AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಅಪೋಲೋ ಆಸ್ಪತ್ರೆಗೆ ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲು

ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡುವ ಸುಪ್ರೀಂಕೋರ್ಟ್‌ನ ಆದೇಶದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೆಪ್ಟೆಂಬರ್ 13 ರಿಂದ ದೆಹಲಿಯಲ್ಲಿದ್ದಾರೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ದೆಹಲಿಯ ಅಪೋಲೋ ಆಸ್ಪತ್ರೆಗೆ ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲು
ಭಗವಂತ್ ಮಾನ್
ರಶ್ಮಿ ಕಲ್ಲಕಟ್ಟ
|

Updated on: Sep 18, 2024 | 7:36 PM

Share

ದೆಹಲಿ ಸೆಪ್ಟೆಂಬರ್ 18: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರನ್ನು ಬುಧವಾರ ದೆಹಲಿಯ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ದೆಹಲಿಯಿಂದ ಹಿಂದಿರುಗಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಬಂದ ನಂತರ ಮಾನ್ ಅನಾರೋಗ್ಯಕ್ಕೆ ಒಳಗಾದರು. ಪ್ರೆಸ್ ಕಿ ತಾಖತ್ ವರದಿಯ ಪ್ರಕಾರ ಅವರನ್ನು ಅಪೋಲೋ ಆಸ್ಪತ್ರೆಗೆ ವರ್ಗಾಯಿಸುವ ಮೊದಲು ಚಂಡೀಗಢದಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ IV ಡ್ರಿಪ್ ನೀಡಲಾಗಿದೆ.  ಆಸ್ಪತ್ರೆಯಿಂದ ಮಾನ್ ಅವರ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ನವೀಕರಣಗಳಿಲ್ಲ.

ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡುವ ಸುಪ್ರೀಂಕೋರ್ಟ್‌ನ ಆದೇಶದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸೆಪ್ಟೆಂಬರ್ 13 ರಿಂದ ದೆಹಲಿಯಲ್ಲಿದ್ದಾರೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಕೇಜ್ರಿವಾಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದ ಸೆಪ್ಟೆಂಬರ್ 15 ರ ಭಾನುವಾರದಂದು ಎಎಪಿ ಕಾರ್ಯಕರ್ತರ ಸಭೆಯಲ್ಲೂ ಮಾನ್ ಭಾಗವಹಿಸಿದ್ದರು.  ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕೇಜ್ರಿವಾಲ್ ಅವರ ನಿರ್ಧಾರವನ್ನು “ಕ್ರಾಂತಿಕಾರಿ” ಎಂದು ಮಾನ್ ಬಣ್ಣಿಸಿದ್ದು ಇದು ಅವರ “ಪ್ರಾಮಾಣಿಕತೆ ಮತ್ತು ಜನರಿಗೆ ಬದ್ಧತೆ” ಗೆ ನೀಡಿದ ಮನ್ನಣೆ ಎಂದಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯ ಜನತೆ ಕೇಜ್ರಿವಾಲ್ ಅವರನ್ನು ಬೆಂಬಲಿಸಲಿದ್ದಾರೆ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ಎಎಪಿಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆದಿವೆ, ಆದರೆ ಈ ಪ್ರಯತ್ನಗಳು ಪಕ್ಷವನ್ನು ದುರ್ಬಲಗೊಳಿಸುವಲ್ಲಿ ವಿಫಲವಾಗಿವೆ ಎಂದಿದ್ದಾರೆ ಮಾನ್.

ಎರಡು ದಿನಗಳ ನಂತರ ಕೇಜ್ರಿವಾಲ್ ಭಾನುವಾರ ತಮ್ಮ ರಾಜೀನಾಮೆಯನ್ನು ಘೋಷಿಸಿ, ರಾಷ್ಟ್ರ ರಾಜಧಾನಿಯಲ್ಲಿ ಬೇಗನೆ ಚುನಾವಣೆ ನಡೆಸಬೇಕು. ಸಾರ್ವಜನಿಕರು ತನಗೆ “ಪ್ರಾಮಾಣಿಕತೆಯ ಪ್ರಮಾಣಪತ್ರ” ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 21ರಂದು ದೆಹಲಿ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

ಮಂಗಳವಾರ, ಕೇಜ್ರಿವಾಲ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದ ನಂತರ ಪಕ್ಷದ ಹಿರಿಯ ನಾಯಕ ಅತಿಶಿ ಅವರನ್ನು ದೆಹಲಿಯ ಹೊಸ ಮುಖ್ಯಮಂತ್ರಿಯಾಗಿ ನೇಮಿಸಲು ಆಮ್ ಆದ್ಮಿ ಪಕ್ಷವು ಸರ್ವಾನುಮತದಿಂದ ಒಪ್ಪಿಕೊಂಡಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ