎಂ ಅಮರಿಂದರ್ ಸಿಂಗ್
ಕ್ಯಾಪ್ಟನ್ ಅಮರಿಂದರ್ ಸಿಂಗ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 31, 2021 | 7:23 PM

Share

ದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಜಲಿಯನ್ ವಾಲಾಬಾಗ್ ನವೀಕರಣವನ್ನು ಬೆಂಬಲಿಸಿ ಮಾತನಾಡಿದ್ದಾರೆ. ಜಲಿಯನ್ ವಾಲಾಬಾಗ್ ನವೀಕರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಇತಿಹಾಸಕಾರರು ಮತ್ತು ನಾಗರಿಕ ಸಮಾಜದಿಂದ ಟೀಕೆಗಳನ್ನು ಎದುರಿಸುತ್ತಿದೆ. ಜಲಿಯನ್ ವಾಲಾಬಾಗ್ ನವೀಕರಣವನ್ನು ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರ ಯಾಕೆ ತಡೆದಿಲ್ಲ ಎಂಬ ಪ್ರಶ್ನೆಗಳೂ ಕೇಳಿಬಂದಿದೆ. ಲೇಸರ್ ಶೋ ಸೇರಿದಂತೆ, ಸ್ಟ್ಯಾಕ್ ಕಾರಿಡಾರ್ ಮೊದಲಾದ ನವೀಕರಣದಿಂದಾಗಿ ಜನರ ತ್ಯಾಗವನ್ನು ಕ್ಷುಲ್ಲಕವಾಗಿಸಿದೆ ಮತ್ತು ಪಂಜಾಬ್ ಸರ್ಕಾರ ಅದನ್ನು ಆರಂಭದಲ್ಲಿಯೇ ನಿಲ್ಲಿಸಬೇಕಾಗಿತ್ತು ಎಂದು ಹಲವರು ಹೇಳಿದ್ದಾರೆ. “ಏನು ತೆಗೆದುಹಾಕಲಾಗಿದೆ ಎಂದು ನನಗೆ ಗೊತ್ತಿಲ್ಲ. ನನಗೆ ಇದು ತುಂಬಾ ಚೆನ್ನಾಗಿ ಕಾಣುತ್ತದೆ” ಎಂದು ಸಿಂಗ್ ಹೇಳಿದ್ದಾರೆ. ಇತ್ತ ರಾಹುಲ್ ಗಾಂಧಿ “ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಅವಮಾನ” ಎಂದು ಕರೆದಿದ್ದು ಸಿಂಗ್ ರಾಹುಲ್​​ಗಿಂತ ಭಿನ್ನವಾದ ನಿಲುವು ವ್ಯಕ್ತಪಡಿಸಿದ್ದಾರೆ.  “ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಇಂತಹ ಅವಮಾನವನ್ನು ಹುತಾತ್ಮರ ಅರ್ಥ ತಿಳಿಯದವರು ಮಾತ್ರ ಮಾಡಬಹುದು. ನಾವು ಈ ಕ್ರೌರ್ಯದ ವಿರುದ್ಧ ಇದ್ದೇವೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

102 ವರ್ಷಗಳ ಹಿಂದೆ ಬ್ರಿಟಿಷ್ ಜನರಲ್ ಡೈಯರ್ ಶಾಂತಿಯುತ ಪ್ರತಿಭಟನೆ ವಿರುದ್ಧ ಗುಂಡು ಹಾರಿಸಿದ್ದ ಜಲಿಯನ್ ವಾಲಾಬಾಗ್ ಈ ನವೀಕರಣದೊಂದಿಗೆ ಘನತೆ, ನಷ್ಟ ಮತ್ತು ಭಯಾನಕತೆಯ ಸ್ಥಳವನ್ನು ಕಸಿದುಕೊಂಡಿದೆ ಎಂದು ಇತರ ವಿರೋಧ ಪಕ್ಷದ ಖಂಡಿಸಿದರು.

ಸಿಪಿಎಂನ ಸೀತಾರಾಂ ಯೆಚೂರಿಯಂತಹ ನಾಯಕರು ಬಲಪಂಥೀಯ ಇತಿಹಾಸವನ್ನು ಉಲ್ಲೇಖಿಸಿ ತೀವ್ರವಾಗಿ ಟೀಕಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಿಂದ ದೂರ ಉಳಿದವರು ಮಾತ್ರ ಇದನ್ನು ಮಾಡಬಹುದು ಎಂದು ಯೆಚೂರಿ ಟ್ವೀಟ್ ಮಾಡಿದ್ದಾರೆ.

ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು “ನೋವು … ನಷ್ಟ (ಮತ್ತು) ದುರಂತದ ಬಗ್ಗೆ ನೆನಪುಗಳನ್ನು ಸುಂದರಗೊಳಿಸುವ “ಅಥವಾ” ಆ ನೆನಪುಗಳನ್ನು “ಮಾರ್ಪಡಿಸುವ ಪ್ರಯತ್ನಗಳು ನಮ್ಮ ಸಾಮೂಹಿಕ ಇತಿಹಾಸಕ್ಕೆ ದೊಡ್ಡ ಹಾನಿಯನ್ನುಂಟು ಮಾಡುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ನಾನೂ ಹುತಾತ್ಮರ ಮಗ, ಈ ಅವಮಾನ ಸಹಿಸುವುದಿಲ್ಲ; ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಣಕ್ಕೆ ರಾಹುಲ್ ಗಾಂಧಿ ಕಿಡಿ

(Punjab CM Amarinder Singh support the renovations at Jallianwala Bagh says Looks Nice)

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!