AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagwant Mann: ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ನಿವಾಸದೆದುರು ಕಸ ಸುರಿದಿದ್ದಕ್ಕಾಗಿ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ದಂಡ ವಿಧಿಸಿದೆ.

Bhagwant Mann: ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ
Bhagwant Mann
TV9 Web
| Edited By: |

Updated on: Jul 23, 2022 | 5:57 PM

Share

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ನಿವಾಸದೆದುರು ಕಸ ಸುರಿದಿದ್ದಕ್ಕಾಗಿ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ದಂಡ ವಿಧಿಸಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಟಾಲಿಯನ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಹರ್ಜಿಂದರ್ ಸಿಂಗ್ ಅವರ ಹೆಸರಿನಲ್ಲಿ ಚಲನ್ ನೀಡಲಾಗಿದೆ.

ಸ್ಥಳೀಯ ಬಿಜೆಪಿ ಪುರಸಭಾ ಸದಸ್ಯ ಮಹೇಶಿಂದರ್ ಸಿಂಗ್ ಸಿಧು ಮಾತನಾಡಿ, ಕೆಲ ದಿನಗಳಿಂದ ಮುಖ್ಯಮಂತ್ರಿ ನಿವಾಸದ ಮನೆ ಸಂಖ್ಯೆ-7ರ ಹಿಂಭಾಗದಲ್ಲಿ ಸಿಬ್ಬಂದಿಯಿಂದ ಕಸ ವಿಲೇವಾರಿ ಕುರಿತು ನಿವಾಸಿಗಳಿಂದ ದೂರುಗಳು ಬರುತ್ತಿತ್ತು. ಮನೆ ಸಂಖ್ಯೆ 44, 45, 6 ಮತ್ತು 7 ಮುಖ್ಯಮಂತ್ರಿ ನಿವಾಸದ ಭಾಗವಾಗಿದೆ ಎಂದು ಹೇಳಿದರು.

ಇನ್ನು ಸಿಎಂ ನಿವಾಸದ ಸಿಬ್ಬಂದಿಗೂ ಮನೆಯಿಂದ ಹೊರಗೆ ತ್ಯಾಜ್ಯ ಎಸೆಯದಂತೆ ಹಲವು ಬಾರಿ ಮನವಿ ಮಾಡಿದ್ದರೂ ನಿಲ್ಲಿಸಿಲ್ಲ ಎಂದರು. ಹೀಗಾಗಿ ಚಲನ್ ನೀಡಲಾಗಿದೆ ಎಂದರು. ಮನೆ ಸಂಖ್ಯೆ 44, 45, 6 ಮತ್ತು 7 ಮುಖ್ಯಮಂತ್ರಿಗಳ ನಿವಾಸದ ಭಾಗವಾಗಿದೆ ಎಂದು ಬಿಜೆಪಿ ನಾಯಕ ಹೇಳಿದರು.

ಕಸ ಹಾಕುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬರುತ್ತಿದ್ದ ಹಿನ್ನೆಲೆ ಚಂಡೀಗಢ ನಗರ ಪಾಲಿಕೆ ಶನಿವಾರ ಬೆಳಗ್ಗೆ 10 ಸಾವಿರ ರೂ. ದಂಡದ ಚಲನ್‌ ನೀಡಿದೆ. ಅಂದಹಾಗೆ, ಈ ಚಲನ್‌ ನೀಡಿರುವುದು ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಹೆಸರಿನಲ್ಲಿ ಅಲ್ಲ.

ಬದಲಾಗಿ ಕೇಂದ್ರ ಮೀಸಲು ಪೊಲೀಸ್‌ ಪಡೆ ಬೆಟಾಲಿಯನ್‌ ಡೆಪ್ಯುಟಿ ಸೂಪರಿಟೆಂಡೆಂಟ್‌ ಆಫ್‌ ಪೊಲೀಸ್‌ ಹರ್ಜಿಂದರ್‌ ಸಿಂಗ್ ಹೆಸರಿನಲ್ಲಿ ಎಂಬುದು ಗೊತ್ತಾಗಿದೆ. ಮನೆ ನಂಬರ್ – 7, ಸೆಕ್ಟರ್ – 2, ಚಂಡೀಗಢ ಎಂಬ ಮನೆಯ ವಿಳಾಸಕ್ಕೆ ಈ 10 ಸಾವಿರ ರೂ. ದಂಡ ಮೊತ್ತದ ಚಲನ್‌ ಅನ್ನು ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ