AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagwant Mann: ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ನಿವಾಸದೆದುರು ಕಸ ಸುರಿದಿದ್ದಕ್ಕಾಗಿ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ದಂಡ ವಿಧಿಸಿದೆ.

Bhagwant Mann: ಪಂಜಾಬ್ ಸಿಎಂ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ
Bhagwant Mann
TV9 Web
| Edited By: |

Updated on: Jul 23, 2022 | 5:57 PM

Share

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ 10 ಸಾವಿರ ರೂ. ದಂಡ ವಿಧಿಸಲಾಗಿದೆ. ನಿವಾಸದೆದುರು ಕಸ ಸುರಿದಿದ್ದಕ್ಕಾಗಿ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ದಂಡ ವಿಧಿಸಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಟಾಲಿಯನ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಹರ್ಜಿಂದರ್ ಸಿಂಗ್ ಅವರ ಹೆಸರಿನಲ್ಲಿ ಚಲನ್ ನೀಡಲಾಗಿದೆ.

ಸ್ಥಳೀಯ ಬಿಜೆಪಿ ಪುರಸಭಾ ಸದಸ್ಯ ಮಹೇಶಿಂದರ್ ಸಿಂಗ್ ಸಿಧು ಮಾತನಾಡಿ, ಕೆಲ ದಿನಗಳಿಂದ ಮುಖ್ಯಮಂತ್ರಿ ನಿವಾಸದ ಮನೆ ಸಂಖ್ಯೆ-7ರ ಹಿಂಭಾಗದಲ್ಲಿ ಸಿಬ್ಬಂದಿಯಿಂದ ಕಸ ವಿಲೇವಾರಿ ಕುರಿತು ನಿವಾಸಿಗಳಿಂದ ದೂರುಗಳು ಬರುತ್ತಿತ್ತು. ಮನೆ ಸಂಖ್ಯೆ 44, 45, 6 ಮತ್ತು 7 ಮುಖ್ಯಮಂತ್ರಿ ನಿವಾಸದ ಭಾಗವಾಗಿದೆ ಎಂದು ಹೇಳಿದರು.

ಇನ್ನು ಸಿಎಂ ನಿವಾಸದ ಸಿಬ್ಬಂದಿಗೂ ಮನೆಯಿಂದ ಹೊರಗೆ ತ್ಯಾಜ್ಯ ಎಸೆಯದಂತೆ ಹಲವು ಬಾರಿ ಮನವಿ ಮಾಡಿದ್ದರೂ ನಿಲ್ಲಿಸಿಲ್ಲ ಎಂದರು. ಹೀಗಾಗಿ ಚಲನ್ ನೀಡಲಾಗಿದೆ ಎಂದರು. ಮನೆ ಸಂಖ್ಯೆ 44, 45, 6 ಮತ್ತು 7 ಮುಖ್ಯಮಂತ್ರಿಗಳ ನಿವಾಸದ ಭಾಗವಾಗಿದೆ ಎಂದು ಬಿಜೆಪಿ ನಾಯಕ ಹೇಳಿದರು.

ಕಸ ಹಾಕುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬರುತ್ತಿದ್ದ ಹಿನ್ನೆಲೆ ಚಂಡೀಗಢ ನಗರ ಪಾಲಿಕೆ ಶನಿವಾರ ಬೆಳಗ್ಗೆ 10 ಸಾವಿರ ರೂ. ದಂಡದ ಚಲನ್‌ ನೀಡಿದೆ. ಅಂದಹಾಗೆ, ಈ ಚಲನ್‌ ನೀಡಿರುವುದು ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಹೆಸರಿನಲ್ಲಿ ಅಲ್ಲ.

ಬದಲಾಗಿ ಕೇಂದ್ರ ಮೀಸಲು ಪೊಲೀಸ್‌ ಪಡೆ ಬೆಟಾಲಿಯನ್‌ ಡೆಪ್ಯುಟಿ ಸೂಪರಿಟೆಂಡೆಂಟ್‌ ಆಫ್‌ ಪೊಲೀಸ್‌ ಹರ್ಜಿಂದರ್‌ ಸಿಂಗ್ ಹೆಸರಿನಲ್ಲಿ ಎಂಬುದು ಗೊತ್ತಾಗಿದೆ. ಮನೆ ನಂಬರ್ – 7, ಸೆಕ್ಟರ್ – 2, ಚಂಡೀಗಢ ಎಂಬ ಮನೆಯ ವಿಳಾಸಕ್ಕೆ ಈ 10 ಸಾವಿರ ರೂ. ದಂಡ ಮೊತ್ತದ ಚಲನ್‌ ಅನ್ನು ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ