AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagwant Mann: ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ನಿವಾಸದೆದುರು ಕಸ ಸುರಿದಿದ್ದಕ್ಕಾಗಿ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ದಂಡ ವಿಧಿಸಿದೆ.

Bhagwant Mann: ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ
Bhagwant Mann
TV9 Web
| Edited By: |

Updated on: Jul 23, 2022 | 5:57 PM

Share

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ನಿವಾಸದೆದುರು ಕಸ ಸುರಿದಿದ್ದಕ್ಕಾಗಿ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ದಂಡ ವಿಧಿಸಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಟಾಲಿಯನ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಹರ್ಜಿಂದರ್ ಸಿಂಗ್ ಅವರ ಹೆಸರಿನಲ್ಲಿ ಚಲನ್ ನೀಡಲಾಗಿದೆ.

ಸ್ಥಳೀಯ ಬಿಜೆಪಿ ಪುರಸಭಾ ಸದಸ್ಯ ಮಹೇಶಿಂದರ್ ಸಿಂಗ್ ಸಿಧು ಮಾತನಾಡಿ, ಕೆಲ ದಿನಗಳಿಂದ ಮುಖ್ಯಮಂತ್ರಿ ನಿವಾಸದ ಮನೆ ಸಂಖ್ಯೆ-7ರ ಹಿಂಭಾಗದಲ್ಲಿ ಸಿಬ್ಬಂದಿಯಿಂದ ಕಸ ವಿಲೇವಾರಿ ಕುರಿತು ನಿವಾಸಿಗಳಿಂದ ದೂರುಗಳು ಬರುತ್ತಿತ್ತು. ಮನೆ ಸಂಖ್ಯೆ 44, 45, 6 ಮತ್ತು 7 ಮುಖ್ಯಮಂತ್ರಿ ನಿವಾಸದ ಭಾಗವಾಗಿದೆ ಎಂದು ಹೇಳಿದರು.

ಇನ್ನು ಸಿಎಂ ನಿವಾಸದ ಸಿಬ್ಬಂದಿಗೂ ಮನೆಯಿಂದ ಹೊರಗೆ ತ್ಯಾಜ್ಯ ಎಸೆಯದಂತೆ ಹಲವು ಬಾರಿ ಮನವಿ ಮಾಡಿದ್ದರೂ ನಿಲ್ಲಿಸಿಲ್ಲ ಎಂದರು. ಹೀಗಾಗಿ ಚಲನ್ ನೀಡಲಾಗಿದೆ ಎಂದರು. ಮನೆ ಸಂಖ್ಯೆ 44, 45, 6 ಮತ್ತು 7 ಮುಖ್ಯಮಂತ್ರಿಗಳ ನಿವಾಸದ ಭಾಗವಾಗಿದೆ ಎಂದು ಬಿಜೆಪಿ ನಾಯಕ ಹೇಳಿದರು.

ಕಸ ಹಾಕುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬರುತ್ತಿದ್ದ ಹಿನ್ನೆಲೆ ಚಂಡೀಗಢ ನಗರ ಪಾಲಿಕೆ ಶನಿವಾರ ಬೆಳಗ್ಗೆ 10 ಸಾವಿರ ರೂ. ದಂಡದ ಚಲನ್‌ ನೀಡಿದೆ. ಅಂದಹಾಗೆ, ಈ ಚಲನ್‌ ನೀಡಿರುವುದು ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಹೆಸರಿನಲ್ಲಿ ಅಲ್ಲ.

ಬದಲಾಗಿ ಕೇಂದ್ರ ಮೀಸಲು ಪೊಲೀಸ್‌ ಪಡೆ ಬೆಟಾಲಿಯನ್‌ ಡೆಪ್ಯುಟಿ ಸೂಪರಿಟೆಂಡೆಂಟ್‌ ಆಫ್‌ ಪೊಲೀಸ್‌ ಹರ್ಜಿಂದರ್‌ ಸಿಂಗ್ ಹೆಸರಿನಲ್ಲಿ ಎಂಬುದು ಗೊತ್ತಾಗಿದೆ. ಮನೆ ನಂಬರ್ – 7, ಸೆಕ್ಟರ್ – 2, ಚಂಡೀಗಢ ಎಂಬ ಮನೆಯ ವಿಳಾಸಕ್ಕೆ ಈ 10 ಸಾವಿರ ರೂ. ದಂಡ ಮೊತ್ತದ ಚಲನ್‌ ಅನ್ನು ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?